Yuvavahini

AUG 06, 2017 5.53 PM IST

ಸಿಂಚನ ವಿಶೇಷಾಂಕ : 2017

ಕನವರಿಸುವುದೇ ಬಾಲ್ಯ ಮತ್ತೊಮ್ಮೆ…….: – ನಿರ್ಮಲ ಗೋಪಾಲ್

ಮಳೆರಾಯಗೆ ಅಡ್ಡ ಹಿಡಿಯಬೇಕಿದ್ದ
ಬಣ್ಣಬಣ್ಣದ ಛತ್ರಿಯ ತುಂಬೆಲ್ಲಾ…
ಕುಂಟಲ ಹಣ್ಣುಗಳದ್ದೇ ಕಾರುಬಾರು…
ನಾ ನೆನದರೂ ಹಣ್ಣು
ನೆನೆಯಬಾರದೆಂಬ ಕಕ್ಕುಲತೆ…

ಅಮ್ಮ ಬೈಯುವಳೆಂದು ಹಸಿರೆಲೆಗಳ ತಿಂದು
ಕುಂಟಲ ಬಣ್ಣವ ಮಾಸಿಸಿ… ನಾಲಗೆ ಬಿಳಿ ಮಾಡಿದ
ನೆನೆದರೆ ಕನವರಿಸದೇ…ಬಾಲ್ಯ..ಇನ್ನೊಮ್ಮೆ…?

ಗೆಳತಿಯರೊಡನೆ ಓಡೋಡಿ
ಜೊತೆಗೂಡಿ ಗುಡ್ಡ ತೋಡು ದಾಟಿ
ಪ್ರೀತಿಯ ಶಾಲೆಗೆಂದು ಪ್ರೀತಿಯಿಂದ ಬರುತ್ತಿದ್ದ
ಅಂದಿನ ಮನಸ್ಸು ಇಂದಿನ ಮಕ್ಕಳಿಗಿಹುದೇ…!

ಶಾಲೆಗಿಹುದು ಕಲ್ಲು ಮುಳ್ಳ …ಗುಡ್ಡದ ಹಾದಿ…
ಆದರೆ… ಈ ದಿನಗಳಲ್ಲಿ… ಎಂದೂ ಅನ್ನಿಸಲಿಲ್ಲ…
ಕಲ್ಲು ಮುಳ್ಳೆಂದು….
ಅದರೀಗ ಮನೆಯ ಮೆಟ್ಟಲಿಳಿಯಬೇಕೆಂದರೆ
ಬೇಕು ಕಾಲಿಗೆರಡು ಜೋಡು…!

ದಾರಿಯುದ್ದಕ್ಕೂ ಪಕ್ಕದ ಮನೆಯಲ್ಲಿ
ಎಂದೋ ನೋಡಿದ ಗೆಳತಿಯ
ಸಿನಿಮಾ ಕತೆಗಳಿನ್ನೂ ಮನಸ್ಸಲ್ಲಿವೆ…
ಕಣ್ಣೆದುರು ಓಡುತ್ತಲ್ಲಿವೆ…

ಹಾದಿಯಲ್ಲಿ ಒಂದು ಗುಂಪಿನ
ಗೆಳತಿಯರು ಕಣ್ಮರೆಯಾದರೆ…
ಕೂಗುತ್ತಿದ್ದ ಕೂ…ಕೂ…
ಇನ್ನೂ… ಕಿವಿಯಲ್ಲಿ ಗುಂಯ್ ಗುಟ್ಟುತ್ತಿವೆ…
ಎರಡು ಜಡೆ ಹೆಣೆದು… ನೀಲಿ ಬಿಳಿ ಅಂಗಿಯ
ಶಾಲೆಗೋಡುತ್ತಿದ್ದ ಸೊಬಗ ಹೇಳತೀರದು…

ಆಗಿನ ಶಕ್ತಿಮಾನ್
ಈಗಿನ ಡೋರೆಮಾನ್‌ಗೆ
ಎಂದಾದರೂ ಸಮನಾದನೇ…?

ಅಂದಿನ ಕುಂಟ ಬಿಲ್ಲೆಗಳಿಂದು
ಕುಂಟಿಯೇ ಹೋಗಿವೆ…!
ಕಲ್ಲಾಟಕ್ಕಂತೂ ಕಲ್ಲುಗಳ ಹೆಕ್ಕುವವರಾರು…?
ಹುಡುಕುವವರಾರು…?

ನಿರ್ಮಲಾ ಗೋಪಾಲ್ ,ಬಜ್ಪೆ 94493 86373

9 thoughts on “ಕನವರಿಸುವುದೇ ಬಾಲ್ಯ ಮತ್ತೊಮ್ಮೆ…….: – ನಿರ್ಮಲ ಗೋಪಾಲ್

  1. ಕುಂಟಲ, ಕುಂಟೆ ಬಿಲ್ಲೆಗಳ ಜೊತೆಗೆ ಕಳೆದು ಹೋದ ಅದೆಷ್ಟೋ ಬಾಲ್ಯದ ಕನಸುಗಳನ್ನು ಹುಡುಕಬೇಕಾಗಿದೆ…..ಹೆಕ್ಕಿ ಕೊಡುವವರು ಯಾರು….
    ಕವಿತೆ ಚೆನ್ನಾಗಿ ಮೂಡಿ ಬಂದಿದೆ.

  2. Kuntal da nenapanaga balyada aa savi nennepulu onjonje flashback du barodundu.

    Eini bondolu,jambolu,thojank champakayi,pejakayi anchene yetho soppu phalokulu thuyerijji

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!