Yuvavahini

SEP 09, 2018 9.02 AM IST

ಯುವವಾಹಿನಿ (ರಿ) ಬೆಂಗಳೂರು ಘಟಕ ಉದ್ಘಾಟನೆ

ಯುವವಾಹಿನಿ ಭವಿಷ್ಯದ ಭರವಸೆಯ ನಂದಾದೀಪ : ಗೋಪಾಲಕೃಷ್ಣ

ಬೆಂಗಳೂರು : ಯುವವಾಹಿನಿ ಸಮಾಜದ ಭೂತ, ವರ್ತಮಾನ ಹಾಗೂ ಭವಿಷ್ಯದ ನಂದಾದೀಪವಾಗಲಿದೆ. ಯುವವಾಹಿನಿ ಶಬ್ದದಲ್ಲಿ ಒಂದು ಆಕರ್ಷಣೆ ಇದೆ, ಶಕ್ತಿ ಇದೆ, ಭರವಸೆ ಇದೆ. ಆರೋಗ್ಯಕರವಾದ ಸಂಪರ್ಕವೇ ಸಂಘಟನೆಯ ಸಾಧನ , ವಾಹಿನಿ ಅಂದರೆ ನಿರಂತರವಾದ ಹರಿವು, ಯುವವಾಹಿನಿಯ ನಿಸ್ವಾರ್ಥವಾದ ಸಾಮಾಜಿಕ ಕಾಳಜಿಯಿಂದ ಈ ಹರಿವಿನ ಶಕ್ತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹಿರಿಯ ಸಾಹಿತಿ ನೆಕ್ಕಿತಪುಣಿ ಗೋಪಾಲಕೃಷ್ಣ ಅಭಿಪ್ರಾಯ ಪಟ್ಟರು.

ಅವರು ದಿನಾಂಕ 09.09.2018 ರಂದು ಬೆಂಗಳೂರು ಮಲ್ಲೇಶ್ವರಂ ಸೇವಾ ಸದನ ಆಡಿಟೋರಿಯಂ ನಲ್ಲಿ ಯುವವಾಹಿನಿಯ 32ನೇ ನೂತನ ಘಟಕ ಯುವವಾಹಿನಿ (ರಿ) ಬೆಂಗಳೂರು ಘಟಕವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣವು ಮಾನವನ ಸಕಲ ನೋವು, ಕಷ್ಟ ಕಾರ್ಪಣ್ಯಗಳನ್ನು ನಿರ್ವಹಿಸುತ್ತದೆ, ಮಾನವರಲ್ಲಿ ಸುಪ್ತವಾಗಿರುವ ಸಕಲ ನೈಪುಣ್ಯತೆಯನ್ನು ತಿದ್ದಿ ಸ್ವಯಂ ನಿಯಂತ್ರಣಕ್ಕೆ ತಂದು ಸಾಮಾಜಿಕ, ಧಾರ್ಮಿಕ, ಮತ್ತು ಶೈಕ್ಷಣಿಕ ಗುಲಾಮಗಿರಿಯಿಂದ ಬಿಡುಗಡೆಗೊಳಿಸಿ ಸ್ವತಂತ್ರಗೊಳಿಸುವುದು ಎಂದು ತಿಳಿಸಿದರು.

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷ ಜಯಂತ್ ನಡುಬೈಲು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಮತ್ತು ಯುವವಾಹಿನಿ ಬೆಂಗಳೂರು ಘಟಕದ ನೂತನ ತಂಡಕ್ಕೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಉದ್ಯೋಗ, ಆರೋಗ್ಯ ಹೀಗೆ ಇತರ ಸಮಾಜಮುಖಿ ಕಾರ್ಯಗಳ ಯೋಜನೆ ರೂಪಿಸಲಾಗಿದೆ, ಈಗಾಗಲೇ 80 ಕ್ಕೂ ಅಧಿಕ ಸದಸ್ಯರ ಬೆಂಗಳೂರು ಘಟಕವು ಕ್ರಿಯಾಶೀಲವಾಗಿದೆ, ಮುಂದಕ್ಕೆ ಸರ್ವರ ಸಹಕಾರದಿಂದ ಯುವವಾಹಿನಿ ಬೆಂಗಳೂರು ಘಟಕವನ್ನು ಸಮರ್ಥವಾಗಿ ಮುನ್ನಡೆಸುವುದಾಗಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸುಧೀರ್.ಎಸ್.ಪೂಜಾರಿ ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹೈಕೋರ್ಟಿನ ವಕೀಲರಾದ ಯಾದವ ಕರ್ಕೇರ ಮಾತನಾಡಿ ಯುವವಾಹಿನಿಯ ಕಾರ್ಯ ಬದ್ದತೆ , ಶಿಸ್ತು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಕಲಾ ಕ್ಷೇತ್ರದ ಸಾಧನೆಗಾಗಿ ರಂಜಿತ್ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಗಾಗಿ ಶಶಿಧರ ಕೋಟ್ಯಾನ್ ಇವರನ್ನು ಅಭಿನಂದಿಸಲಾಯಿತು, ಕಿಶನ್ ಪೂಜಾರಿ ಹಾಗೂ ಮಹೇಂದ್ರ ಬಿಲ್ಲವ ಅಭಿನಂದನಾ ಪತ್ರ ವಾಚಿಸಿದರು.

ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಅಧ್ಯಕ್ಷ ಸಂಜೀವ ಪೂಜಾರಿ, ಮಾಜಿ ಅಧ್ಯಕ್ಷರಾದ ಟಿ.ಶಂಕರ ಸುವರ್ಣ, ಲಕ್ಷ್ಮಣ್ ಸಾಲ್ಯಾನ್, ಪರಮೇಶ್ವರ ಪೂಜಾರಿ, ಬೆಂಗಳೂರು ಘಟಕದ ಸಲಹೆಗಾರ ಯಶವಂತ ಪೂಜಾರಿ, ಯುವವಾಹಿನಿ ಸಸಿಹಿತ್ಲು ಘಟಕದ ಅಧ್ಯಕ್ಷ ಮಧು ಬಂಗೇರ ಕಲ್ಲಡ್ಕ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ಪ್ರಾಸ್ತಾವನೆ ಮಾಡಿದರು, ಪ್ರಧಾನ ಕಾರ್ಯದರ್ಶಿ ಸುನೀಲ್.ಕೆ.ಅಂಚನ್ ಸ್ವಾಗತಿಸಿದರು, ಯುವಸಿಂಚನ ಪತ್ರಿಕೆಯ ಸಂಪಾದಕ ರಾಜೇಶ್ ಸುವರ್ಣ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು, ಬೆಂಗಳೂರು ಘಟಕದ ನೂತನ ಕಾರ್ಯದರ್ಶಿ ರಾಘವೇಂದ್ರ ಪೂಜಾರಿ ಧನ್ಯವಾದ ನೀಡಿದರು.

ಸಭಾ ಕಾರ್ಯಕ್ರಮದ ಮೊದಲು ಬೆಂಗಳೂರು ಘಟಕದ ಸದಸ್ಯರಿಂದ ವೈವಿಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

7 thoughts on “ಯುವವಾಹಿನಿ ಭವಿಷ್ಯದ ಭರವಸೆಯ ನಂದಾದೀಪ : ಗೋಪಾಲಕೃಷ್ಣ

  1. ಅಶೋಕ್ ಕುಮಾರ್ ಪಡ್ಪು ಉಪ್ಪಿನಂಗಡಿ says:

    ಬೆಂಗಳೂರು ಘಟಕ ಮಾದರಿ ಘಟಕ ವಾಗಿ ಮೂಡಿ ಬರಲಿ, ಮುಂದಕ್ಕೆ ಅಲ್ಲಿ ಹೆಚ್ಚು ಘಟಕಗಳು ಚಿಗುರೊಡೆಯಲಿ ಎಂದು ಹಾರೈಸುವ.

  2. It’s a dream come true for the organization.Congratulations to all of you for your time and effort. Keep it up and develop further.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!