Yuvavahini

SEP 24, 2017 8.01 AM IST

ಯುವಜನರ ಗುರು ಮತ್ತು ಗುರಿ ನಾರಾಯಣಗುರು : ನಾರಾಯಣಗುರು ವಿಚಾರ ಕಮ್ಮಟ (ನಾವಿಕ)

ಯುವ ಜನತೆಗೆ ನಾರಾಯಣಗುರುಗಳ ಚಿಂತನೆ ಪ್ರೇರಣೆಯಾಗಲಿ : ಮಟ್ಟು

ದೇಶವನ್ನು ಕಾಡುತ್ತಿರುವ ನಿರುದ್ಯೋಗ, ಬಡತನ, ಕಂದಾಚಾರ, ಮೂಢನಂಬಿಕೆ, ಹಾಗೂ ದುಂದುವೆಚ್ಚದ ಸಮಾರಂಭ ಮುಂತಾದ ಸಮಸ್ಯೆಗಳಿಂದ ಮುಕ್ತವಾದ ಸಮಾಜವೊಂದರ ನಿರ್ಮಾಣದ ಗುರುತರ ಹೊಣೆಗಾರಿಕೆ ಯುವ ಸಮುದಾಯದ ಮೇಲಿದ್ದು ಈ ಕಾರ್ಯಕ್ಕೆ ಶ್ರೀ ನಾರಾಯಣಗುರುಗಳ ಚಿಂತನೆಗಳನ್ನು ಪ್ರೇರಣೆಯಾಗಿ ಸ್ವೀಕರಿಸಿಕೊಂಡು ಕಾರ್ಯೋನ್ಮುಖರಾಗಬೇಕು ಎಂದು ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ಅವರು ಹೇಳಿದರು
ನಾರಾಯಣಗುರು ವಿಚಾರ ಕಮ್ಮಟ (ನಾವಿಕ) ಮಂಗಳೂರು ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 163ನೇ ಜನ್ಮದಿನಾಚರಣೆ ಅಂಗವಾಗಿ ಯುವಜನರ ಗುರು ಮತ್ತು ಗುರಿ – ನಾರಾಯಣಗುರು ವಿಷಯದ ಕುರಿತು ಮಂಗಳೂರು ಸಂತ ಅಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ದಿನಾಂಕ 24.09.2017 ರಂದು ಆಯೋಜಿಸಿದ್ದ ದ.ಕ.ಜಿಲ್ಲಾ ಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
ಕೇರಳ ರಾಜ್ಯ ಇಂದು ಸಾಕ್ಷರತೆ ,ಉದ್ಯೋಗಶೀಲತೆ ಹಾಗೂ ಅಭಿವೃದ್ಧಿಯಲ್ಲಿ ಸಾಧಿಸಿದ ಪ್ರಗತಿಯ ಹಿಂದೆ ಶ್ರೀ ನಾರಾಯಣಗುರುಗಳು ಹುಟ್ಟು ಹಾಕಿರುವ ಸಾಮಾಜಿಕ ಚಳುವಳಿಯ ಕೊಡುಗೆ ಬಹಳ ಮಹತ್ವದ್ದಾಗಿದೆ ಎಂದವರು ಹೇಳಿದರು.
ಚಿತ್ರ ನಿರ್ಮಾಪಕ ಡಾ.ರಾಜಶೇಖರ್ ಕೋಟ್ಯಾನ್ ಅವರು ಮಾತನಾಡಿ ಬ್ರಹ್ಮಶ್ರೀ ನಾರಾಯಣಗುರುಗಳ ಚಿಂತನೆ ಸಂದೇಶಗಳಿಗೆ ಬದ್ದರಾಗಿ ನಡೆದಾಗ ಎಂದೂ ಸೋಲು ಕಾಣಲು ಸಾದ್ಯವಿಲ್ಲ ಎಂದರು.
ಕೆಎಂಸಿ ಪ್ರಾಧ್ಯಾಪಕ ಪ್ರೊ.ಎಂ.ಎಸ್.ಕೋಟ್ಯಾನ್ ಅವರು ವಿಚಾರ ಮಂಡನೆ ಮಾಡಿದರು. ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕ ಡಾ.ಗಣೇಶ್ ಅಮೀನ್ ಸಂಕಮಾರ್ ಹಾಗೂ ಮಂಗಳೂರು ವಿ.ವಿ.ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ಪ್ರತಿಕ್ರಿಯಿಸಿದರು. ನಾವಿಕದ ಗೌರವಾಧ್ಯಕ್ಷರಾದ ಯಶವಂತ ಮರೋಳಿ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಜಯಂತ ನಡುಬೈಲು, ಎಚ್.ರತೀಂದ್ರನಾಥ್, ರವಿ ಪೂಜಾರಿ ಚಿಲಿಂಬಿ ಉಪಸ್ಥಿತರಿದ್ದರು.

ಪೂಜಾರಿ ರಾಜಕೀಯ ತೊರೆದು ಸಮಾಜ ಸುಧಾರಣೆ ಮಾಡಲಿ:
ಶ್ರೀ ನಾರಾಯಣಗುರುಗಳ ಚಿಂತನೆ ಸಂದೇಶದ ಅಡಿಯಲ್ಲಿ ಸಾಮಾಜಿಕ ಸುಧಾರಣೆ ಕಾರ್ಯದ ನೇತ್ರತ್ವವನ್ನು ಜನಾರ್ದನ ಪೂಜಾರಿ ಅವರು ವಹಿಸಿಕೊಳ್ಳಬೇಕು ಅವರಿಗೆ ನಾನು ಸದಾ ಅತ್ಯಂತ ಗೌರವ ಕೊಡುತ್ತೇನೆ. ಕೆಲವು ಬಾರಿ ವಿರುದ್ದ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ. ಅಭಿಪ್ರಾಯ ಬೇಧಗಳಿದ್ದರೆ ಅದನ್ನು ವ್ಯಕ್ತಪಡಿಸುವುದು ಮೊದಲಿನಿಂದಲೂ ನಾನು ಅನುಸರಿಸಿಕೊಂಡು ಬಂದಿರುವ ಧೋರಣೆ , ಪೂಜಾರಿ ಅವರು ರಾಜಕೀಯದಿಂದ ವಿಮುಖರಾಗಿ ಸಮಾಜ ಸುಧಾರಣೆಯತ್ತ ಗಮನ ಹರಿಸಬೇಕು, ಈ ಕಾರ್ಯಕ್ಕೆ ಎಲ್ಲಾ ಯುವಜನತೆ ಅವರೊಂದಿಗೆ ಕೈ ಜೋಡಿಸಬೇಕು. ನಾನು ಕೂಡ ಅವರಿಗೆ ಜತೆ ನೀಡಲು ಸಿದ್ದ ಎಂದು ದಿನೇಶ್ ಅಮೀನ್ ಮಟ್ಟು ಹೇಳಿದರು
ಸಲಹೆಗಾರರಾದ ದೀಪಕ್ ಕೋಟ್ಯಾನ್ ಸ್ವಾಗತಿಸಿದರು, ಸುನೀಲ್ ಕುಮಾರ್ ಬಜಾಲ್ ಪ್ರಸ್ತಾವನೆಗೈದರು, ರಾಜೇಂದ್ರ ಚಿಲಿಂಬಿ ವಂದಿಸಿದರು, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ಕಾರ್ಯಕ್ರಮ ನಿರೂಪಿಸಿದರು

One thought on “ಯುವ ಜನತೆಗೆ ನಾರಾಯಣಗುರುಗಳ ಚಿಂತನೆ ಪ್ರೇರಣೆಯಾಗಲಿ : ಮಟ್ಟು

  1. ಇಂತಹ ಕಾರ್ಯಕ್ರಮಗಳು ಮತ್ತಷ್ಟು ಮೂಡಿ ಬರಲಿ…

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!