Yuvavahini

SEP 18, 2016 5.25 AM IST

ಯುವವಾಹಿನಿ(ರಿ) ಸುರತ್ಕಲ್ ಘಟಕ

ಸುರತ್ಕಲ್ ಘಟಕದ ವತಿಯಿಂದ ಶ್ರೀ ಗುರುಸ್ಮರಣೆ ಕಾರ್ಯಕ್ರಮ

ದಿ. 18-09-2016 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ವತಿಯಿಂದ ಗುರುಜಯಂತಿ ಪ್ರಯುಕ್ತ ಶ್ರೀ ಗುರುಸ್ಮರಣೆ ಕಾರ್ಯಕ್ರಮ ಜರಗಿತು.

ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಸುರತ್ಕಲ್ ಪರಿಸರದ ಆಮಂತ್ರಿತ ಭಕ್ತಿಗೀತೆ ಸಂಗೀತ ಬಳಗದವರಿಂದ ಭಕ್ತಿಗೀತೆ ಹಾಡುಗಾರಿಕೆ ಸಮೂಹ ಸ್ಪರ್ಧೆಯನ್ನು ಘಟಕದ ಮಾಜಿ ಅಧ್ಯಕ್ಷ ವಿಜಯ ಎಸ್. ಕುಕ್ಯಾನ್‌ರವರ ಸಂಚಾಲಕತ್ವದಲ್ಲಿ ಆಯೋಜಿಸಲಾಗಿತ್ತು.

ಭಕ್ತಿಗೀತೆ ಸ್ಪರ್ಧಾ ಕಾರ್ಯಕ್ರಮವನ್ನು ಸುರತ್ಕಲ್ ಅಕ್ಷಯ ಡೆವಲಪರ್‍ಸ್‌ನ ಮಾಲಕ ಅಕ್ಷಯ ಎನ್. ಬಂಗೇರರವರು ಉದ್ಘಾಟಿಸಿದರು. ಈ ಸ್ಪರ್ಧಾ ಕಾರ್ಯಕ್ರಮ 8 ಭಕ್ತಿಗೀತೆ ಸಂಗೀತ ಬಳಗದವರು ಭಾಗವಹಿಸಿದ್ದರು.

ಸಂಜೆ ನಡೆದ ಸಮಾರೋಪ ಹಾಗೂ ಸಭಾ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸಂಘ ಕುಳಾಯಿ ಇದರ ಅಧ್ಯಕ್ಷ ಎಂ.ಟಿ. ಸಾಲ್ಯಾನ್‌ರವರು ಉದ್ಘಾಟಿಸಿದರು.

ಶ್ರೀ ಸುಧಾಕರ ರಾವ್ ಪೇಜಾವರರವರು ಶ್ರೀ ನಾರಾಯಣ ಗುರುಗಳ ಬಗ್ಗೆ ಧಾರ್ಮಿಕ ಉಪನ್ಯಾಸ ನೀಡಿದರು. ಸಮಾರಂಭದಲ್ಲಿ ನಾಟಕ ಹಾಗೂ ಸಾಹಿತ್ಯ ರಂಗದಲ್ಲಿ ಸಾಧನೆಗೈದ ವಸಂತ ಅಮೀನ್, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಕೇಶವ ಪೂಜಾರಿ ಹಾಗೂ ಸಮಾಜಸೇವೆಯಲ್ಲಿ ಸಾಧನೆಗೈದ ಎನ್.ಎಸ್. ಉಮೇಶ್ ದೇವಾಡಿಗ ಇವರುಗಳನ್ನು ಗೌರವಿಸಿ ಸನ್ಮಾನಿಸಲಾಯಿತು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಹಾಗೂ 11 ಮಂದಿ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.

ಯಕ್ಷಗಾನ ಹಾಗೂ ವಿವಿಧ ಕಲಾಕ್ಷೇತ್ರಗಳಲ್ಲಿ ಸಾಧನೆಗೈದು ವಿವಿಧ ಪ್ರಶಸ್ತಿಗಳಿಗೆ ಭಾಜನರಾದ ಪ್ರತಿಭೆ ಶ್ರೀಮತಿ ಪ್ರತೀಕ್ಷಾ ಸೌಪರ್ಣರವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಗುರುಸ್ಮರಣೆ ಪ್ರಯುಕ್ತ 20-08-2016 ರಂದು ಹೈಸ್ಕೂಲ್ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಭಾಗವಹಿಸಿದ ಎಲ್ಲ ಸಂಗೀತ ಬಳಗದವರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ಮುಖವಾಣಿ ಚಿಲುಮೆ ಪತ್ರಿಕೆಯನ್ನು ಮಹಾಬಲ ಪೂಜಾರಿ ಕಡಂಬೋಡಿ ಬಿಡುಗಡೆಗೊಳಿಸಿದರು. ಚಿಲುಮೆ ಸಂಪಾದಕ ಕೃಷ್ಣ ಪಿ. ಅಂಚನ್‌ರವರು ಕಾರ್‍ಯಕ್ರಮ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಇನ್‌ಫೋಸಿಸ್‌ನ ಸೀನಿಯರ್ ಪ್ರಾಜೆಕ್ಟ್ ಮೆನೇಜರ್ ಭರತೇಶ್ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಭಾಗವಹಿಸಿದ್ದರು.

ಸುರತ್ಕಲ್ ಘಟಕದ ಅಧ್ಯಕ್ಷ ಭಾಸ್ಕರ್ ಸಾಲ್ಯಾನ್ ಅಗರಮೇಲುರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್‍ಯದರ್ಶಿ ವಿವೇಕ್ ಬಿ. ಕೋಟ್ಯಾನ್ ಹಾಗೂ ಕಾರ್ಯಕ್ರಮ ಸಂಚಾಲಕ ಕಿಶೋರ್ ಕುಮಾರ್, ಕುತ್ತೆತ್ತೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಧ್ಯಕ್ಷ ಭಾಸ್ಕರ್ ಸಾಲ್ಯಾನ್ ಅಗರಮೇಲು ಸ್ವಾಗತಿಸಿದರು. ಗಂಗಾಧರ ಪೂಜಾರಿ ಚೇಳ್ಯಾರು ಪ್ರಸ್ತಾವನೆಗ್ಯದರು. ಕಿಶೋರ್ ಕುಮಾರ್ ವಂದಿಸಿದರು. ಶ್ರೀ ಯೋಗೀಶ್ ಸನಿಲ್ ಕುಳಾಯಿ, ರಿತೇಶ್ ಕುಮಾರ್ ಮತ್ತು ಶ್ರೀ ವಿನಯ ಕುಮಾರ್ ಜೋಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಸುರತ್ಕಲ್ ಘಟಕದ ವತಿಯಿಂದ ಗುರುಜಯಂತಿ ಪ್ರಯುಕ್ತ ತಾ. 20-08-2016 ರಂದು ಹೈಸ್ಕೂಲ್ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!