Yuvavahini

JUL 29, 2018 6.25 AM IST

ಯುವವಾಹಿನಿ(ರಿ) ಕೂಳೂರು ಘಟಕದಿಂದ ಆಟಿದ ಪೊರ್ಲು

ಬದಲಾವಣೆ ಬೇಕು ಆದರೆ ನಮ್ಮ ಸಂಸ್ಕೃತಿಯನ್ನು ಮರೆಯಬಾರದು. -ಕೆ.ಎ ರೋಹಿಣಿ .

ಕೂಳೂರು : ಬದಲಾವಣೆ ಬೇಕು ಆದರೆ ನಮ್ಮ ಸಂಸ್ಕೃತಿಯನ್ನು ಮರೆಯಬಾರದು. ತುಳುನಾಡಿನ ಸಂಸ್ಕೃತಿ ,ಸಂಪ್ರದಾಯ ಹಾಗೂ ಆಚರಣೆಯ ಬಗ್ಗೆ ಮಕ್ಕಳಿಗೆ ತಿಳಿಸಬೇಕು ಇದರಿಂದ ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿಯನ್ನು ರವಾನಿಸಬಹುದು, ಎಂದು ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ(ರಿ) ಇದರ ಸ್ಥಾಪಕ ಅಧ್ಯಕ್ಷರಾದ ಕೆಎ ರೋಹಿಣಿತಿಳಿಸಿದರು.
ಆಗಿನ ಕಾಲದಲ್ಲಿ ಹೆತ್ತವರು ಹೇಳಿದಂತೆ ಮಕ್ಕಳು ಕೇಳುತ್ತಿದ್ದರು, ಆದರೆ ಈಗಿನ ಕಾಲದಲ್ಲಿ ಮಕ್ಕಳು ಹೇಳಿದಂತೆ ಹೆತ್ತವರು ಕೇಳಬೇಕಾದ ಪರಿಸ್ಥಿತಿ , ಆಟಿ ತಿಂಗಳಿನ ವಿಶೇಷತೆ ,ಅಮಾವಾಸ್ಯೆ ಬಡಿಸುವುದು ,ಆಟಿ ಕಳಂಜ ,ಆಟಿ ತಿಂಗಳಿನ ತಿನಿಸು ಪದಾರ್ಥಗಳ ಬಗ್ಗೆ ವಿವರಣೆ ನೀಡಿದರು .

ಅವರು ದಿನಾಂಕ 29/07/2018ರಂದು ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ‘ಆಟಿದ ಪೊರ್ಲು’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಮತ್ತು ಈ ಸಂದರ್ಭದಲ್ಲಿ ಕೆ.ಎ. ರೋಹಿಣಿ ಇವರನ್ನು ಸನ್ಮಾನಿಸಲಾಯಿತು

ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ತಾಂಬೂಲ ನೀಡಿ ಎಲ್ಲರನ್ನು ಸ್ವಾಗತಿಸಿದರು .

ನಿರಂಜಯ ಕೆ. ನಿವೃತ್ತ ಮ್ಯಾನೇಜರ್, ಗುರುಪುರ ಬ್ಯಾಂಕ್ VSS ಬ್ಯಾಂಕ್- ಇವರು ದೀಪ ಬೆಳಗಿಸಿ ನೇಜಿ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟನೆಯನ್ನು ಮಾಡಿ ತಮ್ಮ ಉದ್ಘಾಟನಾ ಭಾಷಣದಲ್ಲಿ ತಾನೊಬ್ಬ ಕೃಷಿ ಕುಟುಂಬದಿಂದ ಬಂದವಳಾಗಿದ್ದು,ತನ್ನ ಬಾಲ್ಯದಲ್ಲಿ ಆಟಿ ತಿಂಗಳಲ್ಲಿ ಕಳೆದು ಹೋದ ಸಮಯವನ್ನು ಹಾಗೂ ಆಟಿ ತಿಂಗಳಿನ ವಿಶೇಷತೆಯನ್ನು ತಿಳಿಸಿ ಆಟಿದ ಪೊಲು೯ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಯುವವಾಹಿನಿ(ರಿ) ಕೂಳೂರು ಘಟಕ ಆಯೋಜಿಸಿರುವ ಮೂಲಕ ತುಳುನಾಡಿನ ಆಚರಣೆಗಳನ್ನು ನೆನಪಿಸುವ ಕಾರ್ಯ ನಡೆದಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾದಂತಹ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಕಾರ್ಯದರ್ಶಿಯಾದ ಹರೀಶ್ ಅಮೀನ್ ಇವರು ಮಾತನಾಡಿ ಯುವವಾಹಿನಿ(ರಿ) ಕೂಳೂರು ಘಟಕವು ಇದೀಗಾಗಲೇ ವಿದ್ಯೆಗೆ ಹೆಚ್ಚು ಮಹತ್ವವನ್ನು ನೀಡಿದ್ದು ಈಗ ತುಳುನಾಡ ಸಂಸ್ಕೃತಿ ಹಾಗೂ ಆಚರಣೆಗೂ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದಾರೆಂದರು .ಇನ್ನೋರ್ವ ಅತಿಥಿಯಾದ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಅಶೋಕ್ ಕುಮಾರ್ ಮಾತನಾಡಿ ಯುವವಾಹಿನಿಯಲ್ಲಿ ವಿದ್ಯೆ, ಉದ್ಯೋಗ,ಸಂಪರ್ಕದೊಂದಿಗೆ ಸಂಸ್ಕಾರವನ್ನು ತಿಳಿಸುವುದರಲ್ಲಿ ಈ ಘಟಕ ಮಹತ್ತರವಾದ ಪಾತ್ರವನ್ನು ವಹಿಸುತ್ತಿದೆ ಹಾಗೂ ಕೂಳೂರಿನ ಕುಟುಂಬ ಕಾರ್ಯಗಳಲ್ಲಿ ಭಾಗವಹಿಸಿ ಕುಟುಂಬವನ್ನು ಸೇರಿಸುವಲ್ಲಿ ಹೆಸರುವಾಸಿಯಾಗಿದೆ ಎಂದುಹೇಳಿದರು , ಸಲಹೆಗಾರರಾದ ನೇಮಿರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದ ಎಲ್ಲ ಅತಿಥಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು .ಕಾರ್ಯಕ್ರಮದಲ್ಲಿ ಸಂಚಾಲಕರಾದ ಜಯಶ್ರೀ ,ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ,ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ಯುವವಾಹಿನಿ(ರಿ) ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು . ಕಾರ್ಯದರ್ಶಿ ಪವಿತ್ರ ಅಂಚನ್ ವಂದಿಸಿದರು .ಸುಜಿತ್ ರಾಜ್ ಹಾಗೂ ಪ್ರತೀಶ್ ಕಾರ್ಯಕ್ರಮ ನಿರೂಪಿಸಿದರು .ಸಭಾ ಕಾರ್ಯಕ್ರಮದ ನಂತರ ಘಟಕದ ಸದಸ್ಯರಿಂದ ತುಳು ನಲಿಕೆ ಏರ್ಪಡಿಸಲಾಗಿತ್ತು.
ನಂತರ ಘಟಕದ ಸದಸ್ಯರು ತಮ್ಮ ಮನೆಯಲ್ಲಿ ತಯಾರಿಸಿದ ವೈವಿಧ್ಯಮಯ ತಿಂಡಿ ತಿನಿಸು ಖಾದ್ಯಗಳನ್ನು ಸಭಿಕರಿಗೆ ಉಣ ಬಡಿಸಲಾಯಿತು .

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!