Yuvavahini

FEB 18, 2018 3.20 PM IST

ಯುವವಾಹಿನಿ (ರಿ) ಮಂಗಳೂರು ಘಟಕ

ನಾಗರಿಕಾ ಸೇವಾ ಪರೀಕ್ಷೆ ಕಬ್ಬಿಣದ ಕಡಲೆಯಲ್ಲ : ಲೋಬೋ

ನಾಗರಿಕಾ ಸೇವಾ ಪರೀಕ್ಷೆ ಕಬ್ಬಿಣದ ಕಡಲೆಯಲ್ಲ ಶಿಸ್ತು, ಶ್ರದ್ಧೆ, ಗುರಿ, ಆಳ ಅಧ್ಯಯನ, ಜತೆಗೆ ದೃಢವಾದ ಆತ್ಮವಿಶ್ವಾಸ ಇದ್ದರೆ ಖಂಡಿತವಾಗಿ ಯಶಸ್ಸು ಸಾಧ್ಯ ಎಂದು ಶಾಸಕ ಜೆ.ಆರ್.ಲೋಬೋ ಹೇಳಿದರು. ಮಂಗಳೂರು ಬಲ್ಮಠದ ಬೆಸೆಂಟ್ ಜತ್ತನ್ನ ಸಭಾಂಗಣದಲ್ಲಿ ದಿನಾಂಕ 18.02.2018 ರಂದು ಜರುಗಿದ ಯುವವಾಹಿನಿ (ರಿ) ಮಂಗಳೂರು ಘಟಕ, ಆತ್ಮಶಕ್ತಿ ವಿವಿದ್ದೋದ್ದೇಶ ಸಹಕಾರಿ ಸಂಘ, ಕರ್ನಾಡಕ ಕ್ರಿಶ್ಚಿಯನ್ ಅಸೋಸಿಯೇಷನ್ ಸಿಸೈಟಿ, ಹಾಗೂ ಸರ್ವಜ್ಞ ಐಎಎಸ್ ಅಕಾಡೆಮಿ ವತಿಯಿಂದ ಐಎಎಸ್, ಐಪಿಎಸ್, ಕೆಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಉಚಿತ ಪ್ರೇರಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ನಾನು ಕೂಡಾ ಗ್ರಾಮೀಣ ಭಾಗದಿಂದ ಬಂದಂತಹ ವಿದ್ಯಾರ್ಥಿ ನಾಗರಿಕಾ ಸೇವಾ ಪರೀಕ್ಷೆ ಎದುರಿಸಿ ಉತ್ತಮ ಅಧಿಕಾರಿ ಆಗಬೇಕು ಎಂಬ ಕನಸು ಕಂಡಿದ್ದೆ ಅದಕ್ಜಾಗಿ ಶ್ರದ್ಧೆಯಿಂದ ಓದಿ ಕೆಎಎಸ್ ಪಾಸು ಮಾಡಿ‌ ಅಧಿಕಾರಿ ಆದೆ. ಸಮಾಜ ಸೇವೆ ಮಾಡುವುದಕ್ಕೆ ಇಂತಹ ಹುದ್ದೆಗಳು ಪ್ರೇರೇಪಣೆ ನೀಡುತ್ತದೆ. ಆಗಿನ‌ ಕಾಲದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಇಷ್ಟೊಂದು ರೀತಿಯ ಸೌಲಭ್ಯ ಇರಲಿಲ್ಲ ಈಗಿನ‌ ಕಾಲದಲ್ಲಿ ಹಲವಾರು ಸಂಸ್ಥೆಗಳು ಐಎಎಸ್, ಕೆಎಎಸ್, ಐಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಾಹಿತಿ ಶಿಬಿರ ಹಮ್ಮಿಕೊಳ್ಳುತ್ತಿವೆ ಇಂತಹ ಅಮೂಲ್ಯ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಪ್ರೊಬೆಷನರಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ್ ಹಕೈ, ಮಾತನಾಡಿ ಬಹಳಷ್ಟು ಜನರು ಐಎಎಸ್ , ಕೆಎಎಸ್, ಮುಂತಾದ ಪರೀಕ್ಷೆಗಳನ್ನು ಪ್ಯಾಷನ್ ಗಾಗಿ ಎದುರಿಸುತ್ತಾರೆ. ಅಂತಹ ಭಾವನೆ ಬೇಡ ನಾಗರಿಕಾ ಸೇವಾ ಪರೀಕ್ಷೆ ಎದುರಿಸವ ಕ್ರಮ, ಯಾಕಾಗಿ ಹೇಗೆ ಅದಕ್ಕೆ ಬೇಕಾಗುವ ತಯಾರಿ ನಿರಂತರ ಓದು ಮುಖ್ಯ ಎಂದರು.

ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಉಪನ್ಯಾಸಕಿ ಸುಮನಾ ಸುಧಾಕರ್, ಸರ್ವಜ್ಞ ಐಎಎಸ್ ಅಕಾಡೆಮಿಯ ನಿರ್ದೇಶಕರಾದ ಸುರೇಶ್ ಎಮ್.ಎಸ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಶಿಬಿರ ನಡೆಸಿಕೊಟ್ಟರು.
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ಉಪಸ್ಥಿತರಿದ್ದರು ಆತ್ಮಶಕ್ತಿ ಸಹಕಾರಿ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಸ್ವಾಗತಿಸಿದರು, ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ನವೀನ್ ಚಂದ್ರ ಧನ್ಯವಾದ ನೀಡಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!