Yuvavahini

JUL 31, 2016 9.23 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ, ಯುವವಾಹಿನಿ(ರಿ) ಉಡುಪಿ ಘಟಕ

ಉಡುಪಿಯಲ್ಲಿ ಹೊಸ ಇತಿಹಾಸ ಬರೆದ ಯುವವಾಹಿನಿ ; ಅಭೂತಪೂರ್ವ ಯಶಸ್ಸು ಕಂಡ 29 ನೇ ವಾರ್ಷಿಕ ಸಮಾವೇಶ

ಸೂರ್ಯ ನಸುನಗುತ್ತಾ ಮೂಡಿ ತುಸು ಹೊತ್ತು ಕಳೆದಿತ್ತಷ್ಟೇ, ಪೂರ್ವ ದಿಗಂತದಲ್ಲಿ ಕೆಂಬಣ್ಣ ಇನ್ನೂ ಮಾಸಿರಲಿಲ್ಲ, ಕರಗಿದ ಮೋಡ ಇಬ್ಬನಿಯಾಗಿ ಹಸಿರೆಲೆಯ ಮೇಲೆ ಇನ್ನೂ ಜಿನುಗುತ್ತಲೇ ಇತ್ತು. ಹಾಡು ಹಕ್ಕಿಗಳ ಕೂಗು ಕೇಳುತ್ತಲೇ ಇನ್ನೂ ನಿಂತಿರಲಿಲ್ಲ. ಆದರೆ ಉಡುಪಿಯ ಪುರಭವನ ಅಷ್ಟರಲ್ಲಿಯೇ ತುಂಬಿ ತುಳುಕುತ್ತಿದ್ದವು. ಬೆಳ್ತಂಗಡಿ, ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳ ಮತ್ತು ಮಂಗಳೂರು ಹೀಗೆ ದೂರದೂರಿನಿಂದ ಬಂದಿದ್ದ ಯುವವಾಹಿನಿಯ ಬಂಧುಗಳು ಅದಾಗಲೇ ಪುರಭವನಕ್ಕೆ ರಂಗು ತಂದಿದ್ದರು. ಯುವವಾಹಿನಿಯ 29 ವರುಷಗಳ ಭವ್ಯ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ನಿಗದಿತ ಸಮಯದಲ್ಲಿ ಸದಸ್ಯರು ತಮ್ಮ ಇರುವಿಕೆಯನ್ನು ತೋರ್ಪಡಿಸಿದ್ದರು. ಅಚ್ಚುಕಟ್ಟಾದ ವೇದಿಕೆ, ತಂಪು ನೀಡುತ್ತಿದ್ದ ಸಭಾಂಗಣ, ಶಿಸ್ತು ಬದ್ಧ ಕೌಂಟರ್‌ಗಳು, ಶುಚಿ ರುಚಿಯಾದ ಊಟ ಉಪಹಾರ, ಪ್ರೀತಿ ಮತ್ತು ಗೌರವದ ಆತಿಥ್ಯ, ಅದ್ಭುತ ಎನ್ನುವ ಕಾರ್ಯಕ್ರಮ ಸಂಯೋಜನೆ. ಇದಕ್ಕೆಲ್ಲ ಸಾಕ್ಷಿಯಾಗಿದ್ದು ತಾ. 31-7-2016 ರಂದು ಉಡುಪಿ ಯುವವಾಹಿನಿ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿಯ 29 ನೇ ವಾರ್ಷಿಕ ಸಮಾವೇಶ.

ಯುವವಾಹಿನಿ ಇಂದು ಜನ ಮಾನಸದಲ್ಲಿ ಉಳಿದಿದೆ ಎಂದರೆ ಮತ್ತು ಯುವ ವಾಹಿನಿ ಇಷ್ಟು ಎತ್ತರಕ್ಕೆ ಬೆಳೆದಿದೆ ಎಂದರೆ ಅದಕ್ಕೆ ಮುಖ್ಯ ಕಾರಣ ಸಂಸ್ಥೆಯ ಶಿಸ್ತು ಮತ್ತು ಅವರಲ್ಲಿರುವ ಕಾಳಜಿ, ಸಮಾಜದ ಬಗೆಗಿನ ಅಭಿಮಾನ. ಒಂದು ಪುಟ್ಟ ಕೆಲಸವನ್ನೇ ಮಾಡುವುದಾದರೂ ಅದಕ್ಕೊಂದು ಯೋಜನೆ ರೂಪಿಸಿ ಅದರ ಮುಂದಿನ ಪರಿಣಾಮಗಳನ್ನು ಆಲೋ ಚಿಸಿ ಅದನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವವರೆಗೆ ಅದರ ಹಿಂದೆ ದುಡಿಯುವ ಅವರ ಶ್ರದ್ಧೆ ಅಭಿನಂದನೀಯ. ಹೀಗಾಗಿಯೇ ಸಮುದಾಯದಲ್ಲಿ ಎಷ್ಟೋ ಸಂಘಟನೆಗಳಿದ್ದರೂ ಯುವವಾಹಿನಿ ಇದೆಲ್ಲಕ್ಕಿಂತ ಭಿನ್ನವಾಗಿ ನಿಲ್ಲುತ್ತದೆ ಎಂದು 29 ನೇ ವಾರ್ಷಿಕ ಸಮಾವೇಶವನ್ನು ಉದ್ಘಾಟಿಸಿದ ಉಡುಪಿ ನಗರ ಸಭೆಯ ಅಧ್ಯಕ್ಷೆ ಶ್ರೀಮತಿ ಮಾಧವ ಬನ್ನಂಜೆ ತಿಳಿಸಿದರು.

ನಾವು ಬದಲಾಗಬೇಕು ಎಂದುಕೊಳ್ಳುವುದಾದರೆ ನಾವು ಯುವವಾಹಿನಿಗೆ ಸೇರೊಣ ನಾವು ನಮ್ಮಿಂದ ನಮ್ಮ ಸಮಾಜವನ್ನು ಪರಿವರ್ತಿಸೋಣ ಎಂದವರು ಕರೆ ನೀಡಿದರು.

ತುಡಾರ ಕಂಬದಲ್ಲಿ ದೀಪ ಹಚ್ಚುವ ಮೂಲಕ ಯುವವಾಹಿನಿಯ 29ನೇ ವಾರ್ಷಿಕ ಸಮಾವೇಶಕ್ಕೆ ಚಾಲನೆ ನೀಡಿ ಸಂಸ್ಥೆಯ ಬಗ್ಗೆ ಅಭಿಮಾನದ ಮಾತುಗಳನ್ನಾಡಿದರು.

ನಮ್ಮ ಸಮಾಜದಲ್ಲಿ ಸಾಕಷ್ಟು ಸಂಘಟನೆಗಳಿವೆ, ಎಲ್ಲವೂ ಸಮಾಜಕ್ಕಾಗಿ ಕೆಲಸ ಮಾಡುತ್ತಿವೆ, ಆದರೆ ಇವೆಲ್ಲದರ ಸಾಲಿನಲ್ಲಿ ಯುವವಾಹಿನಿ ಅಗ್ರ ಪಂಕ್ತಿಯಲ್ಲಿದೆ, ನಾನು ಯುವವಾಹಿನಿಯ ಜೊತೆ ಒಂದೆರಡು ದಶಕದಿಂದ ಸಂಪರ್ಕದಲ್ಲಿದ್ದೇನೆ ಯುವವಾಹಿನಿಯ ಸಾಕಷ್ಟು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ ಅವರ ಕೆಲಸಗಳು, ಯೋಜನೆಗಳು ತುಂಬಾ ಪರಿಪಕ್ವವಾಗಿದೆ. ಆ ಕಾರಣದಿಂದ ಯುವವಾಹಿನಿ ಸೋತಿಲ್ಲ ಇಂದಿಗೂ ಮುನ್ನಡೆಯುತ್ತಲೇ ಇದೆ, ಯುವವಾಹಿನಿಯು ಬದಲಾವಣೆಯ ಹರಿಕಾರ ಸಂಸ್ಥೆ. ನಮ್ಮಲ್ಲಿ ಇಚ್ಚಾ ಶಕ್ತಿಯ ಕೊರತೆ ಇದೆ, ಸಾಂಘಿಕ ಮನೋಬಲವೂ ಇಲ್ಲವಾಗಿ ಹೀಗಾಗಿ ಇಂದಿಗೂ ನಮ್ಮಲ್ಲಿ ಒಡೆದು ಆಳುವ ಯತ್ನ ನಡೆಯುತ್ತಿದೆ ಎಂದು ಮಾಜಿ ಸಚಿವರೂ, ಹಾಲಿ ಶಾಸಕರೂ ಆಗಿರುವ ವಿನಯ್ ಕುಮಾರ್ ಸೊರಕೆ ತಿಳಿಸಿದರು.

ಅವರು ಯುವವಾಹಿನಿಯ ಮುಖವಾಣಿ ’ಸಿಂಚನ’ ವಾರ್ಷಿಕ ವಿಶೇಷಾಂಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಸಮಾಜದ ಅಭಿವೃದ್ಧಿಗಾಗಿ ಶ್ರಮಿಸು ತ್ತಿರುವ ಸಮುದಾಯ ಸಂಘಟನೆಗೆ ಯುವ ವಾಹಿನಿಯು ಪ್ರತಿ ವರುಷ ’ಯುವವಾಹಿನಿ ಸಾಧನ ಶ್ರೇಷ್ಠ’ ಪ್ರಶಸ್ತಿಯನ್ನು ನೀಡುತ್ತಾ ಬರುತ್ತಿದ್ದು ಈ ಬಾರಿ ಈ ಪ್ರಶಸ್ತಿಯನ್ನು ಬಿಲ್ಲವರ ಅಸೋಸಿಯೇಷನ್ ಬೆಂಗಳೂರು ಇವರಿಗೆ ನೀಡಲಾಯಿತು. ಕಳೆದೊಂದು ದಶಕದಿಂದ ಅಸೋಷಿಯೇಷನ್ ಮಾಡುತ್ತಿರುವ ಸಾಮಾಜಿಕ ಕಾರ್ಯವನ್ನು ಗಮನಿಸಿ ಆಯ್ಕೆ ಸಮಿತಿಯು ಸಂಘಟನೆಯನ್ನು ಆಯ್ಕೆ ಮಾಡಿತ್ತು. ಅದೇ ರೀತಿ ಸಾಮಾಜಿಕವಾಗಿ ಸಮಾಜದಲ್ಲಿ ಅಂಚಿಗೆ ತಳ್ಳಲ್ಪಟ್ಟವರ ಅಭ್ಯುದಯಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಓರ್ವರಿಗೆ ’ಯುವವಾಹಿನಿ ಸಾಧನಶ್ರೀ’ ಪ್ರಶಸ್ತಿಯನ್ನು ನೀಡುತ್ತಿದ್ದು ಈ ಬಾರಿ ಈ ಪ್ರಶಸ್ತಿಯನ್ನು ಎಸ್‌ಆರ್‌ಆರ್ ಇಂಡಸ್ಟ್ರೀಸ್ ಇಂಡಿಯಾ ಪ್ರೈ.ಲಿ. ಇದರ ಮಾಲಕರಾದ ಶೈಲೇಂದ್ರ ವೈ. ಸುವರ್ಣ ಅವರಿಗೆ ನೀಡಲಾಯಿತು. ಪ್ರಶಸ್ತಿಯನ್ನು ಪ್ರದಾನಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು, ನಮ್ಮಲ್ಲಿ ಎಲ್ಲವೂ ಇದೆ, ಆರ್ಥಿಕವಾಗಿ, ಸಾಮಾಜಿಕವಾಗಿ, ಸಾಹಿತ್ಯಿಕ ವಾಗಿ, ಸಾಂಸ್ಕ್ರತಿಕವಾಗಿ ನಾವು ಬೆಳೆದಿದ್ದೇವೆ, ಸಂಘಟನೆಗಳಿಗೂ ನಮ್ಮಲ್ಲಿ ಕೊರತೆ ಇಲ್ಲ, ಆದರೆ ನಾವು ಸಂಘಟಿತರಾಗುತ್ತಿಲ್ಲ, ನಮ್ಮ ಪ್ರಾಮಾಣಿಕತೆಯನ್ನು ದೌರ್ಬಲ್ಯ ಎಂದುಕೊಂಡು ನಮ್ಮ ಮೇಲೆ ಸವಾರಿ ಮಾಡುವ ಕೆಲಸ ಹಿಂದಿನಿಂದಲೂ ನಡೆಯುತ್ತಾ ಬಂದಿದೆ ಈಗಲೂ ಅದು ಮುಂದುವರಿದಿದೆ, ಸಮುದಾಯದ ವಿಚಾರ ಬಂದಾಗ ನಮ್ಮ ಬಂಧು ವಾತ್ಸಲ್ಯ ಅನಾವರಣ ವಾಗಬೇಕು, ಅದು ನಮ್ಮನ್ನು ಒಂದುಗೂಡಿಸಬೇಕು ಎಂದರು.

ಸಮಾರಂಭದಲ್ಲಿ ಪಿಎಚ್‌ಡಿ ಪದವಿ ಪಡೆದಿರುವ ನಮ್ಮ ಸಮಾಜದ ಆರು ಮಂದಿ ಸಾಧಕರನ್ನು ಅಭಿನಂದಿಸಲಾಯಿತು. ಅಲ್ಲದೆ ಸಾಧನೆ ತೋರಿದ ಐದು ಮಂದಿ ಯುವ ಸಾಧಕರಿಗೆ ’ಯುವವಾಹಿನಿ ಯುವ ಸಾಧನ ಪ್ರಶಸ್ತಿ’, ವಿದ್ಯಾರ್ಥಿಗಳಿಗೆ ’ಅಕ್ಷರ ಪುರಸ್ಕಾರ’ ನೀಡಿ ಗೌರವಿಸಲಾಯಿತು. ಅಲ್ಲದೆ ಕಳೆದ ಒಂದು ವರುಷದ ಅವಧಿಯಲ್ಲಿ ಅತ್ಯುತ್ತಮ ಸಾಧನೆ ತೋರಿದ ಯುವವಾಹಿನಿಯ ಎಲ್ಲಾ ಘಟಕಗಳನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. 2016-17 ನೇ ಸಾಲಿನಲ್ಲಿ ಯುವವಾಹಿನಿಯನ್ನು ಮುನ್ನಡೆಸಲಿರುವ ನೂತನ ತಂಡವನ್ನು ಚುನಾವಣಾಧಿಕಾರಿ ಕೆ. ಪ್ರೇಮನಾಥ್ ಬಂಟ್ವಾಳ್ ಅವರು ಸಭೆಗೆ ಪರಿಚಯಿಸಿದರು. ನೂತನ ಅಧ್ಯಕ್ಷರಾದ ಪದ್ಮನಾಭ ಮರೋಳಿ ಮತ್ತವರ ತಂಡ ಪ್ರಮಾಣವಚನ ಸ್ವೀಕರಿಸಿದ್ದು, ಕೇಂದ್ರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್ ಉಡುಪಿ ಅವರು ಪ್ರಮಾನ ವಚನ ಭೋಧಿಸಿದರು.

ಬಳಿಕ ನೂತನ ಅಧ್ಯಕ್ಷರಾದ ಪದ್ಮನಾಭ ಮರೋಳಿ ಅವರು ತನ್ನ ಅನಿಸಿಕೆಯನ್ನು ವ್ಯಕ್ತಪಡಿಸಿದ್ದು ಎಲ್ಲರ ಸಹಕಾರದಿಂದ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಏರಿಸುವುದಾಗಿ ತಿಳಿಸಿದರು. ಬಳಿಕ ಸಮಾರಂಭದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್ ಅವರು ಮಾತನಾಡಿ, ತಾಯಿ ತನ್ನ ಮಗುವನ್ನು ಕೈ ಹಿಡಿದು ಮುನ್ನಡೆಸುವಂತೆ ಯುವವಾಹಿನಿಯ ಬಂಧುಗಳು ನನ್ನನ್ನು ಮುನ್ನಡೆಸಿದ್ದಾರೆ. ನಾನು ಅಧ್ಯಕ್ಷ ಆಗಿದ್ದರೂ ಎಲ್ಲರೂ ನನಗಿಂತ ಹೆಚ್ಚು ಮುತುವರ್ಜಿಯಿಂದ ಕೆಲಸಮಾಡಿದ್ದಾರೆ. ನಾನು ಸಾಕಷ್ಟು ಸಾಧಿಸಿದ್ದೇನೆ ಎಂದಲ್ಲ, ಆದರೆ ಮಾಡಿದ ಕೆಲಸದಲ್ಲಿ ನನಗೆ ತೃಪ್ತಿ ಇದೆ ಎಂದರು. ಅಲ್ಲದೆ ತನಗೆ ಸಹಕಾರ ನೀಡಿದ ಎಲ್ಲರಿಗೂ ಸ್ಮರಣಿಕೆ ನೀಡಿ ಗೌರವಿಸಿದರು. ಸಮಾರಂಭದಲ್ಲಿ ನವೀನ್ ಕುಮಾರ್ ಮರಿಕೆ ಪ್ರಧಾನ ಭಾಷಣ ನೆರವೇರಿಸಿದ್ದು, ಮುಂಬಯಿಯ ಬಿಲ್ಲವ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಯ ಚಯರ್‌ಮೆನ್ ಹಾಗೂ ಬಿಲ್ಲವ ಜಾಗೃತಿ ಬಳಗ ಮುಂಬಯಿ ಇದರ ಅಧ್ಯಕ್ಷ ಎನ್.ಟಿ. ಪೂಜಾರಿ, ಉಡುಪಿಯ ಉದ್ಯಮಿ ಸತೀಶ್ ಉಗ್ಗೆಲ್‌ಬೆಟ್ಟು, ನಾವುಂದದ ಸುಭೋಧ ಸ್ಕೂಲ್ ಇದರ ಸಂಸ್ಥಾಪಕರಾದ ಎನ್.ಕೆ. ಬಿಲ್ಲವ ಮೊದಲಾದವರು ಮುಖ್ಯ ಅತಿಥಿಗಳಾಗಿದ್ದರು. ಸಮಾವೇಶದ ನಿರ್ದೇಶಕರಾದ ಪ್ರವೀಣ್ ಕುಮಾರ್ ಉಡುಪಿ ಸ್ವಾಗತಿಸಿದ್ದು, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರವಿರಾಜ್ ಉಡುಪಿ ಪ್ರಾಸ್ತವಿಕ ಮಾತುಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ಕೇಶವ ಸುವರ್ಣರವರು ವರದಿ ವಾಚಿಸಿದ್ದು, ಸಮಾವೇಶದ ಸಂಚಾಲಕರಾದ ಗಣೇಶ್ ಕುಮಾರ್‌ರವರು ವಂದನಾರ್ಪಣೆ ನೇರವೇರಿಸಿದರು. ನರೇಶ್ ಕುಮಾರ್ ಸಸಿಹಿತ್ಲು ಮತ್ತು ದಯಾನಂದ್ ಕಾರ್ಯಕ್ರಮ ನಿರೂಪಿಸಿದರು.

One thought on “ಉಡುಪಿಯಲ್ಲಿ ಹೊಸ ಇತಿಹಾಸ ಬರೆದ ಯುವವಾಹಿನಿ ; ಅಭೂತಪೂರ್ವ ಯಶಸ್ಸು ಕಂಡ 29 ನೇ ವಾರ್ಷಿಕ ಸಮಾವೇಶ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!