Yuvavahini

MAY 05, 2018 4.25 PM IST

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ವತಿಯಿಂದ ಸಂತೃಪ್ತ ಮಹಿಳೆ ಕಾರ್ಯಾಗಾರ

ಕೌಟುಂಬಿಕ ವಲಯದಲ್ಲಿ ಹೆಣ್ಣಿನ ಪಾತ್ರ ಅದ್ಭುತ , ವರ್ಣನಾತೀತ : ಶಹನಾಜ್

ಮಂಗಳೂರು : ಕೌಟುಂಬಿಕ ವಲಯದಲ್ಲಿರುವ ವ್ಯಕ್ತಿಗಳಿಗೆ ಹೆಣ್ಣು ಆಸಕ್ತಿಯ, ಆತ್ಮ ಸಂಗಾತದ ವಿಷಯ. ತಾಯಿಯಾಗಿ, ತಂಗಿಯಾಗಿ, ಅಕ್ಕನಾಗಿ, ಹೆಂಡತಿಯಾಗಿ, ನಾದಿನಿಯಾಗಿ, ಅತ್ತಿಗೆಯಾಗಿ, ಅತ್ತೆಯಾಗಿ, ಗೆಳತಿಯಾಗಿ, ಪ್ರೇಮಿಯಾಗಿ ಆಕೆ ನಿರ್ವಹಿಸುವ ಪಾತ್ರಗಳು ಅದ್ಬುತ, ವರ್ಣನಾತೀತ. ಏಕೆಂದರೆ ಸ್ತ್ರೀ ಒಂದು ಸಮುದಾಯವನ್ನು ಸಮರ್ಥವಾಗಿ ಪ್ರತಿನಿಧಿಸುವ ಸಾಮರ್ಥ್ಯ ಹೊಂದಿರುವಂತಹವಳು. ಕೌಟುಂಬಿಕ ವಲಯದ ಸ್ತ್ರೀ ಕುಟುಂಬದ ಕಟ್ಟುಪಾಡುಗಳಿಗೆ ಒಳಗಾಗಿ ಜೀವನ ನಡೆಸುತ್ತಿದ್ದಾಳೆ ಹಾಗೂ ಆಕೆ ತನ್ನ ಕುಟುಂಕ್ಕಾಗಿ ಎಲ್ಲಾ ತ್ಯಾಗಕ್ಕೂ ಸಿದ್ದಳಾಗಿರುತ್ತಾಳೆ ಎಂದು ಅನುಪಮಾ ಮಹಿಳಾ ಮಾಸಿಕ ಪತ್ರಿಕೆಯ ಸಂಪಾದಕರು, ಹಾಗೂ ಸಾಹಿತಿ ಶಹನಾಝ್ .ಎಮ್ .ಪಾಂಡೇಶ್ವರ್ ತಿಳಿಸಿದರು.

ಅವರು ದಿನಾಂಕ 05.05.2018 ರಂದು ಮಂಗಳೂರು ಉರ್ವಾಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಜರುಗಿದ ಸಂತೃಪ್ತ ಮಹಿಳೆ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು
ಹೆಣ್ಣು ಗಂಡು ಇಬ್ಬರೂ ಬದುಕಿನ ಬಂಡಿಯ ಎರಡು ಚಕ್ರಗಳಿದ್ದಂತೆ, ಪ್ರಸ್ತುತ ದಿನಗಳಲ್ಲಿ ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದರೂ ಆಕೆಯ ಮೇಲಿನ ದೌರ್ಜನ್ಯ ಕಡಿಮೆಯಾಗಿಲ್ಲ. ಸ್ತ್ರೀ ನಾಲ್ಕು ಗೋಡೆಗಳ ನಡುವೆ ಕಾಲಕಳೆಯುವ ಕಾಲವೀಗ ಕಣ್ಮರೆಯಾಗಿ, ಪುರುಷಪ್ರಧಾನ ಸಮಾಜದಲ್ಲಿ ಪುರುಷರಷ್ಟೇ ಧೀಮಂತಿಕೆಯಿಂದ ಬದುಕಲು ಸಾಧ್ಯವಿದೆಯೆಂದು ಹಲವಾರು ರೀತಿಯ ಸಾಧನೆಗಳನ್ನು ಮಾಡುವುದರ ಮೂಲಕ ತೋರಿಸಿ ಕೊಟ್ಟಿದ್ದಾಳೆ. ಎಲ್ಲಾ ಕ್ಷೇತ್ರದಲ್ಲೂ ಮುನ್ನಡೆಯುತ್ತಾ ಜಗತ್ತಿನ ದೃಷ್ಟಿಯನ್ನು ತನ್ನೆಡೆ ಸೆಳೆದಿದ್ದಾಳೆ. ಪ್ರತಿಭೆ, ಕಲೆ ,ಕ್ರೀಡೆ , ಸಾಹಿತ್ಯ, ಸಾಹಸ ಪ್ರವೃತ್ತಿಯಂತಹ ಸಾಧನೆಯಲ್ಲಿ ತೊಡಗಿ ವಿಶ್ವದ ಗೌರವಕ್ಕೆ ಪಾತ್ರಳಾಗಿದ್ದಾಳೆ ತನ್ನ ಹಲವಾರು ಉತ್ತಮ ಗುಣ, ನಡತೆಗಳಿಂದ ಸರ್ವಸಂಪನ್ನಳೆನಿಸಿ ಪೂಜನೀಯಳು ಆಗಿದ್ದಾಳೆ. ಇಂದಿನ ಸ್ತ್ರೀ ತನ್ನ ಮೇಲಾಗುತ್ತಿರುವ ಅನ್ಯಾಯ, ಅನಾಚಾರ, ಅತ್ಯಾಚಾರ ತಡೆಯುವಲ್ಲಿ ವಿಫಲಳಾಗುತ್ತಿದ್ದಾಳೆ. ದೇಶದೆಲ್ಲೆಡೆ ನಡೆಯುತ್ತಿರುವ ಸ್ತ್ರೀ ದೌರ್ಜನ್ಯವನ್ನು ತಡೆಯುವ ದಾರಿ ಕಾಣದೆ ಅಸಹಾಯಕಳಾಗಿದ್ದಾಳೆ. ತಾನಿರುವ ವಲಯಗಳಲ್ಲಿ ನಡೆಯುವ ಶೋಷಣೆಗೆ ಸಿಲುಕಿ ಜರ್ಝರಿತಳಾಗಿದ್ದಾಳೆ. ಪ್ರೀತಿ, ಸ್ನೇಹ, ಆತ್ಮವಿಶ್ವಾಸದ ಬದುಕು ಈಗೀಗ ದುಸ್ತರವಾಗುತ್ತಿದೆ. ಕಾನೂನು ಸ್ತ್ರೀಯರ ಪರವಾಗಿದ್ದರೂ, ತನಗಿರುವ ಮಿತಿಗಳಿಂದ ಹೊರಬಾರಲಾರದೆ ಮನದೊಳಗೆ ಕುಗ್ಗುತ್ತಿದ್ದಾಳೆ.ಎಂದು ಸಾಹಿತಿ ಶಹನಾಝ್ .ಎಮ್ .ಪಾಂಡೇಶ್ವರ್ ಅಭಿಪ್ರಾಯ ಪಟ್ಟರು .

ಯುವವಾಹಿನಿ(ರಿ) ಕೇಂದ್ರಸಮಿತಿ ಅಧ್ಯಕ್ಷರಾದ ಯಶವಂತ್ ಪೂಜಾರಿ ದೀಪ ಬೆಳಗಿಸಿ ಕಾರ್ಯಕ್ರಮದ ಉದ್ಘಾಟಿಸಿದರು. ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ರಶ್ಮಿ ಸಿ. ಕರ್ಕೇರಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು .
ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಮಾಜಿ ಅಧ್ಯಕ್ಷರಾದ ವಿದ್ಯಾ ರಾಕೇಶ್ ಪ್ರಾಸ್ತಾವಿಕ ಮಾತುಗಳ ಮೂಲಕ ಸ್ವಾಗತಿಸಿದರು . ಕಾರ್ಯದರ್ಶಿ ರವಿಕಲಾ ವಂದಿಸಿದರು .  ಉಪಾಧ್ಯಕ್ಷರಾದ ಉಮಾಶ್ರಿಕಾಂತ್ ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!