Yuvavahini

SEP 18, 2026 8.00 PM IST

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ 78

“ಸಮಾನತೆಯ ಸಮಾಜದ ಕನಸು ಕಂಡವರು ನಾರಾಯಣಗುರುಗಳು” : ಅರ್ಚನಾ ಎಂ. ಬಂಗೇರ

ಕಟ್ಟೆಮಾರ್, ಸೆ. 18: ಅಸಮಾನತೆ, ಅಜ್ಞಾನ, ಮೂಢನಂಬಿಕೆ ಹಾಗೂ ಸಾಮಾಜಿಕ ಅನ್ಯಾಯಗಳಿಂದ ಮನುಷ್ಯನಿಗೆ ಮುಕ್ತಿ ದೊರೆಯುವುದೇ ನಿಜವಾದ ಸ್ವಾತಂತ್ರ್ಯ ಎಂಬ ವಿಶಾಲ ಚಿಂತನೆಗೆ ಶ್ರೀ ನಾರಾಯಣಗುರುಗಳು ತಮ್ಮ ಜೀವನದ ಮೂಲಕ ದಾರಿ ತೋರಿಸಿದರು ಎಂದು ಬರಹಗಾರ್ತಿ ಅರ್ಚನಾ ಎಂ. ಬಂಗೇರ ಹೇಳಿದರು.

ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ, ಮನೋಜ್ ಕಟ್ಟೆಮಾರ್ ಅವರ ಸಾನಿಧ್ಯದಲ್ಲಿ ನಡೆದ ‘ಗುರುತತ್ವವಾಹಿನಿ’ ಮಾಲಿಕೆ–78ರಲ್ಲಿ ಗುರುಸಂದೇಶ ನೀಡಿದ ಅವರು, ನಾರಾಯಣಗುರುಗಳ ಚಿಂತನೆಗಳು ಸಮಾನತೆ, ಮಾನವೀಯತೆ ಹಾಗೂ ಸಾಮಾಜಿಕ ಪರಿವರ್ತನೆಗೆ ದಾರಿದೀಪವಾಗಿವೆ ಎಂದರು.

ಶಿಕ್ಷಣದಿಂದ ಜ್ಞಾನ, ಸಂಘಟನೆಯಿಂದ ಶಕ್ತಿ ಹಾಗೂ ಆತ್ಮಗೌರವದಿಂದ ಸ್ವಾತಂತ್ರ್ಯ — ಈ ಮೂರು ಮಾರ್ಗಗಳ ಮೂಲಕ ಸಮಾಜವನ್ನು ಮುನ್ನಡೆಸುವ ನಾರಾಯಣಗುರುಗಳ ಸಂದೇಶವು ಇಂದಿನ ಯುವಜನತೆಗೆ ವಿಶೇಷವಾಗಿ ದಾರಿದೀಪವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಕಲ್ಲಡ್ಕ ಬಿಲ್ಲವ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಸಾಲ್ಯಾನ್, ಕೋಶಾಧಿಕಾರಿ ಕಿಶೋರ್ ಕಟ್ಟೆಮಾರ್, ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ಕಾರ್ಯದರ್ಶಿ ಗೀತಾ ಜಗದೀಶ್, ಕೋಶಾಧಿಕಾರಿ ಪ್ರಜಿತ್ ಅಮೀನ್ ಏರಮಲೆ, ನಿರ್ದೇಶಕರಾದ ನವೀನ್ ಕಾರಜೆ, ನವೀನ್ ಕುಡ್ಮೆರ್, ಸುನೀತಾ ಮಾರ್ನಬೈಲ್, ಸದಸ್ಯರಾದ ಯತೀಶ್ ಬೊಳ್ಳಯಿ, ಜಗನಾಥ ಕಲ್ಲಡ್ಕ, ಯಶೋಧರ್ ಕಡಂಬಳಿಕೆ, ಮಧುಸೂದನ್ ಮದ್ವ, ಪ್ರಶಾಂತ್ ಕೊಟ್ಟಾರಿ ಪಾಲು ಮಾಜಿ ಅಧ್ಯಕ್ಷರಾದ ರಾಜೇಶ್ ಸುವರ್ಣ, ಪ್ರೇಮಾನಾಥ ಕರ್ಕೇರ, ಶಿವಾನಂದ ಎಂ, ಅರುಣ್ ಮಹಾಕಾಳಿಬೆಟ್ಟು, ಮತ್ತು ಹರೇಕೃಷ್ಣ ಭಕ್ತವೃಂದ ಸದಸ್ಯರು ಉಪಸ್ಥಿತರಿದ್ದರು. ಭಜನಾ ಸಂಕೀರ್ತನೆ ಯಲ್ಲಿ ಕಾರ್ತಿಕ್ ದೇರಾಜೆ, ಸಾತ್ವಿಕ್ ದೇರಾಜೆ ಸಹಕರಿಸಿದರು ಆತಿಥ್ಯ ವಹಿಸಿದ್ದ ಮನೋಜ್ ಕಟ್ಟೆಮಾರ್ ಆಗಮಿಸಿದ ಸರ್ವರಿಗೂ ಕ್ರತಜ್ಞತೆ ಸಲ್ಲಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಮಹೇಶ್ ಪೂಜಾರಿ ಬೊಳ್ಳಾಯಿ ಧನ್ಯವಾದ ನೀಡಿದರು. ಅಧ್ಯಕ್ಷರಾದ ಕಿರಣ್ ರಾಜ್ ಪೂಂಜರಕೊಡಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!