ಯುವವಾಹಿನಿ(ರಿ) ಪುತ್ತೂರು ಘಟಕ

ಪುತ್ತೂರು ಘಟಕದ ಪದಗ್ರಹಣ ಕಾರ್ಯಕ್ರಮ

ವಿದ್ಯೆ, ಉದ್ಯೋಗ ಮತ್ತು ಸಂಪರ್ಕವೆಂಬ ನಾರಾಯಣ ಗುರುಗಳ ತತ್ವದಂತೆ ಯುವವಾಹಿನಿ ಸದಸ್ಯರು ಕೆಲಸ ಮಾಡುತ್ತಿದ್ದು ಜನರ ಅನಿಸಿಕೆ ಹಾಗೂ ನಿರೀಕ್ಷೆಯನ್ನು ಹುಸಿಗೊಳಿಸಲಿಲ್ಲ. ಯುವವಾಹಿನಿ ಯಂತೆ ಪ್ರತಿಯೊಂದು ಸಂಘಟನೆಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಸಂಘಟನೆಗಳಿಗೆ ನಿಜವಾದ ಅರ್ಥ ಹಾಗೂ ಬೆಲೆ ಸಿಗುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಸಂತೋಷ್ ಕುಮಾರ್‌ರವರು ಹೇಳಿದರು.

ಅವರು ಜು. 24 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2016-17 ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧನೆ ಮಾಡಿ ಮಾತನಾಡಿದರು. ಯುವವಾಹಿನಿ ಸಂಸ್ಥೆಯು ಶಿಸ್ತುಬದ್ಧ ಸಂಸ್ಥೆಯಾಗಿದ್ದು ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡುತ್ತಾ, ಸಹಕರಿಸುತ್ತಾ ಯುವಜನತೆ ಮುಂದೆ ಬರುವಲ್ಲಿ ಪ್ರೋತ್ಸಾಹ ನೀಡಿ ಸತ್ಪ್ರಜೆಗಳನ್ನಾಗಿ ಮಾಡುವಲ್ಲಿ ಶ್ರಮಿಸುತ್ತಿದೆ. 22 ಘಟಕಗಳ ಪೈಕಿ ಪುತ್ತೂರು ಯುವವಾಹಿನಿ ಘಟಕವು ಕಾರ್ಯಕ್ರಮವನ್ನು ಏರ್ಪಡಿಸುವಾಗ ಸಭಾಂಗಣವೇ ಕಿಕ್ಕಿರಿದು ತುಂಬಿ ತುಳುಕಾಡುವುದನ್ನು ನಾನು ಎಲ್ಲಿಯೂ ನೋಡಿಲ್ಲ ಎಂದ ಅವರು ಈ ನಿಟ್ಟಿನಲ್ಲಿ ಯಶಸ್ವಿ ನಾಯಕ ಶಶಿಧರ್ ಕಿನ್ನಿಮಜಲುರವರ ಅಧ್ಯಕ್ಷತೆಯಲ್ಲಿ ಸಮಾಜ ಬಾಂಧವರ ನಿರೀಕ್ಷೆಯನ್ನೂ ಮೀರಿ ಕಳೆದ ವರ್ಷ ದಾಖಲೆಯ, ಫಲದಾಯಕ ಕಾರ್ಯಕ್ರಮ ಹಮ್ಮಿಕೊಂಡಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಸಂಘಟನೆಗಳು ಯುವಸಮುದಾಯವನ್ನು ಒಗ್ಗೂಡಿಸಿ, ನಾಯಕತ್ವ ಗುಣವನ್ನು ಬೆಳೆಸಿ – ಜಯಂತ್ ನಡುಬೈಲು

ಕಾರ್ಯಕ್ರಮವನ್ನು ಉದ್ಘಾಟಿಸಿದ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಜಯಂತ್ ನಡುಬೈಲುರವರು ಮಾತನಾಡಿ, ಬಿಲ್ಲವ ಸಮಾಜ ಯುವಕರ ಕೂಟವಾಗಿದೆ. ಕೂಟದ ಮುಖಾಂತರ ಯುವಕರು ನಾಯಕತ್ವವನ್ನು ಹೊಂದುವಂತರಾಗ ಬೇಕು. 51 ಗ್ರಾಮ ಸಮಿತಿಗಳಲ್ಲೂ ಧಾರ್ಮಿಕ, ಸಾಮಾಜಿಕ, ಆರ್ಥಿಕ ಮತ್ತು ಇನ್ನಿತರ ಕ್ಷೇತ್ರಗಳಲ್ಲಿ ಯುವಸಮುದಾಯ ಮುಂದೆ ಬರಬೇಕು ಎಂದ ಅವರು ಪ್ರಸ್ತುತ ಯುವವಾಹಿನಿ ಸಂಘಟನೆಯು ಹೆಮ್ಮರವಾಗಿ ಬೆಳೆದಿದೆ. ಯುವಸಮುದಾಯ ಸಂಘಟನೆಯಲ್ಲಿ ಗುರುತಿಸಿಕೊಂಡು ಪರಸ್ಪರ ಸಂಪರ್ಕ ದಲ್ಲಿದ್ದಾಗ ಭವಿಷ್ಯದಲ್ಲಿ ಉತ್ತಮ ಉದ್ಯೋಗ ಪ್ರಾಪ್ತಿಯಾಗುವುದು. ಸಂಘಟನೆಗಳು ಯುವಸಮುದಾಯ ಅನ್ಯ ದಾರಿಯನ್ನು ಹಿಡಿಯದಂತೆ ಒಗ್ಗೂಡಿಸಿ ಅವರಲ್ಲಿ ನಾಯಕತ್ವ ಗುಣವನ್ನು ಬೆಳೆಸುವ ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡುವಂತೆ ಪ್ರೇರೇಪಿಸಬೇಕು ಎಂದರು.

ಸಂಘಟನೆ ಮೂಲಕ ಅನುಭವ ಪಡೆದುಕೊಳ್ಳಿ-ಶಶಿಧರ್ ಕಿನ್ನಿಮಜಲು

ನಿರ್ಗಮನ ಅಧ್ಯಕ್ಷ ಶಶಿಧರ್ ಕಿನ್ನಮಜಲುರವರು ಮಾತನಾಡಿ, ಗ್ರಾಮ ಸಮಿತಿಯಲ್ಲಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಯವವಾಹಿನಿ ಸಂಘಟನೆಯಲ್ಲಿ ಸೇರಿಸಿ ಕಾರ್ಯದರ್ಶಿಯಾಗಿ ಆಯ್ಕೆಗೊಳಿಸಿ ಸಮಾಜಮುಖಿ ಚಿಂತನೆಯನ್ನು ಮನಸ್ಸಿನಲ್ಲಿ ಭಿತ್ತಿದವರು ಜಯಂತ್ ನಡುಬೈಲುರರು. ವ್ಯಕ್ತಿ ಸಮಾಜದ ಶಕ್ತಿ, ಸಮಾಜದಲ್ಲಿ ಬೆಳಕಾಗಲು ಸಂಘಟನೆ ಬಹಳ ಮುಖ್ಯವಾಗಿದೆ. ಸಮಾಜ ಬಾಂಧವರು ಕೇವಲ ಹೆಸರಿಗಷ್ಟೇ ಸಂಘಟನೆಯಲ್ಲಿ ಸೇರದೆ ಸಂಘಟನೆಯ ಮೂಲಕ ಅಭಿವೃದ್ಧಿಯ ಅನುಭವವನ್ನು ಪಡೆದುಕೊಂಡು ಹೋಗುವಂತೆ ಆಗಬೇಕು ಎಂದು ಹೇಳಿ ತನ್ನ ಅಧ್ಯಕ್ಷ ಅವಧಿಯಲ್ಲಿ ಸಹಕರಿಸಿದ ಪ್ರತಿಯೊಬ್ಬರಿಗೂ ಸ್ಮರಿಸಿ, ಮುಂದಿನ ಅಧ್ಯಕ್ಷರ ತಂಡಕ್ಕೆ ಶುಭ ಕೋರಿದರು.

ರಾಜ್ಯದಲ್ಲೇ ಪುತ್ತೂರು ಯುವವಾಹಿನಿ ಸಂಘ ಮಾದರಿಯಾಗಿದೆ-ಜಯಶ್ರೀ ಪೆರಿಯಡ್ಕ

ಮುಖ್ಯ ಅತಿಥಿ ಪುತ್ತೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪೆರಿಯಡ್ಕರವರು ಮಾತನಾಡಿ, ನನಗೆ ನೂರು ಜನ ಯುವಕರನ್ನು ಕೊಡಿ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುತ್ತೇನೆ ಎಂದು ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ಚಂದ್ರ ಬೋಸ್‌ರವರು ಹೇಳಿದ ಮಾತಿಗೆ ಪೂರಕವಾಗಿ ಇಂದು ಯುವಕರ ಶಕ್ತಿ ಏನಿದೆ ಎಂಬುದನ್ನು ತೋರಿಸಿಕೊಟ್ಟಿರುವ ಪುತ್ತೂರು ಯವವಾಹಿನಿ ಘಟಕ ರಾಜ್ಯ ಮಟ್ಟದಲ್ಲೇ ಮಾದರಿ ಸಂಘಟನೆಯಾಗಿದೆ. ಮುಂದಿನ ದಿನಗಳಲ್ಲಿ ಸಂಘಟನೆ ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದಲಿ ಎಂದರು.

ಪದಗ್ರಹಣ ಸ್ವೀಕರಿಸಿದ ನೂತನ ಅಧ್ಯಕ್ಷ ಜಯಂತ್ ಪೂಜಾರಿ ಕೆಂಗುಡೇಲುರವರು ಮಾತನಾಡಿ, ತನ್ನನ್ನು ಇಷ್ಟರ ಮಟ್ಟಿಗೆ ಬೆಳೆಸಿದ ಸಂಸ್ಥೆ ಬಿಲ್ಲವ ಸಂಘ ಹಾಗೂ ಯುವವಾಹಿನಿ ಮತ್ತು ಜಯಂತ್ ನಡುಬೈಲು ಹಾಗೂ ಶಶಿಧರ್ ಕಿನ್ನಿಮಜಲುರವರು. ಅನುಭವದ ಕೊರತೆ ಯಿದೆ ಎಂದು ನನಗೆ ಹುದ್ದೆ ಬೇಡವೆಂದಿದ್ದೆ. ಆದರೆ ಜಯಂತ್ ನಡು ಬೈಲುರವರು ಅವಕಾಶ ಬಂದಾಗ ತೆಗೆದುಕೊಳ್ಳಬೇಕು. ಮುಂದೆ ಅವಕಾಶ ಬೇಕೆಂದಾಗ ಸಿಗೋದಿಲ್ಲ ಎಂದು ಹೇಳಿದ್ದರು. ಎಲ್ಲರ ಸಹಕಾರದಿಂದ ಸಂಘಟನೆಯನ್ನು ಅಭಿವೃದ್ಧಿಯತ್ತ ಮುನ್ನಡೆಸುತ್ತೇನೆ ಎಂದು ಹೇಳಿದರು.

ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ವಿಜೇತರಾದ ಮುಕ್ರಂಪಾಡಿ ನಿವಾಸಿ ರಜತ್ ಕುಮಾರ್ ಎನ್.ಎಸ್.ರವರನ್ನು ಅತಿಥಿ ಗಣ್ಯರು ಶಾಲು ಹೊದಿಸಿ ಸನ್ಮಾನಿಸಿದರು. ಸನ್ಮಾನಿತರ ಪರಿಚಯವನ್ನು ಘಟಕದ ಮಾಜಿ ಅಧ್ಯಕ್ಷ ಜಯಂತ್ ಬಾಯಾರುರವರು ನೀಡಿದರು. ವೇದಿಕೆಯಲ್ಲಿ ಪುತ್ತೂರು ಬಿಲ್ಲವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಮಿತ್ ಪರ್ಪುಂಜ ಉಪಸ್ಥಿತರಿದ್ದರು. ಲಹರಿ ಪ್ರಾರ್ಥಿಸಿದರು. ಘಟಕದ ಸಂಚಾಲಕ ಹೊನ್ನಪ್ಪ ಪೂಜಾರಿ ಕೈಂದಾಡಿ ಸ್ವಾಗತಿಸಿ, ನೂತನ ಕಾರ್ಯದರ್ಶಿ ಉದಯ ಕೋಲಾಡಿ ವಂದಿಸಿದರು. ನಿರ್ಗಮನ ಕಾರ್ಯದರ್ಶಿ ಜಯಂತ್ ಪೂಜಾರಿ ಕೆಂಗುಡೇಲು ವರದಿ ವಾಚಿಸಿದರು. ಕೇಶವ ಪೂಜಾರಿ ಮುರ, ಬಾಲಕೃಷ್ಣ ಪಲ್ಲತ್ತಾರು, ವಿಶಾಲಾಕ್ಷಿ ಬನ್ನೂರು, ವಿಶ್ವಜಿತ್ ಅಮ್ಮುಂಜ, ಅವಿನಾಶ್, ನಾರಾಯಣ ಪೂಜಾರಿ ಕುರಿಕ್ಕಾರರವರು ಅತಿಥಿಗಳಿಗೆ ಹೂ ನೀಡಿ ಸ್ವಾಗತಿಸಿದರು. ದೇವಿಕಾ ಬನ್ನೂರು ಹಾಗೂ ವಿಮಲ ತೇಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!