Yuvavahini

AUG 06, 2017 5.53 PM IST

ಸಿಂಚನ ವಿಶೇಷಾಂಕ : 2017

ಕನವರಿಸುವುದೇ ಬಾಲ್ಯ ಮತ್ತೊಮ್ಮೆ…….: – ನಿರ್ಮಲ ಗೋಪಾಲ್

ಮಳೆರಾಯಗೆ ಅಡ್ಡ ಹಿಡಿಯಬೇಕಿದ್ದ
ಬಣ್ಣಬಣ್ಣದ ಛತ್ರಿಯ ತುಂಬೆಲ್ಲಾ…
ಕುಂಟಲ ಹಣ್ಣುಗಳದ್ದೇ ಕಾರುಬಾರು…
ನಾ ನೆನದರೂ ಹಣ್ಣು
ನೆನೆಯಬಾರದೆಂಬ ಕಕ್ಕುಲತೆ…

ಅಮ್ಮ ಬೈಯುವಳೆಂದು ಹಸಿರೆಲೆಗಳ ತಿಂದು
ಕುಂಟಲ ಬಣ್ಣವ ಮಾಸಿಸಿ… ನಾಲಗೆ ಬಿಳಿ ಮಾಡಿದ
ನೆನೆದರೆ ಕನವರಿಸದೇ…ಬಾಲ್ಯ..ಇನ್ನೊಮ್ಮೆ…?

ಗೆಳತಿಯರೊಡನೆ ಓಡೋಡಿ
ಜೊತೆಗೂಡಿ ಗುಡ್ಡ ತೋಡು ದಾಟಿ
ಪ್ರೀತಿಯ ಶಾಲೆಗೆಂದು ಪ್ರೀತಿಯಿಂದ ಬರುತ್ತಿದ್ದ
ಅಂದಿನ ಮನಸ್ಸು ಇಂದಿನ ಮಕ್ಕಳಿಗಿಹುದೇ…!

ಶಾಲೆಗಿಹುದು ಕಲ್ಲು ಮುಳ್ಳ …ಗುಡ್ಡದ ಹಾದಿ…
ಆದರೆ… ಈ ದಿನಗಳಲ್ಲಿ… ಎಂದೂ ಅನ್ನಿಸಲಿಲ್ಲ…
ಕಲ್ಲು ಮುಳ್ಳೆಂದು….
ಅದರೀಗ ಮನೆಯ ಮೆಟ್ಟಲಿಳಿಯಬೇಕೆಂದರೆ
ಬೇಕು ಕಾಲಿಗೆರಡು ಜೋಡು…!

ದಾರಿಯುದ್ದಕ್ಕೂ ಪಕ್ಕದ ಮನೆಯಲ್ಲಿ
ಎಂದೋ ನೋಡಿದ ಗೆಳತಿಯ
ಸಿನಿಮಾ ಕತೆಗಳಿನ್ನೂ ಮನಸ್ಸಲ್ಲಿವೆ…
ಕಣ್ಣೆದುರು ಓಡುತ್ತಲ್ಲಿವೆ…

ಹಾದಿಯಲ್ಲಿ ಒಂದು ಗುಂಪಿನ
ಗೆಳತಿಯರು ಕಣ್ಮರೆಯಾದರೆ…
ಕೂಗುತ್ತಿದ್ದ ಕೂ…ಕೂ…
ಇನ್ನೂ… ಕಿವಿಯಲ್ಲಿ ಗುಂಯ್ ಗುಟ್ಟುತ್ತಿವೆ…
ಎರಡು ಜಡೆ ಹೆಣೆದು… ನೀಲಿ ಬಿಳಿ ಅಂಗಿಯ
ಶಾಲೆಗೋಡುತ್ತಿದ್ದ ಸೊಬಗ ಹೇಳತೀರದು…

ಆಗಿನ ಶಕ್ತಿಮಾನ್
ಈಗಿನ ಡೋರೆಮಾನ್‌ಗೆ
ಎಂದಾದರೂ ಸಮನಾದನೇ…?

ಅಂದಿನ ಕುಂಟ ಬಿಲ್ಲೆಗಳಿಂದು
ಕುಂಟಿಯೇ ಹೋಗಿವೆ…!
ಕಲ್ಲಾಟಕ್ಕಂತೂ ಕಲ್ಲುಗಳ ಹೆಕ್ಕುವವರಾರು…?
ಹುಡುಕುವವರಾರು…?

ನಿರ್ಮಲಾ ಗೋಪಾಲ್ ,ಬಜ್ಪೆ 94493 86373

9 thoughts on “ಕನವರಿಸುವುದೇ ಬಾಲ್ಯ ಮತ್ತೊಮ್ಮೆ…….: – ನಿರ್ಮಲ ಗೋಪಾಲ್

  1. ಕುಂಟಲ, ಕುಂಟೆ ಬಿಲ್ಲೆಗಳ ಜೊತೆಗೆ ಕಳೆದು ಹೋದ ಅದೆಷ್ಟೋ ಬಾಲ್ಯದ ಕನಸುಗಳನ್ನು ಹುಡುಕಬೇಕಾಗಿದೆ…..ಹೆಕ್ಕಿ ಕೊಡುವವರು ಯಾರು….
    ಕವಿತೆ ಚೆನ್ನಾಗಿ ಮೂಡಿ ಬಂದಿದೆ.

  2. Kuntal da nenapanaga balyada aa savi nennepulu onjonje flashback du barodundu.

    Eini bondolu,jambolu,thojank champakayi,pejakayi anchene yetho soppu phalokulu thuyerijji

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!