Yuvavahini

AUG 10, 2014 11.33 AM IST

ಯುವವಾಹಿನಿ ಯುವ ಸಾಧನಾ ಪುರಸ್ಕಾರ -2014

ಸೀಳು ತುಟಿ ಸಮಸ್ಯೆಯವರ ಆಶಾಕಿರಣ ಡಾ. ಅಶಿತ್ ಎಂ.ವಿ.


ಸೀಳು ತುಟಿ ಸಮಸ್ಯೆಯವರ ಆಶಾಕಿರಣ
ಡಾ. ಅಶಿತ್ ಎಂ.ವಿ.
ಉಪ್ಪಿನಂಗಡಿಯ ರಾಜ್‍ಮಹಲ್ ಎಂ. ವರದ ರಾಜ್ ಮತ್ತು ವಿಮಲಾ ವರದರಾಜ್ ಇವರ ಪುತ್ರರಾಗಿರುವ ಡಾ. ಅಶಿತ್ ಎಂ.ವಿ. ಇವರು ಶಿಕ್ಷಣ ರಂಗದ ಅದ್ವಿತೀಯ ಸಾಧಕ, ತನ್ನ ಪ್ರಾಥಮಿಕ ಹಂತದ ಶಿಕ್ಷಣದ ಸಮಯದಲ್ಲೇ ಸಾಧನೆಯನ್ನು ತೋರಿರುವ ಶ್ರೀಯುತರು ಪ್ರಸ್ತುತ ದಂತ ವೈದ್ಯಕೀಯ ವಿಭಾಗದಲ್ಲಿ ಎಂಡಿಎಸ್ ಪದವಿಯನ್ನು ಪಡೆದಿದ್ದಾರೆ, ವೈದ್ಯಕೀಯ ರಂಗದಲ್ಲಿ ಹೊಸತನಗಳ ಪ್ರಯೋಗಕ್ಕೆ ಸದಾ ತುಡಿಯುತ್ತಾ ಈ ಮೂಲಕದ ಪ್ರಯತ್ನವನ್ನೂ ನಡೆಸುತ್ತಿರುವ ಅಶಿತ್ ಅವರು ಸೀಳು ತುಟಿ ಸಮಸ್ಯೆಯಿಂದ ಬಲಳುತ್ತಿರುವವರ ಆಶಾಕಿರಣ ಎಂದರೂ ತಪ್ಪಾಗಲಾರದು. . International Claft Federation ನವರು ನಡೆಸುವ ಸೀಳು ತುಟಿಯ ಬಗ್ಗೆ ವೈದ್ಯ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಲು ಜಗತ್ತಿನ 40 ಮಂದಿಯಲ್ಲಿ ಇವರು ಒಬ್ಬರು. ಇದು ಇದೇ ಸಪ್ಟೆಂಬರ್ ತಿಂಗಳಲ್ಲಿ ಮಂಗೊಲಿಯದಲ್ಲಿ ನಡೆಯಲಿದೆ. ಮಾತ್ರವಲ್ಲದೆ ಕ್ಲೆಫ್ಟ್ ಮತ್ತು ಕ್ರೇನಿಯೋ ಫೇಸಿಯಲ್ ಆರ್ಥೋಡೊಂಟಿಕ್ಸ್ ಅಂಡರ್ ಸ್ಮೈಲ್ ಟ್ರೈನ್ ಐಎನ್‍ಸಿ ವಿಭಾಗದಲ್ಲಿ ಸಂಶೋಧನೆ ನಡೆಸುತ್ತಿರುವ ದೇಶದ ಕೇವಲ ಆರು ಭಾರತೀಯರಲ್ಲಿ ಒಬ್ಬರಾಗಿರುವ ಡಾ. ಅಶಿತ್ ಎಂ.ವಿ. ಅವರು ನಮ್ಮವರು ಎನ್ನುವುದೇ ಸಂತೋಷದ ವಿಚಾರ. ಇವರ ಹಲವಾರು ಸಂಶೋಧನೆಗಳು ವೈದ್ಯಕೀಯ ರಂಗದಲ್ಲಿ ಯಶಸ್ಸನ್ನು ಸಾಧಿಸಿದೆ ಎನ್ನುವುದು ವಿಶೇಷ.ಪ್ರಸ್ತುತ ಮಂಗಳೂರಿನ ಯೆನೋಪೊಯ ಮಹಾವಿದ್ಯಾಲಯದ ಆರ್ಥೋ ಡೊಂಟಿಕ್ಸ್ ಮತ್ತು ಡೆಂಟೋ ಫೇಸಿಯಲ್ ಆರ್ಥೋ ಪೆಡಿಕ್ಸ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ದುಡಿಯುತ್ತಿದ್ದಾರೆ. ಕ್ರಾನಿಯೋ ಫೇಸಿಯಲ್ ಎನಾಮಲೀಸ್‍ನ ಆರ್ಥೋ ಡೊಂಟಿಸ್ಟ್‍ನ ಸಲಹೆಗಾರರಾಗಿಯೂ ಸೇವೆ ಸಲ್ಲಿಸುತ್ತಿರುವರಲ್ಲದೆ ಕರ್ನಾಟಕ, ಕೇರಳ ಮತ್ತು ಗೋವಾ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಆರ್ಥೋಡೊಂಟಿಕ್ಸ್ ಸಲಹೆಗಾರರಾಗಿಯೂ ಕೆಲಸ ಮಾಡುತ್ತಿದ್ದಾರೆ. ಇದಲ್ಲದೆ ಜಿಲ್ಲೆಯ ಹಲವಾರು ಕಡೆ ಉಚಿತ ದಂತ ವೈದ್ಯಕೀಯ ಶಿಬಿರವನ್ನು ನಡೆಸಿ ಬಡವರಿಗೆ ಉಚಿತ ಸೇವೆ ನೀಡಿದ ಕೀರ್ತಿಯೂ ಇವರಿಗೆ ಸಲ್ಲುತ್ತದೆ. ಇವರ ಪತ್ನಿ ಡಾ. ಸ್ವೇತ, ದಂತ ವೈದ್ಯೆ ಹಾಗೂ ಓರ್ವ ಮಗ ಅನ್‍ಸೂಲ್. ಇವರ ಶೈಕ್ಷಣಿಕ ಮತ್ತು ಸಂಶೋಧನಾ ಸಾಧನೆಯನ್ನು ಗುರುತಿಸಿದ ಯುವ ವಾಹಿನಿಯು ತನ್ನ 27ನೇ ವಾರ್ಷಿಕ ಸಮಾವೇಶದಲ್ಲಿ 2014ನೇ ಸಾಲಿನ ಯುವವಾಹಿನಿ ಯುವ ಸಾಧನ ಪ್ರಶಸ್ತಿಯನ್ನು ನೀಡಿ ಗೌರವಿಸಲು ಸಂತೋಷ ಪಡುತ್ತಿದೆ.

One thought on “ಸೀಳು ತುಟಿ ಸಮಸ್ಯೆಯವರ ಆಶಾಕಿರಣ ಡಾ. ಅಶಿತ್ ಎಂ.ವಿ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!