Yuvavahini

OCT 01, 2016 5.14 AM IST

ಯುವವಾಹಿನಿ(ರಿ) ಪಡುಬಿದ್ರೆ ಘಟಕ

ಪಡುಬಿದ್ರಿ ಘಟಕದ ವತಿಯಿಂದ ವಿಚಾರಗೋಷ್ಠಿ ಕಾರ್ಯಕ್ರಮ

ತುಳುನಾಡಿನ ಪರಂಪರೆ, ದೈವಾರಾಧನೆಯ ಬಗ್ಗೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 88 ನೇ ಪುಣ್ಯತಿಥಿಯ ಅಂಗವಾಗಿ ಪಡುಬಿದ್ರಿ ಬಿಲ್ಲವ ಸಂಘ ಮತ್ತು ಯುವವಾಹಿನಿ ಪಡುಬಿದ್ರಿ ಘಟಕವು ಜಂಟಿಯಾಗಿ ನಡೆಸಿದ ಕೊಡಿಯಡಿತ ಸತ್ಯೊಲು ಎಂಬ ವಿಚಾರಗೋಷ್ಟಿಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಮಾತನಾಡಿ ಪುರಾತನ ಕಾಲದಲ್ಲಿ ಕೂಡು ಕುಟುಂಬದಲ್ಲಿ ಮಹಿಳೆಯರೇ ದೈವಗಳಿಗೆ ದೀಪವಿಡುವ ಪರಿಕ್ರಮವಿದ್ದು ಕಾಲಾನಂತರ ಮಹಿಳೆಯರನ್ನು ಹಲವಾರು ಕಾರಣ ನೀಡಿ ದೂರವಿರಿಸಲಾಯಿತು. ದೈವಗಳನ್ನೂ ಪೂಜಿಸುವುದು ಮಹಿಳೆಯರ ಹಕ್ಕಾಗಿದ್ದು ಇದಕ್ಕೆ ಬದ್ಧರಾಗಿರಬೇಕು. ವೈದಿಕತೆಯ ಪ್ರಭಾವದಿಂದಾಗಿ ದೈವಾರಾಧನೆಯಲ್ಲಿ ಕೆಲವೊಂದು ಬದಲಾವಣೆಗಳಾದವು. ದೈವಗಳಿಗೆ ಆಡಂಭರದ ಬದಲು ಭಕ್ತಿ ಮುಖ್ಯ ಎಂದರು.

ಜಾನಪದ ಸಂಶೋಧಕ ಡಾ. ವೈ.ಎನ್. ಶೆಟ್ಟಿ ಮಾತನಾಡಿ ದೈವಾರಾಧನೆಯು ಅಗೆದಷ್ಟು ಆಳವಾದ ವಿಷಯವಾಗಿದ್ದು ಅಲ್ಲಿ ಆಚರಣೆಯ ನಿಯಮವನ್ನು ಮೀರದೆ ಹಿರಿಯರು ನಂಬಿ ಬಂದ ಕಟ್ಟು ಪಾಡುಗಳ ಅರ್ಥ, ಉದ್ದೇಶ ತಿಳಿಯಬೇಕಾಗಿದೆ. ಜನರ ಭಾವನೆಗಳು ಚಂಚಲ ರಹಿತವಾಗಿರಬೇಕು ಸಸ್ಯಾಹಾರ, ಮಾಂಸಾಹಾರದ ಪ್ರಶ್ನೆಯು ಅವರವರಿಗೆ ಬಿಟ್ಟದ್ದು. ಆದರೆ ಯಾವುದೇ ನಿರ್ಧಾರಕ್ಕೆ ನಾವು ಬದ್ದರಾಗಿರಬೇಕು ಎಂದರು.

ಪುತ್ತೂರು ದೈವಾರಾಧಕರ ಸಂಘದ ಸಂಚಾಲಕ, ಜುಮಾದಿ(ಧೂಮಾವತಿ) ದೈವದ ಬಗೆಗೆ ಸಂಶೋಧನೆ ಮಾಡಿ ಪದವಿ ಗಳಿಸಿದ ಡಾ. ನವೀನ್ ಕುಮಾರ್ ಮರಿಕೆ ಜುಮಾದಿ ದೈವದ ಬಗೆಗೆ ಹಾಗೆಯೇ ತುಳುನಾಡಿನ ಮೂಲ ಜನಪದವು ಬಾಯಿಯಿಂದ ಬಾಯಿಗೆ ಬಂದಂತಹ ಮಾಹಿತಿಗಳು. ಇಂದು ಪ್ರತಿಯೊಂದು ದೈವದ ಬಗೆಗೆ ತಿಳಿಯಲು ನಮಗೆ ಸಾಕಷ್ಟು ಸಂಶೋಧನಾ ಆಧಾರಗಳಿವೆ ಅದರ ಉಪಯೋಗ ಪಡೆಯಬೇಕಾಗಿದೆ ಎಂದರು.

ಸಮಾರಂಭದಲ್ಲಿ ಪಡುಬಿದ್ರಿ ಬಿಲ್ಲವ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್, ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷ ವೀರೇಂದ್ರ ಎನ್., ಘಟಕದ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕ ಶಾಶ್ವತ್ ಪೂಜಾರಿ, ಸಂಘದ ಅರ್ಚಕ ಚಂದ್ರಶೇಖರ ಶಾಂತಿ, ದೈವಾರಾಧಕರು, ದೈವದ ಅರ್ಚಕರು, ದೈವ ನರ್ತಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಪಡುಬಿದ್ರಿ ಬಿಲ್ಲವ ಸಂಘದ ಅರ್ಚಕ ಚಂದ್ರಶೇಖರ ಶಾಂತಿ ಪ್ರಾಸ್ತಾವನೆಗೈದರು. ಘಟಕದ ಕಾರ್ಯದರ್ಶಿ ಯಶೋಧ ವಂದಿಸಿದರು. ಕಾರ್ಯಕ್ರಮವನ್ನು ರವಿರಾಜ್ ಎನ್. ಕೋಟ್ಯಾನ್ ಮತ್ತು ಚೈತ್ರ ನಿರೂಪಿಸಿದರು.

One thought on “ಪಡುಬಿದ್ರಿ ಘಟಕದ ವತಿಯಿಂದ ವಿಚಾರಗೋಷ್ಠಿ ಕಾರ್ಯಕ್ರಮ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!