ಯುವವಾಹಿನಿ(ರಿ) ಕೇಂದ್ರ ಸಮಿತಿಯ ಪದಗ್ರಹಣ

ಅಧ್ಯಕ್ಷರಾಗಿ ಜಯಂತ ನಡುಬೈಲು ಆಯ್ಕೆ

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 5.8.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಜರುಗಿದ ಯುವವಾಹಿನಿಯ 31ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು.

ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳನ್ನು ವೇದಿಕೆಗೆ ಆಹ್ವಾನಿಸಿದರು. 2018-19 ನೇ ಸಾಲಿನ ಅಧ್ಯಕ್ಷ ಜಯಂತ ನಡುಬೈಲು ನೇತ್ರತ್ವದ ನೂತನ ತಂಡಕ್ಕೆ ನಿರ್ಗಮನ ಅಧ್ಯಕ್ಷ ಯಶವಂತ ಪೂಜಾರಿ ಪ್ರತಿಜ್ಞಾವಿಧಿ ಬೋಧಿಸಿದರು.

ತನ್ನಲ್ಲಿ ಬಹಳಷ್ಟು ಕನಸುಗಳಿವೆ, ಯುವ ಸಮೂಹವನ್ನು ಒಗ್ಗೂಡಿಸಿ ಪ್ರತಿಯೊಂದು ಕ್ಷೇತ್ರದಲ್ಲೂ ಯುವವಾಹಿನಿಯನ್ನು ರಾರಾಜಿಸುವಂತೆ ಮಾಡುತ್ತಾ ಘಟಕವನ್ನು ರಾಜ್ಯಾದ್ಯಂತ ವಿಸ್ತರಿಸುವ ಗುರಿ ಹೊಂದಿದ್ದೇನೆ, ಮುಂದಿನ ಒಂದು ವರ್ಷದಲ್ಲಿ ಉದ್ಯೋಗ ಮೇಳ ಸೇರಿದಂತೆ ಸಮಾಜದ ಎಲ್ಲಾ ಸಮುದಾಯದ ಯುವಕರಿಗೆ ಉಪಯುಕ್ತ ಕಾರ್ಯಕ್ರಮದ ಆಯೋಜನೆಯ ಚಿಂತನೆ ಇದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿ ಜಯಂತ ನಡುಬೈಲು ತಿಳಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವರಾದ ಡಾ.ಜಯಮಾಲ , ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಮಂಗಳೂರು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ.ಸುವರ್ಣ, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಉದ್ಯಮಿ ದಿವಾಕರ್, ಖ್ಯಾತ ರಂಗಭೂಮಿ, ಚಲನಚಿತ್ರ ನಟ ಅರವಿಂದ ಬೋಳಾರ್, ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಸಂಚಾಲಕ ನವೀನ್ ಚಂದ್ರ ಡಿ.ಸುವರ್ಣ, ನಿರ್ದೇಶಕ ಹರೀಶ್ ಕೆ.ಪೂಜಾರಿ ಹಾಗೂ ಯುವವಾಹಿನಿಯ 31 ಘಟಕಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

 ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಾದ್ಯಂತ 31 ಘಟಕಗಳನ್ನು ಹೊಂದಿರುವ ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018-19 ನೇ ಸಾಲಿನ ಅಧ್ಯಕ್ಷರಾಗಿ ಜಯಂತ ನಡುಬೈಲು ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳು :

ಅಧ್ಯಕ್ಷರು : ಜಯಂತ ನಡುಬೈಲು ಪುತ್ತೂರು
ಉಪಾಧ್ಯಕ್ಷರು :  ನರೇಶ್ ಕುಮಾರ್ ಸಸಿಹಿತ್ಲು ,  ಡಾ.ರಾಜಾರಾಮ್.ಕೆ.ಬಿ ಉಪ್ಪಿನಂಗಡಿ
ಪ್ರಧಾನ ಕಾರ್ಯದರ್ಶಿ : ಸುನೀಲ್.ಕೆ.ಅಂಚನ್ ಮಂಗಳೂರು
ಕೋಶಾಧಿಕಾರಿ : ಹರೀಶ್ ಎಸ್.ಕೋಟ್ಯಾನ್ ಬಂಟ್ವಾಳ
ಜತೆ ಕಾರ್ಯದರ್ಶಿ : ಶರತ್ ಕುಮಾರ್ ಹಳೆಯಂಗಡಿ

ನಿರ್ದೇಶಕರು :
ಕಲೆ ಮತ್ತು ಸಾಹಿತ್ಯ : ವಿಠ್ಠಲ್.ಎಮ್.ಪೂಜಾರಿ ಬೆಳುವಾಯಿ 

ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ‌ : ಅಶೋಕ್ ಕುಮಾರ್ ಪಡ್ಪು

ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಸಂಜೀವ ಸುವರ್ಣ ಪಣಂಬೂರು

ಸಮಾಜ ಸೇವೆ :ಸಂತೋಷ್. ಎಸ್. ಪೂಜಾರಿ ಪಡುಬಿದ್ರೆ

ವ್ಯಕ್ತಿತ್ವ ವಿಕಸನ : ರಮೇಶ್ ಕುಮಾರ್ ಉಡುಪಿ

ಕ್ರೀಡೆ ಮತ್ತು ಆರೋಗ್ಯ : ಸುಪ್ರೀತಾ ಪೂಜಾರಿ ಮಂಗಳೂರು

ಮಹಿಳಾ‌ ಸಂಘಟನೆ : ಪಾರ್ವತಿ ಅಮೀನ್ ಮಂಗಳೂರು

ಪ್ರಚಾರ : ಹರೀಶ್ ಕೆ.ಪೂಜಾರಿ

ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಿತಿ ಸಂಚಾಲಕರು : ಪ್ರದೀಪ್ ಎಸ್ .ಆರ್  ಸಸಿಹಿತ್ಲು
ಯುವ ಸಿಂಚನ ಪತ್ರಿಕೆ ಸಂಪಾದಕರು : ರಾಜೇಶ್ ಸುವರ್ಣ ಬಂಟ್ವಾಳ

ಸಂಘಟನಾ ಕಾರ್ಯದರ್ಶಿಗಳು :
ನಾಗೇಶ್ ಬಲ್ನಾಡ್ ಪುತ್ತೂರು
ಬಿ.ಟಿ.ಮಹೇಶ್ಚಂದ್ರ ಪುತ್ತೂರು
ಗುಣಕರ್ ಅಗ್ನಾಡಿ ಉಪ್ಪಿನಂಗಡಿ
ಲೋಕೇಶ್ ಸುವರ್ಣ ಬಂಟ್ವಾಳ
ಪ್ರವೀಣ್ ಕುಮಾರ್ ಉಡುಪಿ
ಪ್ರಶಾಂತ್ ಯಡ್ತಾಡಿ
ರಾಕೇಶ್ ಕುಮಾರ್ ಬೆಳ್ತಂಗಡಿ
ರವೀಂದ್ರ ಸುವರ್ಣ ಬಜಪೆ
ರಮೇಶ್ ಕೋಟ್ಯಾನ್ ಕಟಪಾಡಿ
ಶಿವರಾಮ್.ಜಿ.ಅಮೀನ್ ಹೆಜಮಾಡಿ
ಗೋಪಾಲ‌ ಪೂಜಾರಿ ಕಂಕನಾಡಿ
ಸುರೇಶ್ ಬಿ. ಕೊಲ್ಯ
ರವೀಂದ್ರ.ಎಸ್.ಕೋಟ್ಯಾನ್ ಸುರತ್ಕಲ್
ಪುಷ್ಪರಾಜ್ ಕುಮಾರ್ ಕೂಳೂರು
ಸುಜಿತ್ ರಾಜ್.ವೈ. ಕೂಳೂರು
ಚಂದ್ರಶೇಖರ್ ಪೂಜಾರಿ ಬಜಪೆ
ಶಿವಪ್ರಸಾದ್.ಕೆ.ವಿ. ಸುಳ್ಯ
ಚೇತನ್ ಕುಮಾರ್ ಮುಲ್ಕಿ
ನಿತೇಶ್ ಜೆ.ಕರ್ಕೇರಾ ಅಡ್ವೆ

 

One thought on “ಅಧ್ಯಕ್ಷರಾಗಿ ಜಯಂತ ನಡುಬೈಲು ಆಯ್ಕೆ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!