Yuvavahini

FEB 26, 2017 10.48 AM IST

ಯುವವಾಹಿನಿ(ರಿ) ಕೊಲ್ಯ ಘಟಕ

ಯುವವಾಹಿನಿಯ 24ನೇ ನೂತನ ಕೊಲ್ಯ ಘಟಕದ ಉದ್ಘಾಟನೆ

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ 24ನೇ ನೂತನ ಘಟಕ ಯುವವಾಹಿನಿ(ರಿ) ಕೊಲ್ಯ ಘಟಕವು 26 ಫೆಬ್ರವರಿ 2017ನೇ ಆದಿತ್ಯವಾರ ಮಂಗಳೂರಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೊಲ್ಯ ಸೋಮೇಶ್ವರದಲ್ಲಿ ಉದ್ಘಾಟನೆಗೊಂಡಿತು.

ಕೊಲ್ಯ ಬಿಲ್ಲವ ಸಮಾಜ ಸೇವಾ ಸಂಘದ ಗೌರವಾದ್ಯಕ್ಷ ಡಾ.ಪಿ ರಾಮಾನುಜಂ ದೀಪ ಬೆಳಗುವುದರ ಮೂಲಕ ಕೊಲ್ಯ ಘಟಕವನ್ನು ಉದ್ಗಾಟಿಸಿ ಶುಭ ಹಾರೈಸಿದರು.

ನಮ್ರತಾಭಾವ ಉನ್ನತಿಗೆ ಕಾರಣವಾಗುತ್ತದೆ. ಅಹಂಭಾವ ತೊರೆದು ಹಿರಿಯರಿಗೆ ಸಮಾಜಕ್ಕೆ ತಗ್ಗಿ ಬಗ್ಗಿ ನಡೆಯುವ ಸುಸಂಸ್ಕೃತ ಗುಣ ಹೊಂದಿರುವ ಸ್ವಾರ್ಥರಹಿತ ನಿಷ್ಪಕ್ಷಪಾತ ಶಿಸ್ತುಬದ್ದ ಯುವಕರ ಸಂಘಟನೆಯೇ ಯುವವಾಹಿನಿ.

ಯುವವಾಹಿನಿ ಒಂದು ಕೌಟುಂಬಿಕ ಸಂಸ್ಥೆ, ಯುವವಾಹಿನಿಗೆ ಯುವವಾಹಿನಿಯೇ ಸಾಟಿ. ಯುವಕರ ಬಗ್ಗೆ ಸ್ವಾಮೀ ವಿವೇಕನಂದರು ಹೇಳಿದ ಮಾತನ್ನು ಅಕ್ಷರಶಃ ಪಾಲಿಸಿದ ಸಂಸ್ಥೆ ಯುವವಾಹಿನಿ.

ಕ್ರೀಡೆ ಸಾಹಿತ್ಯ ಸಾಂಸ್ಕೃತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಬಿಲ್ಲವ ಸಮಾಜ ಮುಂಚೂಣಿಯಲ್ಲಿದೆ.ಆದರೆ ರಾಜಕೀಯ ಹಿನ್ನಡೆಯ ಬಗ್ಗೆ ನಾವು ಆತ್ಮಾವಲೋಕನ ಮಾಡುವುದು ಒಳಿತು ಎಂದು ಪ್ರಧಾನ ಭಾಷಣಕಾರರಾದ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ ಅಭಿಪ್ರಾಯಪಟ್ಟರು.

ಹಣದ ಬಲ ಭುಜದ ಬಲ ಜಗದ ಬಲ ಅಭಿಜಾತ ಬಲ ಇವೆಲ್ಲವೂ ಶಾಶ್ವತ ಅಲ್ಲ ಪ್ರಜ್ಞಾಬಲ ಮಾತ್ರ ಶಾಶ್ವತ ಜ್ಞಾನವು ನಮ್ಮಲ್ಲಿರುವ ಸೃಜನಶೀಲವಾದ ಶಕ್ತಿ ವಿಶೇಷಗಳನ್ನು ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುತ್ತದೆ ಎಂದು ಮುಖ್ಯ ಅತಿಥಿಯಾಗಿ ಮಾತಾಡಿದ ಎಲ್ ಐ ಸಿ ಅಧಿಕಾರಿ ಚಂದ್ರಕಾತ್ ಕುಮಾರ್ ತಿಳಿಸಿದರು.

ಕೊಲ್ಯ ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷರಾದ ಈಶ್ವರ ಸುವರ್ಣ ಕನೀರುತೋಟ ಹಾಗೂ ಮಲರಾಯ ದೂಮಾವತಿ ಬಂಟ ದೈವಗಳ ಚಾರಿಟಬಲ್ ಟ್ರಸ್ಟ್ ಅದ್ಯಕ್ಷರಾದ ಬಾಬು ಶಾಸ್ತ ಕೀನ್ಯ ಮುಖ್ಯ ಅತಿಥಗಳಾಗಿ ಭಾಗವಹಿಸಿ ಕೊಲ್ಯ ಯುವವಾಹಿನಿಯು ಬಲಿಷ್ಟವಾಗಿ ಹೊರಹೊಮ್ಮಲಿ ಎಂದು ಹಾರೈಸಿದರು.

ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ ಸಭೆಯ ಅದ್ಯಕ್ಷತೆ ವಹಿಸಿದ್ದರು.

ಕೊಲ್ಯ ಯುವವಾಹಿನಿಯ ನೂತನ ಅದ್ಯಕ್ಷ ಸುರೇಶ್ ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಚಿವರಾದ ಯು.ಟಿ.ಖಾದರ್, ಗೆಜ್ಜೆಗಿರಿ ನಂದನಬಿತ್ತಲ್ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಚಿಲಿಂಬಿ, ಚಂದ್ರಶೇಖರ್ ಉಚ್ಚಿಲ್, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ ಹಾಗೂ ಯುವವಾಹಿನಿಯ ವಿವಿಧ ಘಟಕಗಳ ಸದಸ್ಯರು ನೂತನ ಘಟಕಕ್ಕೆ ಶುಭಹಾರೈಕೆ ಮಾಡಿದರು.ಸಭಾ ಕಾರ್ಯಕ್ರಮದ ಮುನ್ನ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅದ್ಯಕ್ಷ ತುಕರಾಮ್ ಎನ್ ಪ್ರಸ್ತಾವನೆಯ ಮೂಲಕ ಯುವವಾಹಿನಿಯ 29 ವರ್ಷಗಳ ಸಮಾಜಮುಖಿ ಕಾರ್ಯಕ್ರಮಗಳ ಬೆಳಕು ಚೆಲ್ಲಿದರು. ಯುವವಾಹಿನಿ ಮಂಗಳೂರು ಘಟಕದ ಅದ್ಯಕ್ಷ ಸುನಿಲ್ ಅಂಚನ್ ಸ್ವಾಗತಿಸಿದರು. ಯುವವಾಹಿನಿಯ ಮಂಗಳೂರು ತಾಲೂಕು ಸಂಘಟನಾ ಕಾರ್ಯದರ್ಶಿ ಹರೀಶ್ ಪೂಜಾರಿ ಪದಗ್ರಹಣ ಕಾರ್ಯಕ್ರಮ ನಡೆಸಿಕೊಟ್ಟರು. ಕೊಲ್ಯ ಯುವವಾಹಿನಿಯ ನೂತನ ಕಾರ್ಯದರ್ಶಿ ಲತೀಶ್ ಎಂ ಸಂಕೋಲಿಗೆ ಧನ್ಯವಾದ ನೀಡಿದರು.

4 thoughts on “ಯುವವಾಹಿನಿಯ 24ನೇ ನೂತನ ಕೊಲ್ಯ ಘಟಕದ ಉದ್ಘಾಟನೆ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!