Yuvavahini

JUL 01, 2018 3.20 PM IST

ಯುವವಾಹಿನಿ(ರಿ) ಕಡಬ ಘಟಕ

ಮನೆ ಮನ ಬೆಳಗಿದ ಗುರುಸ್ಪೂರ್ತಿ

ಕಡಬ : ಮನೆ ಮನ ಬೆಳಗುವ ,ಯುವ ಮನಸ್ಸುಗಳನ್ನು ಬೆಸೆದು ಸಮಾಜವನ್ನು ಒಗ್ಗೂಡಿಸುವ ಕಾರ್ಯಕ್ರಮ ಗುರುಸ್ಪೂರ್ತಿ ಯುವವಾಹಿನಿ(ರಿ) ಕಡಬ ಘಟಕದ ಆಶ್ರಯದಲ್ಲಿ ,ದಿನಾಂಕ 01.07.2018 ನೇ ಆದಿತ್ಯವಾರ ಉದ್ಘಾಟನೆಗೊಂಡಿತು. ನೂಜಿಬಾಳ್ತಿಲ ಗ್ರಾಮ ಸಂಘಟನಾ ಕಾರ್ಯದರ್ಶಿ ಶ್ರೀ ಸಂದೇಶ್ ಪಿ ಬಿ ಇವರ ಮನೆಯಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯರಾದ ಶ್ರೀ ಬಾಲಕೃಷ್ಣ ಪೂಜಾರಿ ಪಲಯಮಜಲು ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ನಂತರ
ನಡೆದ ಸಭಾ ಕಾರ್ಯಕ್ರಮದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರಾದ ಡಾ| ಸದಾನಂದ ಕುಂದರ್ ಮಾತನಾಡಿ,ನಮ್ಮ ಸಮಾಜದ ಜನತೆಯನ್ನು ಪ್ರೋತ್ಸಾಹಿಸುವ ಜೊತೆಗೆ ಸಂಘಟನೆಯಲ್ಲಿ ಭಾಗವಹಿಸಿ ನಮ್ಮನ್ನು ಸಮಾಜ ಗುರುತಿಸುವಂತಾಗಬೇಕೆಂದರು.ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಶ್ರೀ ಅಜೀತ್ ಕುಮಾರ್ ಪಾಲೇರಿಯವರು ,ಹಿರಿಯರ ಮಾರ್ಗದರ್ಶನವನ್ನು ಪಡೆದುಕೊಂಡು ಸಂಘಟಿತ ಸಮಾಜ ಕಟ್ಟುವಂತಾಗಬೇಕೆಂದರು.ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ನಿಕಟಪೂರ್ವ ಅಧ್ಯಕ್ಷ ಶ್ರೀ ಅಶೋಕ್ ಕುಮಾರ್ ಪಡ್ಪು ಮಾತನಾಡಿ, ತಪ್ಪುಗಳನ್ನು ಮಾತ್ರ ಗುರುತಿಸಿ ಎತ್ತಿ ಹಿಡಿಯುವ ಬದಲಿಗೆ ಒಳ್ಳೆಯ ಕಾರ್ಯಗಳನ್ನು ತಿಳಿಸಿ ವ್ಯತ್ಯಾಸವನ್ನು ತಿದ್ದುವ ಪ್ರಯತ್ನ ಮಾಡಬೇಕು ಮತ್ತು ಯಾವುದೇ ಸಭೆಯು ಭಾಷಣವಾಗಿರದೆ ಫಲಿತಾಂಶ ನೀಡುವ ಕೂಡುವಿಕೆಯಾಗಿರಬೇಕು ಎಂದರು. ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಮಾಜಿ ಅಧ್ಯಕ್ಷ ಗುಣಾಕರ ಅಗ್ನಾಡಿ ವಿನೂತನ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮನೆಯ ನವದಂಪತಿಗಳಿಗೆ ಶುಭ ಹಾರೈಸಿ ಶ್ರೀಮತಿ ಜಯಂತಿಯವರ ಮಗಳ ವಿಧ್ಯಾಭ್ಯಾಸಕ್ಕೆಂದು ಈ ವರ್ಷದ ಕಾಲೇಜು ಶುಲ್ಕವನ್ನು ಘಟಕದ ವತಿಯಿಂದ ವಿತರಿಸಲಾಯಿತು. ಗುರುಗಳ ಆದರ್ಶ ನಮ್ಮ ದಾರಿ ಅವರ ಆಶೀರ್ವಾದದೊಂದಿಗೆ ಕಾರ್ಯಕ್ರಮ ಮುಂದುವರಿಯಲಿ ಎಂದು ಕಡಬ ಘಟಕದ ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾದ ವಸಂತ ಪೂಜಾರಿ ಬದಿಬಾಗಿಲು ಹಾರೈಸಿದರು. ಕಡಬ ಘಟಕದ ಅಧ್ಯಕ್ಷರಾದ ಶ್ರೀ ಯೋಗಿಶ್ ಕುಮಾರ್ ಅಗತ್ತಾಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ್ಪಿನಂಗಡಿ ಘಟಕದ ಕಾರ್ಯದರ್ಶಿ ಅನಿಲ್ ಕುಮಾರ್ ದಡ್ಡು ಮತ್ತು ನಿರ್ದೇಶಕರಾದ ಶ್ರೀ ಸಂದೇಶ್ ಕುಪ್ಪೆಟ್ಟಿ ಕಡಬ ಘಟಕದ ನಿರ್ದೇಶಕರು , ಸಂಘಟನಾ ಕಾರ್ಯದರ್ಶಿಗಳು ಮತ್ತು ಸರ್ವ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನೂಜಿಬಾಳ್ತಿಲ ಗ್ರಾಮದ ಪಲಯಮಜಲು,ನಡುವಾಲು , ಕಂಪ , ಬದಿಬಾಗಿಲು , ಜಾಲು, ನೀರಾರಿ ಇಲ್ಲಿನ ಸಮಸ್ತ ಬಿಲ್ಲವ ಭಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನೂಜಿಬಾಳ್ತಿಲ ಸಂಘಟನಾ ಕಾರ್ಯದರ್ಶಿ ಶ್ರೀ ಸಂದೇಶ್ ಪಿ ಬಿ ಸ್ವಾಗತಿಸಿ ಕಡಬ ಘಟಕದ ಕಾರ್ಯದರ್ಶಿ ಶ್ರೀ ಮಿಥುನ್‌ ಸುಂದರ್ ಪಲ್ಲತಡ್ಕ ವಂದನಾರ್ಪನೆಗೈದರು. ಕಡಬ ಘಟಕದ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಶ್ರೀ ಗಣೇಶ್ ನಡುವಾಲು ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು. ನಾರಾಯಣ ಗುರುಗಳ ತತ್ವ ಆದರ್ಶಗಳ ಮೂಲಕ ಸಂಘಟಿತ ಸಮಾಜವನ್ನು ನಿರ್ಮಿಸುವ ಕನಸಿನೊಂದಿಗೆ ಆರಂಭವಾದ ಪುಟ್ಟ ಕನಸಿನ ಕಾರ್ಯಕ್ರಮ ಅಭೂತಪೂರ್ವ ಆರಂಭ ಕಂಡಿತು.

One thought on “ಮನೆ ಮನ ಬೆಳಗಿದ ಗುರುಸ್ಪೂರ್ತಿ

  1. ಪ್ರಶಂಸನೀಯ ಕಾರ್ಯಕ್ರಮ, ಯುವಕರಲ್ಲಿ ಸಮಾಜದ ಬಗೆಗೆಗಿನ ತುಡಿತ ಎದ್ದು ಕಾಣುತ್ತಿತ್ತು… ಶುಭವಾಗಲಿ ಕಡಬ ಘಟಕದ ಸದಸ್ಯರಿಗೆ…

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!