Yuvavahini

JUL 31, 2017 7.34 AM IST

ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್

ಯುವವಾಹಿನಿಯ ಶೈಕ್ಷಣಿಕ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಇದರ ವಿದ್ಯಾನಿಧಿ ಟ್ರಸ್ಟ್ ವತಿಯಿಂದ ದಿನಾಂಕ 30.07.2017ನೇ ರವಿವಾರ ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ಇಲ್ಲಿ ನಡೆಯಿತು.
9.30ಕ್ಕೆ ಬ್ರಹ್ಮಶ್ರೀ ನಾರಾಯಣಗುರುಗಳ ಪೋಟೋ ಎದುರು ಟ್ರಸ್ಟಿಗಳಾದ ಸಂಜೀವ ಪೂಜಾರಿಯವರು ದೀಪ ಬೆಳಗಿಸುವುದರ ಮೂಲಕ ಬೆಳಗ್ಗಿನ ಕಾರ್ಯಗಾರಕ್ಕೆ ಚಾಲನೆ ನೀಡಿದರು. ನಂತರ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ರವರಿಗೆ ಪುಷ್ಪ ನೀಡಿ ತರಬೇತಿಗೆ ಆಹ್ವಾನ ನೀಡಲಾಯಿತು. ನಂತರ 2.30 ತಾಸುಗಳನ್ನು ರಾಜೇಂದ್ರ ಭಟ್ ರವರು ವಿದ್ಯಾರ್ಥಿ-ವಿದ್ಯಾರ್ಥಿನಿಯರೊಂದಿಗೆ ತನ್ನ ಅದ್ಬುತವಾದ ಮಾತುಗಳಿಂದ ಕಾರ್ಯಗಾರವನ್ನು ನಡೆಸಿಕೊಟ್ಟರು. ಮಧ್ಯಾಹ್ನ 12.30ಕ್ಕೆ ಸಮಾರೋಪ ಸಮಾರಂಭದಲ್ಲಿ ಮೊದಲಿಗೆ ವಿದ್ಯಾರ್ಥಿನಿಯರಿಂದ ಪ್ರಾರ್ಥನೆ ನೆರವೇರಿಸಿದರು. ನಂತರ ಆಡಳಿತ ಟ್ರಸ್ಟಿಗಳಾದ ಸಂತೋಷ್ ಕುಮಾರ್ ವರು ಬಂದಂತಹ ಅತಿಥಿಗಳನ್ನು ಮತ್ತು ವಿದ್ಯಾರ್ಥಿಗಳನ್ನು ಸ್ವಾಗತಿಸಿ ಪ್ರಸ್ತಾವನೆಗೈದರು. ನಂತರ ಮುಖ್ಯ ಅತಿಥಿಗಳಾದ ಶ್ರೀ ಶೇಖರ ಕೆ. ಕರ್ಕೇರ ಮೆನೆಜಿಂಗ್ ಡೈರೆಕ್ಟರ್ ಘಾಟ್ಕೆ ಕರ್ಕೇರ ಪವರ್ ಇಂಡಸ್ಟ್ರೀಸ್ ಇವರು ದೀಪ ಬೆಳಗಿಸಿ ಸಮಾರೋಪ ಸಮಾರಂಭದ ಉದ್ಘಾಟನೆ ಮಾಡಿದರು. ಅವರು ತಮ್ಮ ಮಾತಿನಲ್ಲಿ ಯುವವಾಹಿನಿ ಸುಮಾರು ವರ್ಷಗಳಿಂದ ವಿದ್ಯಾರ್ಥಿ ವೇತನವನ್ನು ನೀಡುತ್ತಾ ಬರುತ್ತಿದೆ. ಅಲ್ಲದೆ ತರಬೇತಿ ಕಾರ್ಯಗಾರ ಮೂಲಕ ವಿದ್ಯಾರ್ಥಿಗಳಲ್ಲಿ ಮಾನಸಿಕ ಸ್ಥರ್ಯ ವಿದ್ಯಾರ್ಥಿ ಜೀವನದಲ್ಲಿ ತಾನು ಹೇಗೆ ಮುಂದೆ ಬರಬೇಕು, ಆ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂಬುದನ್ನು ತಿಳಿಸುತ್ತಾರೆ. ಯುವವಾಹಿನಿಗೆ ಯಾವಾಗಲೂ ತನ್ನ ನಿರಂತರ ಪ್ರೋತ್ಸಾಹ ಇದೆ ಎಂದರು

ಶೈಕ್ಷಣಿಕ ದತ್ತು ಸ್ವೀಕಾರದ ಟ್ರಸ್ಟಿಗಳಾದ ಅಶೋಕ್ ಕುಮಾರ್ ಇಂಜಿನಿಯರ್ ದತ್ತು ಸ್ವೀಕಾರದ 14 ವಿದ್ಯಾರ್ಥಿಗಳ ಪಟ್ಟಿ ಓದಿದರು. ಶ್ರೀ ಶೇಖರ ಕೆ. ಕರ್ಕೇರ ರವರು ದತ್ತು ಸ್ವೀಕಾರದ ವಿದ್ಯಾರ್ಥಿಗಳಿಗೆ ಈ ಸಾಲಿನ ಸಹಾಯಧನ ವಿತರಿಸಿದರು. ನಂತರ ತರಬೇತಿ ಮತ್ತು ಅಭಿವೃದ್ಧಿ ಪರಿಶೀಲನಾ ಟ್ರಸ್ಟಿಗಳಾದ ತಾರನಾಥ ಎಚ್.ಬಿ ರವರು ವಿದ್ಯಾರ್ಥಿ ವೇತನದ 48 ವಿದ್ಯಾರ್ಥಿಗಳ ಪಟ್ಟಿ ಓದಿದರು. ಸೂರ್ಯ ಪ್ರಕಾಶ್ ಮತ್ತು ಸಚೇತ್ ಸುವರ್ಣರವರು ವಿದ್ಯಾರ್ಥಿ ವೇತನ ವಿತರಿಸಿದರು. ಈ ಸಾಲಿನಲ್ಲಿ 3.05 ಲಕ್ಷ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಶ್ರೀ ಸಚೇತ್ ಸುವರ್ಣ ರವರು ಮಾತನಾಡಿ IAS,IPS,UPSC ಮುಂತಾದ ಸ್ಪರ್ಧಾ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ಎದುರಿಸಬೇಕು. ಯುವವಾಹಿನಿ ಆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು. ಟ್ರಸ್ಟಿಗಳಾದ ಚಂದ್ರಶೇಖರ  ರವರು ವಿದ್ಯಾರ್ಥಿಗಳಿಗೆ ಸರಕಾರಿ ಸಂಸ್ಥೆಗಳಿಂದ ಹಾಗೂ ಖಾಸಗಿ ಸಂಸ್ಥೆಗಳಿಂದ ಸಿಗುವ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ನೀಡಿದರು. ಈ ವೇದಿಕೆಯಲ್ಲಿ ಟ್ರಸ್ಟಿಗಳಾದ ಸೂರ್ಯ ಪ್ರಕಾಶ್, ಸಂಜೀವಪೂಜಾರಿ ರವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದ್ಮನಾಭ ಮರೋಳಿಯವರು ವಹಿಸಿದರು. ಮಧ್ಯಾಹ್ನ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಭೋಜನ ವ್ಯವಸ್ಥೆ ಮಾಡಲಾಯಿತು. ಟ್ರಸ್ಟ್ ಸದಸ್ಯರಾದ  ಸದಸ್ಯರಾದ ರಾಕೇಶ್ ಕುಮಾರ್ ರವರು ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಪ್ರೇಮ್‍ನಾಥ್ ಕೆ. ರವರು ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!