Yuvavahini

DEC 18, 2016 11.32 AM IST

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕ

ಅಭೂತಪೂರ್ವ ಸ್ಪಂದನೆಯಲ್ಲಿ ಸಾಕಾರಗೊಂಡ ಬಿಲ್ಲವ ವಧೂವರರ ಸಮಾವೇಶ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಟ್ಟಿಗೆ ಅಪೂರ್ವವಾದ, ಬಿಲ್ಲವ ಸಮಾಜದ ’ವಧೂವರರ ಸಮಾವೇಶ’ ಬಿಲ್ಲವ ಸಮಾಜ ಬಾಂಧವರ ಅಭೂತಪೂರ್ವ ಸ್ಪಂದನೆಯೊಂದಿಗೆ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿ ಮಹಿಳಾ ಘಟಕದ ಸಾಮಾಜಿಕ ಕಳಕಳಿಯ ವೈಶಿಷ್ಟ್ಯಪೂರ್ಣ ಪರಿಕಲ್ಪನೆಯೊಂದಿಗೆ ಯುವವಾಹಿನಿ (ರಿ) ಕೇಂದ್ರ ಸಮಿತಿ ಮತ್ತು ಇತರ ಘಟಕಗಳ ಸಹಕಾರದೊಂದಿಗೆ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿಯ ಸಹಯೋಗದೊಂದಿಗೆ ದಿನಾಂಕ 18-12-2016 ರಂದು ಜರಗಿದ ಸಮಾವೇಶವು ಯುವವಾಹಿನಿಯ ಚಟುವಟಿಕೆಗಳಲ್ಲಿ ಒಂದು ಮೈಲುಗಲ್ಲಾಗಿ ಇತಿಹಾಸ ನಿರ್ಮಿಸಿತು.

ಒಂದು ಮಹತ್ವಪೂರ್ಣ ಯೋಚನೆ, ಯೋಜನೆಯೊಂದಿಗೆ ಬಹಳಷ್ಟು ಪೂರ್ವಾಲೋಚನೆ, ಸಮಾಲೋಚನೆಗಳೊಂದಿಗೆ ಸಮಾವೇಶದ ತಯಾರಿ ನಡೆಸಲಾಗಿತ್ತು. ಇದಕ್ಕೆ ರಾತ್ರಿಹಗಲೆನ್ನದೆ ಯುವವಾಹಿನಿಯ ಮಹಿಳಾ ತಂಡ ದುಡಿದಿತ್ತು. ಬೆಂಬಲವಾಗಿ ಯುವವಾಹಿನಿಯ ಕಾರ್ಯಕರ್ತರಿದ್ದರು. ಪ್ರೋತ್ಸಾಹಕರಾಗಿ ಸಮಾಜ ಬಾಂಧವರಿದ್ದರು. ಕುದ್ರೋಳಿ ಕ್ಷೇತ್ರದ ಸಂಪೂರ್ಣ ಸಹಕಾರವಿತ್ತು. ಕೊನೆಗೂ ಆ ಬಹುನಿರೀಕ್ಷಿತ ದಿನ ಕುದ್ರೋಳಿ ಕ್ಷೇತ್ರದಲ್ಲಿ ಮರೆಯಲಾಗದ ದಿನವಾಗಿ ಪರಿಣಮಿಸಿತ್ತು.

ಶ್ರೀ ಕ್ಷೇತ್ರದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಜರಗಿದ ನಯನ ಮನೋಹರ ಸಮಾರಂಭದಲ್ಲಿ ಸುಮಾರು 450 ಕ್ಕೂ ಮಿಕ್ಕಿದ ವಧುವರರು ನೋಂದಾಯಿಸಿ ಕೊಂಡು ಭಾಗವಹಿಸಿದ್ದು ಸಾವಿರಕ್ಕೂ ಮಿಕ್ಕಿದ ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮದಿಂದ ಸಮಾವೇಶ ಕಳೆಗಟ್ಟಿತ್ತು.

ಅಂದು ಬೆಳಿಗ್ಗೆ ನಿಗದಿತ ಸಮಯಕ್ಕೆ ಸರಿಯಾಗಿ ಜರಗಿದ ಉದ್ಘಾಟನಾ ಸಮಾ ರಂಭದಲ್ಲಿ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಜಯ ಸಿ. ಸುವರ್ಣರವರು ಸಮಾವೇಶವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಶ್ರೀಯುತರು ಯುವವಾಹಿನಿಯ ಈ ಕಾರ್ಯಕ್ರಮ ಬಹಳ ಉತ್ತಮವಾಗಿದ್ದು, ಸಮಾಜದ ಯುವಜನರಿಗೆ ಅತ್ಯಗತ್ಯವಾಗಿದೆ. ತಮ್ಮ ಬಾಳಸಂಗಾತಿಗಳ ಹುಡುಕಾಟದಲ್ಲಿರುವ ಯುವಜನತೆಗೆ ಬಹಳ ಅನುಕೂಲಕರವಾಗಿರುವ ಇಂತಹ ಕೆಲಸ ಕಾರ್ಯಗಳು ಇನ್ನಷ್ಟು ನಡೆಯಬೇಕು. ಇಂತಹ ಕಾರ್ಯಗಳನ್ನು ನಾವೆಲ್ಲಾ ಸಂಪೂರ್ಣವಾಗಿ ಬೆಂಬಲಿಸಬೇಕು ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಗುರು ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀಮತಿ ಗೀತಾ ದಿವಾಕರ್ ಅಮೀನ್ ಭಾಗವಹಿಸಿ ಯುವವಾಹಿನಿಯ ಇಂತಹ ಸಮಾಜ ಮುಖಿ ಕಾರ್ಯಗಳು ಶ್ಲಾಘನೀಯ, ಅವುಗಳನ್ನು ಮುಂದುವರೆಸಿಕೊಂಡು ಹೋಗುವುದು ಅಗತ್ಯ ಎಂದು ನುಡಿದರು. ಮಹಿಳಾ ಘಟಕದ ಸದಸ್ಯೆಯರಾದ ಶ್ರೀಮತಿ ಉಮಾ ಶ್ರೀಕಾಂತ್, ಶ್ರೀಮತಿ ಅಮಿತ ಗಣೇಶ್ ಮತ್ತು ಕುಮಾರಿ ರೋಹಿಣಿ ಪ್ರಾರ್ಥಿಸಿದರು. ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ವಿದ್ಯಾರಾಕೇಶ್ ಅಧ್ಯಕ್ಷತೆ ವಹಿಸಿದ್ದು, ಸ್ವಾಗತ ಭಾಷಣ ಮಾಡಿದರು. ಯುವವಾಹಿನಿ ಮಹಿಳಾ ಸಂಘಟನಾ ನಿರ್ದೇಶಕಿ ಶ್ರೀಮತಿ ಗುಣವತಿ ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಮಹಿಳಾ ಘಟಕದ ಸಲಹೆಗಾರರಾದ ಅಶೋಕ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಿಳಾ ಘಟಕದ ಕಾರ್ಯದರ್ಶಿ ಶ್ರೀಮತಿ ರೇಖಾ ಗೋಪಾಲ್ ವಂದಿಸಿದರು. ಶ್ರೀಮತಿ ಶುಭ ರಾಜೇಂದ್ರ ಕಾರ್ಯಕ್ರಮ ನಿರೂಪಿಸಿದರು. ನೆರೆದ ಸಮಾಜ ಬಾಂಧವರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ಸಭಾಂಗಣದಲ್ಲಿ ಅಳವಡಿಸ ಲಾಗಿದ್ದ ಎರಡು ದೊಡ್ಡ ಎಲ್‌ಇಡಿ ಪರದೆಗಳಲ್ಲಿ ಪ್ರತ್ಯೇಕವಾಗಿ ವಧುಗಳು ಮತ್ತು ವರರ ಭಾವ ಚಿತ್ರಗಳೊಂದಿಗೆ ಅವರಿಗೆ ಸಂಬಂಧಪಟ್ಟ ವಿವರಗಳನ್ನು ಆಸಕ್ತರ ಅವಗಾಹನೆಗಾಗಿ ಪ್ರದರ್ಶಿಸಲಾಯಿತು. ಜೊತೆಗೆ ಸಂಬಂಧಪಟ್ಟ ವಿವರಗಳನ್ನು ಧ್ವನಿವರ್ಧಕದ ಮೂಲಕ ಪ್ರಕಟಿಸ ಲಾಯಿತು. ಪ್ರತಿಯೊಬ್ಬರಿಗೂ ಪ್ರತ್ಯೇಕ ಗುರುತಿನ ಸಂಖ್ಯೆಗಳನ್ನು ನೀಡ ಲಾಗಿದ್ದು, ಮೆಚ್ಚುಗೆಯಾದ ವರ ಯಾ ವಧುವಿನ ಗುರುತಿನ ಸಂಖ್ಯೆಗಳನ್ನು ದಾಖಲಿಸಿಕೊಂಡು ಮುಂದೆ ಪ್ರೊಫೈಲ್ ಫಾರ್ಮ್ಯಾಟ್ ಪರಿಶೀಲನೆಗಾಗಿ ಅವಕಾಶ ಮಾಡಿಕೊಡಲಾಗಿತ್ತು. ಸುಮಾರು ೩ ಗಂಟೆಗಳ ಕಾಲ ನಡೆದ ಈ ವಧು ವರಾನ್ವೇಷಣಾ ಕಾರ್ಯಕ್ರಮದ ಬಳಿಕ ಸಮಾರೋಪ ಸಮಾರಂಭವನ್ನು ಏರ್ಪಡಿಲಾಗಿತ್ತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಗೋಕರ್ಣನಾಥ ಕ್ಷೇತ್ರದ ಖಜಾಂಚಿ ಪದ್ಮರಾಜ್, ನಮ್ಮ ಕುಡ್ಲ ವಾರ್ತಾವಾಹಿನಿಯ ಆಡಳಿತ ನಿರ್ದೇಶಕ ಲೀಲಾಕ್ಷ ಕರ್ಕೇರ, ಉಪ್ಪಿ ನಂಗಡಿಯ ದಂತ ವೈದ್ಯೆ ಡಾ| ಶ್ವೇತಾ ಅಶಿತ್ ಭಾಗವಹಿಸಿದ್ದರು. ಯುವ ವಾಹಿನಿಯ ವಧು ವರಾನ್ವೇಷಣಾ ಕಾರ್ಯಕ್ರಮವನ್ನು ತುಂಬು ಹೃದಯದಿಂದ ಶ್ಲಾಘಿಸಿದ ಅತಿಥಿಗಳು ಈ ದಿಶೆಯಲ್ಲಿ ಮುಂದುವರಿಯುವಂತೆ ಪ್ರೋತ್ಸಾಹಿಸಿದರಲ್ಲದೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಉಚಿತ, ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವುದಾದರೆ ಶ್ರೀ ಕ್ಷೇತ್ರದ ಸಂಪೂರ್ಣ ಸಹಕಾರವನ್ನು ಪದ್ಮರಾಜ್ ಘೋಷಿಸಿದರು. ಸಮಾ ರಂಭದಲ್ಲಿ ಮಾತನಾಡಿದ ಘಟಕದ ಅಧ್ಯಕ್ಷೆ ಶ್ರೀಮತಿ ವಿದ್ಯಾ ರಾಕೇಶ್ ಕಾರ್ಯಕ್ರಮದ ತಯಾರಿಯಲ್ಲಿ ಎದುರಾದ ಎಡರುತೊಡರುಗಳು, ದೊರೆತ ಅನುಭವ, ಜನರ ಪ್ರೋತ್ಸಾಹ, ಬೆಂಬಲಗಳನ್ನು ಸ್ಮರಿಸಿದರಲ್ಲದೆ ಕಾರ್ಯಕ್ರಮದ ತಯಾರಿ ಹಂತದಲ್ಲಿಯೇ ಸಂಬಂಧ ಕುದುರಿದ ಆರು ಜೋಡಿಗಳನ್ನು ಸಭೆಗೆ ಪರಿಚಯಿಸಿದರು. ಮಾತ್ರವಲ್ಲದೆ ಫಲಾನು ಭವಿಗಳು ತಮ್ಮ ಮನದಾಳದ ಮಾತುಗಳನ್ನು ಸಭೆಯ ಮುಂದಿಟ್ಟರು. ಸಮಾವೇಶದಲ್ಲಿ ಸಂಬಂಧ ಕುದುರಿದ ಓರ್ವ ಬಡ ಹೆಣ್ಣು ಮಗಳಿಗೆ ಯುವವಾಹಿನಿಯ ವತಿಯಿಂದ ಸರಳ ಮದುವೆ ಏರ್ಪಡಿಸುವ ಬಗ್ಗೆ ಸಮಾರಂಭದಲ್ಲಿ ತಿಳಿಸಲಾಯಿತು. ಮಹಿಳಾ ಘಟಕದ ಇನ್ನೋರ್ವ ಸಲಹೆಗಾರರಾದ ಟಿ. ಶಂಕರ್ ಸುವರ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಿಳಾ ಘಟಕದ ಉಪಾಧ್ಯಕ್ಷೆ ಶ್ರೀಮತಿ ಲೋಲಾಕ್ಷಿ ಸ್ವಾಗತಿಸಿದ್ದು, ಕ್ರೀಡಾ ಮತ್ತು ಆರೋಗ್ಯ ನಿರ್ದೇಶಕಿ ರಶ್ಮಿ ಚಂದ್ರಶೇಖರ್ ವಂದಿಸಿದರು. ಶ್ರೀಮತಿ ಚಿತ್ರಾಕ್ಷಿ ಮನೋಜ್ ಮತ್ತು ಶ್ರೀ ರಾಕೇಶ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

ಸಮಾರಂಭದಲ್ಲಿ ಎಲ್ಲಾ ಮಹಿಳಾ ಸಂಚಾಲಕರು ಮತ್ತು ಮಹಿಳಾ ಘಟಕದ ಸದಸ್ಯರು ಓಣಂ ಸೀರೆಯಲ್ಲಿ ಕಂಗೊಳಿಸಿದ್ದು ಬಹಳ ಶಿಸ್ತಿನಿಂದ ಕೆಲಸ ಮಾಡಿದರು. ಇತರ ಘಟಕದ ಸದಸ್ಯರು ಅತಿಥಿ ಸತ್ಕಾರ ಮತ್ತಿತರ ಕೆಲಸಗಳನ್ನು ವ್ಯವಸ್ಥಿತವಾಗಿ ನೆರವೇರಿಸಿದರು.

ಸಮಾವೇಶದಂದು ಜನಸಂದಣಿಯಿಂದಾಗಿ ಪರಿಶೀಲನೆಗೆ ತೊಂದರೆಯುಂಟಾದವರಿಗೆ ಮುಂದಿನ ಒಂದೆರಡು ತಿಂಗಳುಗಳ ಕಾಲ ಯುವವಾಹಿನಿಯ ಕೇಂದ್ರ ಕಚೇರಿಯಲ್ಲಿ ಪರಿಶೀಲನೆಗಾಗಿ ಅವಕಾಶವನ್ನು ಒದಗಿಸಲಾಗಿದ್ದು ಸಂಬಂಧ ಪಟ್ಟವರು ಇದರ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!