ಯುವವಾಹಿನಿ (ರಿ) ಕೂಳೂರು ಘಟಕದ ಆಶ್ರಯದಲ್ಲಿ

ಉಚಿತ ನೇತ್ರ ತಪಾಸಣಾ ಶಿಬಿರ

ಯುವವಾಹಿನಿ (ರಿ) ಕೂಳೂರು ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರ ಕೂಳೂರು ಇದರ ಸಹಯೋಗದಲ್ಲಿ ಮಂಗಳೂರು ಕೆಮಿಕಲ್ಸ್ ಆಂಡ್ ಫರ್ಟಿಲೈಜರ್ ಲಿಮಿಟೆಡ್ ಮಂಗಳೂರು ಇದರ ಸಹಕಾರದೊಂದಿಗೆ ಜಸ್ಟಿಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಮಂಗಳೂರು ಇಲ್ಲಿಯ ತಜ್ಞ ವೈದ್ಯರ ತಂಡದೊಂದಿಗೆ ದಿನಾಂಕ 11-03-2018 ರಂದು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ದಿ! ಶ್ರೀಮತಿ ಜಾನಮ್ಮ ಸೂಡಪ್ಪ ಪೂಜಾರಿ ಸಭಾಭವನದಲ್ಲಿ “ಉಚಿತ ನೇತ್ರ ತಪಾಸಣಾ ಶಿಬಿರ” ಏರ್ಪಡಿಸಲಾಗಿತ್ತು.
ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ದಯಾನಂದ ಶೆಟ್ಟಿ ಯವರು ದೀಪ ಬೆಳಗಿಸಿ ಶಿಬಿರ ಉದ್ಘಾಟಿಸಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಅಧ್ಯಕ್ಷರಾದ ಜಯಾನಂದ್ ಅಮೀನ್ ಪುನ್ಕೆಮಾರ್, ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಗೌರವ ಅಧ್ಯಕ್ಷರು ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಉಪಾಧ್ಯಕ್ಷರಾದ ಶ್ರೀಯುತ ರಾಘವೇಂದ್ರ ಕೂಳೂರು, ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಪ್ರದಾನ ಕಾರ್ಯದರ್ಶಿ ಸದಾಶಿವ ಸುವರ್ಣ, ಎಮ್ ಸಿಎಫ್ ಸಂಸ್ಥೆಯ ಡೈರೆಕ್ಟರ್ (ವರ್ಕ್ಸ್) ಕೆ. ಪ್ರಭಾಕರ್ ರಾವ್ ಯುವವಾಹಿನಿ ಕೂಳೂರು ಘಟಕದ ಗೌರವ ಸಲಹೆಗಾರರಾದ ನೇಮಿರಾಜ್. ಪಿ
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಕೂಳೂರು ರವರು ಎಲ್ಲರನ್ನೂ ಸ್ವಾಗತಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸ್ಥಳೀಯ ಕಾರ್ಪೊರೇಟರ್ ದಯಾನಂದ ಶೆಟ್ಟಿ ಯವರು ಮಾತನಾಡಿ, ಇವತ್ತು ನಡೆಯಲಿರುವ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಯುವವಾಹಿನಿ ಕೂಳೂರು ಘಟಕದವರು ಹಮ್ಮಿಕೊಂಡಿದ್ದು, ಇದು ಒಂದು ಒಳ್ಳೆಯ ಕಾರ್ಯಕ್ರಮ. ಕೂಳೂರಿನ ಪರಿಸರದವರು ಹೆಚ್ಚಾಗಿ ಕಣ್ಣಿನ ತೊಂದರೆ ಉಳ್ಳವರು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು. ಹಾಗೆಯೇ ಇತ್ತೀಚೆಗೆ ಸ್ಥಾಪಿಸಲ್ಪಟ್ಟ ಯುವವಾಹಿನಿ (ರಿ) ಕೂಳೂರು ಘಟಕವು ಒಳ್ಳೆಯ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಜೊತೆಗೆ ಇವತ್ತಿನ ಕಾರ್ಯಕ್ರಮವು ಉತ್ತಮ ರೀತಿಯಲ್ಲಿ ನಡೆಯಲೆಂದು ಶುಭ ಹಾರೈಸಿದರು.
ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ಮಾತನಾಡಿ ಮನುಷ್ಯನಿಗೆ ಬಹಳ ಮುಖ್ಯವಾದ ಅಂಗ ಕಣ್ಣು, ಆದುದರಿಂದ ಕಣ್ಣಿನ ಕಾಳಜಿಯನ್ನು ಮುಖ್ಯವಾಗಿ ವಹಿಸಬೇಕು. ಯುವವಾಹಿನಿ ಕೂಳೂರು ಘಟಕವು, ಕೂಳೂರು ಪರಿಸರದವರಿಗೆ ಹಮ್ಮಿಕೊಂಡಂತಹ ಈ ಕಾರ್ಯಕ್ರಮ ಎಲ್ಲರಿಗೂ ಪೂರಕವಾಗಿರಬೇಕು, ಇದರ ಉಪಯೋಗವನ್ನು ಎಲ್ಲರೂ ಪಡೆದುಕೊಂಡರೆ ಉತ್ತಮ ಎಂದರು.
ನಂತರ ಎಮ್ ಸಿಎಫ್ ಸಂಸ್ಥೆಯ ಅಧಿಕಾರಿಯಾದ ಶ್ರೀಯುತ ಪ್ರಭಾಕರ್ ರಾವ್ ಅವರು ಮಾತನಾಡಿ ಎಮ್ ಸಿಎಫ್ ಸಂಸ್ಥೆಯು ತನ್ನ ಪರಿಸರದ ಜನರಿಗೆ ಅನೇಕ ರೀತಿಯಲ್ಲಿ ಉಚಿತವಾಗಿ ಸೌಲಭ್ಯಗಳನ್ನು ಒದಗಿಸುತ್ತಿದ್ದು ಇಂತಹ ಶಿಬಿರವನ್ನು ಆಚರಿಸುವಲ್ಲಿ ಒಪ್ಪಿಕೊಂಡಂತಹ ಯುವವಾಹಿನಿ (ರಿ) ಕೂಳೂರು ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮವನ್ನು ಎಮ್ ಸಿಎಫ್ ಸಂಸ್ಥೆಯ ಅಧಿಕಾರಿಯಾದ ಡಾ! ಯೋಗೀಶ್ ಭಟ್ ನಿರೂಪಿಸಿದರು. ಈ ಕಾರ್ಯಕ್ರಮವನ್ನು ನಡೆಸಲು ಮುಖ್ಯ ರೂವಾರಿಯಾದ ಎಮ್ ಸಿಎಫ್ ಸಂಸ್ಥೆಯ ಮತ್ತೋರ್ವ ಅಧಿಕಾರಿಯವರಾದ ಶ್ರೀಯುತ ಜಯರಾಮ್ ಕಾ ರಂದೂರು ರವರ ಧನ್ಯವಾದ ಸಮರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ನಂತರ ಕೆಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ವೈದ್ಯರ ತಂಡದಿಂದ ಶಿಬಿರವು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಿತು. ಇದರ ಪ್ರಯೋಜನವನ್ನು ಸುಮಾರು 280 ಸಾರ್ವಜನಿಕರು ಪಡೆದುಕೊಂಡರು ಹಾಗೂ ದಿನಾಂಕ 14-3-2018 ರಂದು ಉಚಿತ ನೇತ್ರ ಚಿಕಿತ್ಸೆಗಾಗಿ 33 ಮಂದಿಯ ತಂಡವನ್ನು ಯುವವಾಹಿನಿ ಕೂಳೂರು ಘಟಕದ ಸದಸ್ಯೆಯಾದ ಜಯಶ್ರೀ ಅವರ ನೇತೃತ್ವದಲ್ಲಿ ದೇರಳಕಟ್ಟೆಯಲ್ಲಿರುವ ಆಸ್ಪತ್ರೆಯಲ್ಲಿ ನೀಡಲಾಯಿತು.
ಕೊನೆಯದಾಗಿ ದಿನಾಂಕ 25-3-18 ರಂದು ಸುಮಾರು 150 ಮಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಉಚಿತವಾಗಿ ಕನ್ನಡಕವನ್ನು ವಿತರಿಸಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!