Yuvavahini

FEB 26, 2017 10.48 AM IST

ಯುವವಾಹಿನಿ(ರಿ) ಕೊಲ್ಯ ಘಟಕ

ಯುವವಾಹಿನಿಯ 24ನೇ ನೂತನ ಕೊಲ್ಯ ಘಟಕದ ಉದ್ಘಾಟನೆ

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ 24ನೇ ನೂತನ ಘಟಕ ಯುವವಾಹಿನಿ(ರಿ) ಕೊಲ್ಯ ಘಟಕವು 26 ಫೆಬ್ರವರಿ 2017ನೇ ಆದಿತ್ಯವಾರ ಮಂಗಳೂರಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೊಲ್ಯ ಸೋಮೇಶ್ವರದಲ್ಲಿ ಉದ್ಘಾಟನೆಗೊಂಡಿತು.

ಕೊಲ್ಯ ಬಿಲ್ಲವ ಸಮಾಜ ಸೇವಾ ಸಂಘದ ಗೌರವಾದ್ಯಕ್ಷ ಡಾ.ಪಿ ರಾಮಾನುಜಂ ದೀಪ ಬೆಳಗುವುದರ ಮೂಲಕ ಕೊಲ್ಯ ಘಟಕವನ್ನು ಉದ್ಗಾಟಿಸಿ ಶುಭ ಹಾರೈಸಿದರು.

ನಮ್ರತಾಭಾವ ಉನ್ನತಿಗೆ ಕಾರಣವಾಗುತ್ತದೆ. ಅಹಂಭಾವ ತೊರೆದು ಹಿರಿಯರಿಗೆ ಸಮಾಜಕ್ಕೆ ತಗ್ಗಿ ಬಗ್ಗಿ ನಡೆಯುವ ಸುಸಂಸ್ಕೃತ ಗುಣ ಹೊಂದಿರುವ ಸ್ವಾರ್ಥರಹಿತ ನಿಷ್ಪಕ್ಷಪಾತ ಶಿಸ್ತುಬದ್ದ ಯುವಕರ ಸಂಘಟನೆಯೇ ಯುವವಾಹಿನಿ.

ಯುವವಾಹಿನಿ ಒಂದು ಕೌಟುಂಬಿಕ ಸಂಸ್ಥೆ, ಯುವವಾಹಿನಿಗೆ ಯುವವಾಹಿನಿಯೇ ಸಾಟಿ. ಯುವಕರ ಬಗ್ಗೆ ಸ್ವಾಮೀ ವಿವೇಕನಂದರು ಹೇಳಿದ ಮಾತನ್ನು ಅಕ್ಷರಶಃ ಪಾಲಿಸಿದ ಸಂಸ್ಥೆ ಯುವವಾಹಿನಿ.

ಕ್ರೀಡೆ ಸಾಹಿತ್ಯ ಸಾಂಸ್ಕೃತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಬಿಲ್ಲವ ಸಮಾಜ ಮುಂಚೂಣಿಯಲ್ಲಿದೆ.ಆದರೆ ರಾಜಕೀಯ ಹಿನ್ನಡೆಯ ಬಗ್ಗೆ ನಾವು ಆತ್ಮಾವಲೋಕನ ಮಾಡುವುದು ಒಳಿತು ಎಂದು ಪ್ರಧಾನ ಭಾಷಣಕಾರರಾದ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ ಅಭಿಪ್ರಾಯಪಟ್ಟರು.

ಹಣದ ಬಲ ಭುಜದ ಬಲ ಜಗದ ಬಲ ಅಭಿಜಾತ ಬಲ ಇವೆಲ್ಲವೂ ಶಾಶ್ವತ ಅಲ್ಲ ಪ್ರಜ್ಞಾಬಲ ಮಾತ್ರ ಶಾಶ್ವತ ಜ್ಞಾನವು ನಮ್ಮಲ್ಲಿರುವ ಸೃಜನಶೀಲವಾದ ಶಕ್ತಿ ವಿಶೇಷಗಳನ್ನು ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುತ್ತದೆ ಎಂದು ಮುಖ್ಯ ಅತಿಥಿಯಾಗಿ ಮಾತಾಡಿದ ಎಲ್ ಐ ಸಿ ಅಧಿಕಾರಿ ಚಂದ್ರಕಾತ್ ಕುಮಾರ್ ತಿಳಿಸಿದರು.

ಕೊಲ್ಯ ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷರಾದ ಈಶ್ವರ ಸುವರ್ಣ ಕನೀರುತೋಟ ಹಾಗೂ ಮಲರಾಯ ದೂಮಾವತಿ ಬಂಟ ದೈವಗಳ ಚಾರಿಟಬಲ್ ಟ್ರಸ್ಟ್ ಅದ್ಯಕ್ಷರಾದ ಬಾಬು ಶಾಸ್ತ ಕೀನ್ಯ ಮುಖ್ಯ ಅತಿಥಗಳಾಗಿ ಭಾಗವಹಿಸಿ ಕೊಲ್ಯ ಯುವವಾಹಿನಿಯು ಬಲಿಷ್ಟವಾಗಿ ಹೊರಹೊಮ್ಮಲಿ ಎಂದು ಹಾರೈಸಿದರು.

ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ ಸಭೆಯ ಅದ್ಯಕ್ಷತೆ ವಹಿಸಿದ್ದರು.

ಕೊಲ್ಯ ಯುವವಾಹಿನಿಯ ನೂತನ ಅದ್ಯಕ್ಷ ಸುರೇಶ್ ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಚಿವರಾದ ಯು.ಟಿ.ಖಾದರ್, ಗೆಜ್ಜೆಗಿರಿ ನಂದನಬಿತ್ತಲ್ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಚಿಲಿಂಬಿ, ಚಂದ್ರಶೇಖರ್ ಉಚ್ಚಿಲ್, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ ಹಾಗೂ ಯುವವಾಹಿನಿಯ ವಿವಿಧ ಘಟಕಗಳ ಸದಸ್ಯರು ನೂತನ ಘಟಕಕ್ಕೆ ಶುಭಹಾರೈಕೆ ಮಾಡಿದರು.ಸಭಾ ಕಾರ್ಯಕ್ರಮದ ಮುನ್ನ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅದ್ಯಕ್ಷ ತುಕರಾಮ್ ಎನ್ ಪ್ರಸ್ತಾವನೆಯ ಮೂಲಕ ಯುವವಾಹಿನಿಯ 29 ವರ್ಷಗಳ ಸಮಾಜಮುಖಿ ಕಾರ್ಯಕ್ರಮಗಳ ಬೆಳಕು ಚೆಲ್ಲಿದರು. ಯುವವಾಹಿನಿ ಮಂಗಳೂರು ಘಟಕದ ಅದ್ಯಕ್ಷ ಸುನಿಲ್ ಅಂಚನ್ ಸ್ವಾಗತಿಸಿದರು. ಯುವವಾಹಿನಿಯ ಮಂಗಳೂರು ತಾಲೂಕು ಸಂಘಟನಾ ಕಾರ್ಯದರ್ಶಿ ಹರೀಶ್ ಪೂಜಾರಿ ಪದಗ್ರಹಣ ಕಾರ್ಯಕ್ರಮ ನಡೆಸಿಕೊಟ್ಟರು. ಕೊಲ್ಯ ಯುವವಾಹಿನಿಯ ನೂತನ ಕಾರ್ಯದರ್ಶಿ ಲತೀಶ್ ಎಂ ಸಂಕೋಲಿಗೆ ಧನ್ಯವಾದ ನೀಡಿದರು.

4 thoughts on “ಯುವವಾಹಿನಿಯ 24ನೇ ನೂತನ ಕೊಲ್ಯ ಘಟಕದ ಉದ್ಘಾಟನೆ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!