Yuvavahini

AUG 10, 2014 10.41 AM IST

ಯುವವಾಹಿನಿ ಯುವ ಸಾಧನಾ ಪುರಸ್ಕಾರ -2014

ರಾಜ್ಯಮಟ್ಟದ ಬೆಳ್ಳಿಪದಕ ವಿಜೇತ ಗೃಹರಕ್ಷಕಿ ಕು| ಲೀಲಾ ಎಸ್. ಕುಕ್ಯಾನ್

ಕು| ಲೀಲಾ ಎಸ್. ಕುಕ್ಯಾನ್

ಇವರ ವ್ಯಕ್ತತ್ವವೇ ವಿಶೇಷ, ತಾನೇನು?, ತನ್ನ ಪ್ರತಿಭೆ ಎಂತಹುದು ಎನ್ನುವ ಯಾವ ಸುಳಿವನ್ನೂ ನೀಡದೆ, ರಾಜ್ಯ ಮತ್ತು ರಾಷ್ಟ್ರ ಮನ್ನಣೆಯೊಂದಿಗೆ ಬೆಳ್ಳಿ ಪದಕವನ್ನು ತನ್ನ ನಿಷ್ಕಾಮ ಸೇವೆಯ ಗೃಹರಕ್ಷಕ ದಳದ ಪ್ರಥಮ ಚಿಕಿತ್ಸೆ ತರಬೇತಿಗಾಗಿ ಪಡೆದವರು. ಅಲ್ಲದೆ ತನ್ನ ನಾಯಕತ್ವದ ತಂಡವು ಇಲಾಖೆಯ ವಿವಿಧ ಚಟುವಟಿಕೆಗಳ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಕಂಚಿನ ಪದಕವನ್ನು ಪಡೆದಿರುತ್ತದೆ. ಯುವವಾಹಿನಿಯ ಜೊತೆಗೆ ಹದಿನೈದಕ್ಕೂ ಅಧಿಕ ವರುಷದ ಸೇವೆಯನ್ನು ಯಾವುದೇ ಕುಂದು ಇರದ ರೀತಿಯಲ್ಲಿ ನೀಡುತ್ತಾ ಬಂದರೂ, ತಾನು ಪಡೆದ ಪುರಸ್ಕಾರಗಳ ಬಗ್ಗೆ ಪ್ರಚಾರವನ್ನೇ ನೀಡದೆ, ಪುರಸ್ಕಾರಗಳು ಹೆಗಲ ಮೇಲೆ ಬೀಳುವ ಜವಬ್ದಾರಿ ಎನ್ನುವ ರೀತಿಯಲ್ಲಿ ಕೆಲಸ ಮಾಡಿಕೊಂಡು ಬಂದಿರುವ ಸಾಧಕಿ ಕು| ಲೀಲಾ ಎಸ್. ಕುಕ್ಯಾನ್ ಅವರು. ಸಣ್ಣ ಬಹುಮಾನ ಪಡೆದರೂ ಅಬ್ಬರದ ಪ್ರಚಾರ ಪಡೆಯುವ ಜನರ ನಡುವೆ ರಾಜ್ಯ ಮಟ್ಟದ ಪುರಸ್ಕಾರ ದೊರೆತರೂ ಹೇಳಿಕೊಳ್ಳದೆ ಬರೇ ನಗುವಿನ ಮೂಲಕವೇ ಸಂತೃಪ್ತಿ ಸೂಸುವ ಲೀಲಾ ಎಸ್. ಕುಕ್ಯಾನ್ ಯುವವಾಹಿನಿಯ ಆಸ್ತಿ ಎಂದರೂ ತಪ್ಪಾಗಲಾರದು. ಗೌರವಾನ್ವಿತ ಸೇವಾ ಸಂಸ್ಥೆ ಗೃಹ ರಕ್ಷಕ ದಳದಲ್ಲಿ ಎರಡು ದಶಕದಿಂದ ಸೇವೆ ಸಲ್ಲಿಸಿ, ಸಂಚಾರ ನಿಯಂತ್ರಣ, ಕಾನೂನು ಸುವ್ಯವಸ್ಥೆ ಮತ್ತು ಪ್ರಥಮ ಚಿಕಿತ್ಸಾ ವಿಭಾಗದಲ್ಲಿ ತರಬೇತಿ ಪಡೆದು, ಕಾರ್ಯನಿರ್ವಹಿಸುತ್ತಾ ಇಲಾಖೆಯಿಂದ ಪ್ರಶಂಸೆಯನ್ನೂ ಪಡೆದಿದ್ದಾರೆ. ತನ್ನ ಸ್ವಂತ ಕೆಲಸದ ನಡುವೆ ಗೃಹ ರಕ್ಷಕ ಬಳಗದಿಂದ ಕರೆ ಬಂದಾಗ ತನ್ನ ಎಲ್ಲಾ ಕೆಲಸವನ್ನೂ ಬದಿಗೊತ್ತಿ ಬರುವ ಲೀಲಾ ಎಸ್.ಕುಕ್ಯಾನ್ ಮಳೆ, ಗಾಳಿ, ಬಿಸಿಲು ಎನ್ನದೆ ರಸ್ತೆ ಬದಿ ನಿಂತು ಸಂಚಾರ ಸುಗಮ ಕೆಲಸವನ್ನು ಯಾವುದೇ ನೋವಿಲ್ಲದೆ ನಡೆಸಿದ್ದಾರೆ. ಮೆರವಣಿಗೆ, ಜಾತ್ರೆ, ಹಬ್ಬಗಳ ಸಮಯದಲ್ಲೂ ತನ್ನೆಲ್ಲ ಸಂಭ್ರಮವನ್ನು ಬದಿಗಿರಿಸಿ ಸಾಮಾಜಿಕ ಸೇವೆ ನಡೆಸುತ್ತಿರುವ ಲೀಲಾ ಎಸ್.ಕುಕ್ಯಾನ್ ವಿವಿಧ ಪೊಲೀಸ್ ಠಾಣೆಗಳಲ್ಲೂ ಕೆಲಸ ನಿರ್ವಹಿಸಿದ್ದಾರೆ. ಇದಲ್ಲದೆ ಗೃಹರಕ್ಷಕಿಯಾಗಿ ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆಯೂ ಕೆಲಸ ಮಾಡಿರುವ ಇವರು ಖೈದಿಗಳ ನೋವಿಗೂ ಸ್ಪಂದಿಸಿದವರಾಗಿದ್ದಾರೆ. ವಿಶೇಷ ಸಂದರ್ಭಗಳಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಕಾರ್ಯ (ಐಚಿಜಜeಡಿ ಅheಛಿಞiಟಿg)ವನ್ನು ನಿರ್ವಹಿಸಿರುತ್ತಾರೆ. ತುರ್ತು ಸಂದರ್ಭದಲಿ,್ಲ ಅವಘಡಗಳು ನಡೆದ ವೇಳೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸುವ ಕೆಲಸವನ್ನೂ ನಡೆಸಿದ್ದಾರೆ. ಯುವವಾಹಿನಿಗರ ನಡುವೆ ನೆಚ್ಚಿನ ಸಹೋದರಿಯಾಗಿ, ಸಾಂಸ್ಕøತಿಕ ರಂಗದಲ್ಲಿನ ವಿಶಿಷ್ಟ ಪ್ರತಿಭೆಯಾಗಿ, ಕ್ರೀಡಾ ರಂಗದಲ್ಲೂ ಹೆಸರು ಮಾಡಿರುವ ಲೀಲಾ ಎಸ್.ಕುಕ್ಯಾನ್ ಇವರ ಸಾಧನೆಯನ್ನು ಗುರುತಿಸಿ ಯುವವಾಹಿನಿಯ 27ನೇ ವಾರ್ಷಿಕ ಸಮಾವೇಶದಲ್ಲಿ 2014 ನೇ ಸಾಲಿನ ಯುವವಾಹಿನಿ ‘ಯುವ ಸಾಧನ ಪ್ರಶಸ್ತಿ’ಯನ್ನು ನೀಡಿ ಗೌರವಿಸಲು ಯುವವಾಹಿನಿಯು ಸಂತೋಷ ಪಡುತ್ತಿದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!