Yuvavahini

SEP 21, 2017 5.02 PM IST

ಯುವವಾಹಿನಿ (ರಿ) ಪಡುಬಿದ್ರೆ ಘಟಕದಿಂದ ವಿಚಾರಗೋಷ್ಟಿ

ತುಳುನಾಡ : ಆರಾಧನೆ-ಆಶಯ-ಸ್ವರೂಪ

ಆಧುನೀಕರಣ ಪ್ರಭಾವದಿಂದ ತಂತ್ರಜ್ಞಾನದ ಒಳಿತುಗಳಂತೆ ಕೆಡುಕುಗಳು ಉಂಟಾಗಿ ಯುವ ಸಮುದಾಯದ ಮೇಲೆ ಅದರ ಪರಿಣಾಮ ಪ್ರಖರವಾಗಿದೆ. ಹೆತ್ತವರು ಉತ್ತಮವಾಗಿ ಶಿಶು ಆರೈಕೆಯೊಂದಿಗೆ ಮಕ್ಕಳ ಮೇಲೆ ಯಾವುದೇ ಕೆಟ್ಟ ಪ್ರಭಾವ ಆಗದಂತೆ ನೋಡಬೇಕಾಗಿದೆ. ಈ ನಿಟ್ಟಿನಲ್ಲಿ ನಾರಾಯಣಗುರುವರ್ಯರಂತ ಮಹನೀಯರ ತತ್ವಾದರ್ಶಗಳನ್ನು ತಿಳಿಸಬೇಕಾದ ಅನಿವಾರ್ಯತೆ ಇದೆ ಎಂದು ಕೇಂಜ, ಕುತ್ಯಾರು ಬ್ರಹ್ಮಬೈದರ್ಕಳ ಗರಡಿಯ ಗಡಿ ಪ್ರಧಾನರಾದ ಬಗ್ಗ ಪೂಜಾರಿ ಉಮೇಶ್ ಕೋಟ್ಯಾನ್ ತಿಳಿಸಿದರು.

ಅವರು ಪಡುಬಿದ್ರಿ ನಾರಾಯಣಗುರು ಸಭಾಗೃಹದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಯುವವಾಹಿನಿ ಪಡುಬಿದ್ರಿ ಘಟಕದ ಜಂಟಿ ಆಶ್ರಯದಲ್ಲಿ  ನಾರಾಯಣಗುರುಗಳ 89 ನೇ ಪುಣ್ಯತಿಥಿ ಪ್ರಯುಕ್ತ  ದಿನಾಂಕ 21.09.2017ರಂದು ಜರುಗಿದ ತುಳುನಾಡ ಆರಾಧನೆ- ಆಶಯ – ಸ್ವರೂಪ ಎಂಬ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜಾನಪದ ಸಂಶೋಧಕರಾದ ಬನ್ನಂಜೆ ಬಾಬು ಅಮೀನ್ ಮಾತನಾಡಿ ತುಳುನಾಡಿನ ಸಂಪ್ರದಾಯ, ನಂಬಿಕೆಗಳು ಆಡಂಬರದ ಪ್ರಭಾವಕ್ಕೆ ಒಳಗಾಗುತ್ತಿದೆ. ಕೆಲವು ಆಚರಣೆಗಳು ನಶಿಸುವತ್ತ ಸಾಗಿದೆ. ತುಳುನಾಡಿನಲ್ಲಿ ಪಂಚವರ್ಣವೆಂದರೆ ಕೊರಗ, ಮುಂಡಾಲ, ಬಿಲ್ಲವ, ಮೊಗವೀರ, ಬಂಟ ಜಾತಿಗಳಾಗಿವೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಜಾನಪದ ಸಂಶೋಧಕ ಕೆ.ಎಲ್.ಕುಂಡಂತಾಯ ಮಾತನಾಡಿ ನಾಗಾರಾಧನೆ ಮತ್ತು ದೈವಾರಾಧನೆ ತುಳುವರ ಭಾಗವಾಗಿದ್ದು ಈ ಸಂಸ್ಕೃತಿಯು ಕೇವಲ ತುಳುನಾಡಿಗೆ ಸೀಮಿತವಲ್ಲ ಎಂದರು. ಸಂಪನ್ಮೂಲ ವ್ಯಕ್ತಿ ಮೂಡಬಿದ್ರೆಯ ಅರ್ಚಕರಾದ ಶಿವಾನಂದ ಶಾಂತಿ ಮಾತನಾಡಿ ಅಂದು ಮೂರ್ತಿಗಾಗಿ ದೇವಸ್ಥಾನ ಇಂದು ದೇವಸ್ಥಾನಕ್ಕಾಗಿ ಮೂರ್ತಿ ನಿರ್ಮಿಸುವ ಹಂತಕ್ಕೆ ಬಂದಿದ್ದೇವೆ. ಗುರುಚಿಂತನೆಗಳೊಂದಿಗೆ ಶೈಕ್ಷಣಿಕವಾಗಿ ಮುಂದುವರಿದಾಗ ದುಶ್ಚಟಗಳಿಂದ ದೂರವಿರಲು ಸಾಧ್ಯ ಎಂದರು. ವಿಚಾರಗೋಷ್ಠಿಯನ್ನು ನಿರ್ವಹಿಸಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಅರ್ಥಧಾರಿ ಭಾಸ್ಕರ್ ಕೆ.ಪಡುಬಿದ್ರಿ ಮಾತನಾಡಿ ತುಳುನಾಡಿನ ಜನರು ತಮ್ಮನ್ನು ರಕ್ಷಿಸುವ ಶಕ್ತಿಗಳನ್ನು ಭೂತ ಎಂಬ ಪದದಿಂದ ಬಳಸುವ ರೂಢಿಯಿತ್ತು ಕಾಲಕ್ರಮೇಣ ದೈವ ಪದದ ಬಳಕೆ ಚಾಲ್ತಿಗೆ ಬಂತು. ಇವೆರಡು ಒಂದೇ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಸಂಘಟನೆಗಳು ಮನಸ್ಸು ಮಾಡಿದರೆ ಯುವ ಸಮುದಾಯವು ದಾರಿ ತಪ್ಪುವುದನ್ನು ತಪ್ಪಿಸಬಹುದು. ಸಂಘಟನೆಗಳು ಇಂತಹ ವಿಚಾರಗೊಷ್ಠಿಗಳನ್ನು ಏರ್ಪಡಿಸುವ ಅನಿವಾರ್ಯತೆಯಿದೆ. ಈ ನಿಟ್ಟಿನಲ್ಲಿ ಯುವವಾಹಿನಿಯ ಕಾರ್ಯ ಶ್ಲಾಘನೀಯ ಎಂದು ಪಡುಬಿದ್ರಿ ಬಿಲ್ಲವ ಸಂಘದ ಅಧ್ಯಕ್ಷರಾದ ವೈ.ಸುಧೀರ್ ಕುಮಾರ್ ತಿಳಿಸಿದರು. ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಯುವವಾಹಿನಿ ಪಡುಬಿದ್ರಿ ಘಟಕದ ಸಲಹೆಗಾರರಾದ ರಾಜೀವ್ ಪೂಜಾರಿ, ಪಡುಬಿದ್ರಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಸಂತೋಷ್ ಎಸ್. ಪೂಜಾರಿ, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾದ ನಿಖಿಲ್ ಪೂಜಾರಿ ಉಪಸ್ಥಿತರಿದ್ದರು. ಪಡುಬಿದ್ರಿ ಬಿಲ್ಲವ ಸಂಘದ ಅಧ್ಯಕ್ಷರಾದ ವೈ.ಸುಧೀರ್ ಕುಮಾರ್ ಸ್ವಾಗತಿಸಿ, ಪಡುಬಿದ್ರಿ ನಾರಾಯಣಗುರು ಮಂದಿರದ ಅರ್ಚಕರಾದ ಚಂದ್ರಶೇಖರ ಶಾಂತಿ ಪ್ರಸ್ತಾವಿಸಿದರು. ಯುವವಾಹಿನಿ ಪಡುಬಿದ್ರೆ ಘಟಕದ ಕಾರ್ಯದರ್ಶಿ ನಿಶ್ಮಿತ ಪಿ. ಯಚ್ ಮತ್ತು ಸುಜಾತ ಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು.

One thought on “ತುಳುನಾಡ : ಆರಾಧನೆ-ಆಶಯ-ಸ್ವರೂಪ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!