Yuvavahini

JAN 23, 2017 2.14 AM IST

ಯುವಜನ ಜಾಗೃತಿ ಪ್ರಗತಿ – ಕಾರ್ಯಾಗಾರ ವಿಕಸನದ ವೇದಿಕೆ : ಯಶವಂತ ಪೂಜಾರಿ

 

ಮಂಗಳೂರು: ಯುವವಾಹಿನಿ (ರಿ) ಮಂಗಳೂರು ಘಟಕ ಇದರ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಯುವಜನ ಜಾಗೃತಿ ಪ್ರಗತಿ ಉಪನ್ಯಾಸ, ಸಂವಾದ, ಸಮನ್ವಯ ಕಾರ್ಯಾಗಾರವು ದಿನಾಂಕ 23.12.2017 ರಂದು ಗೋಕರ್ಣನಾಥೇಶ್ವರ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ವಿದ್ಯಾರ್ಥಿಗಳು ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಇಂತಹ ಕಾರ್ಯಾಗಾರವು ಅವಶ್ಯಕವಾಗಿದ್ದು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಾರ್ಯಾಗಾರವನ್ನು ಉಧ್ಘಾಟಿಸಿದ ಗೋಕರ್ಣನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಣುಕಾ ಕೆ ತಿಳಿಸಿದರು . ಉದ್ಯಮಿ ಶ್ರೀ ದತ್ತೇಶ್ ಪೂಜಾರಿ , ಪ್ರಿಯಾ ವುಡ್ ವರ್ಕ್ಸ್ ಕೋಡಿಕಲ್ ಇದರ ಮಾಲಕರಾದ ಶ್ರೀ ದೇವೇಂದ್ರ ಕೋಟ್ಯಾನ್ ಮುಖ್ಯ ಅಥಿತಿಗಳಾಗಿ ಭಾಗವಹಿನಿ ಶುಭ ಹಾರೈಸಿದರು. ಯುವವಾಹಿನಿ(ರಿ) ಕೇಂದ್ರ ಸಮಿತಿ ಅದ್ಯಕ್ಷರಾದ ಶ್ರೀ ಯಶವಂತ್ ಪೂಜಾರಿ ಮಾತನಾಡಿ ಮಂಗಳೂರು ಘಟಕವು ಕಳೆದ ಮೂರು ವರ್ಷಗಳ ಹಿಂದೆ ಪ್ರಾರಂಭಿಸಿದ ಯುವಜನ ಜಾಗೃತಿ ಪ್ರಗತಿ ಕಾರ್ಯಾಗಾರವು ವಿದ್ಯಾರ್ಥಿಗಳಲ್ಲಿ ಚಿಂತನೆ, ವಿಮರ್ಶೆ ಮತ್ತು ವ್ಯಕ್ತಿತ್ವ ವಿಕಸನದ ವೇದಿಕೆಯಾಗಿದ್ದು ವಿದ್ಯಾರ್ಥಿಗಳು ಕಾರ್ಯಾಗಾರದ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕೆಂದರು. ಸಮಾರಂಭದ ಅದ್ಯಕ್ಷತೆಯನ್ನು ಯುವವಾಹಿನಿ(ರಿ) ಮಂಗಳೂರು ಘಟಕದ ಅದ್ಯಕ್ಷರಾದ ಶ್ರೀ ರವೀಶ್ ಕುಮಾರ್ರವರು ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಸಂಘಟನಾ ಕಾರ್ಯದರ್ಶಿ ಲಕ್ಷ್ಮೀ ನಾರಾಯಣ ಉಪಸ್ಥಿತರಿದ್ದರು. ಕಾರ್ಯಾಗಾರದ ಸಂಚಾಲಕರಾದ ಜಗನ್ನಾಥ್ ಶಿರ್ಲಾಲ್ ಪ್ರಾಸ್ತಾವಿಕ ಮಾತುಗಳನ್ನಾಡಿದರು, ಕಾರ್ಯದರ್ಶಿ ಪ್ರವೀಣ್ ಸಾಲ್ಯಾನ್ ಕಿರೋಡಿ ಧನ್ಯವಾದ ವಿತ್ತರು. ಮಾಜಿ ಅದ್ಯಕ್ಷರಾದ ಶ್ರೀ ಅಶೋಕ್ ಇಂಜಿನಿಯರ್ ನಿರೂಪಿಸಿದರು.
ನಂತರ ಕಾರ್ಯಾಗಾರದಲ್ಲಿ, ವರ್ತಮಾನದಲ್ಲಿ ನಾರಾಯ ಗುರುಗಳ ಸಂದೇಶ ಎಂಬ ವಿಷಯದ ಬಗ್ಗೆ ಆಳ್ವಾಸ್ ಕಾಲೇಜಿನ ಉಪನ್ಯಾಸಕರಾದ ಡಾ. ಯೋಗಿಶ್ ಕೈರೋಡಿ, ಹಾಗೂ ಸಾಮಾಜಿಕ ಜಾಲತಾಣಗಳು ಮತ್ತು ಯುವ ಜನತೆಯ ಮನಸ್ಥಿತಿ ವಿಷಯದ ಬಗ್ಗೆ ಶ್ರೀ ನವನೀತ್ ಡಿ ಹಿಂಗಾಣಿ ಉಪನ್ಯಾಸ ನೀಡಿದರು. ಸಮನ್ವಯಕಾರರಾಗಿ ಶ್ರೀ ಶೇಷಪ್ಪ ಅಮೀನ್, ಹಾಗೂ ಶ್ರೀ ರಾಕೇಶ್ ಕುಮಾರ್ ನಡೆಸಿಕೊಟ್ಟರು. ಕಾರ್‍ಯಾಗಾರದಲ್ಲಿ ಸುಮಾರು ೧೪೦ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!