ಯುವವಾಹಿನಿ (ರಿ) ಕೊಲ್ಯ ಘಟಕದ ಆಶ್ರಯದಲ್ಲಿ

ಶಿಕ್ಷಕರ ದಿನದ ಸಂಭ್ರಮಾಚರಣೆ

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಕೊಲ್ಯ ಬಿಲ್ಲವ ಸೇವಾ ಸಮಾಜ ಸಭಾಭವನದಲ್ಲಿ ದಿನಾಂಕ 05-09-2018 ರಂದು,
ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಸೋಮೇಶ್ವರ , ಶ್ರೀ ನಾರಾಯಣ ಗುರು ಮಹಿಳಾ ಮಂಡಳಿ, ಯುವವಾಹಿನಿ (ರಿ) ಕೊಲ್ಯ ಘಟಕ ಸಂಸ್ಥೆಗಳಲ್ಲಿನ ಒಟ್ಟು ಹದಿಮೂರು ಜನ ಶಿಕ್ಷಕರನ್ನು ಈ ಸಂದರ್ಭದಲ್ಲಿ ಗೌರವಿಸಿ, ಸನ್ಮಾನಿಸಲಾಯಿತು

ಯುವವಾಹಿನಿ (ರಿ) ಕೊಲ್ಯ ಘಟಕದ ವಿದ್ಯಾರ್ಥಿ ಸಂಘಟನಾ ಕಾರ್ಯದರ್ಶಿಯಾದ ಸೌಜನ್ಯ ರವರು ಗುರು-ಶಿಷ್ಯರ ಸಂಬಂಧದ ಕುರಿತು ಸಿದ್ಧಪಡಿಸಿದ “ಶಿಕ್ಷಕರು ಮತ್ತು ಶಿಕ್ಷಣದ ಮಹತ್ವ”ದ ವರದಿಯನ್ನು ಸಭೆಯಲ್ಲಿ ಪ್ರಾಸ್ತಾಪಿಸಿದರು . ಗೌರವದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಮಂಜೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ ನಾರಾಯಣ ಪೂಜಾರಿಯವರು, ಶಿಕ್ಷಕರ ದಿನಾಚರಣೆಯಂದೆ ನನ್ನನ್ನು ಗುರುತಿಸಿ, ಅಂಗನವಾಡಿ ಶಿಕ್ಷಕರಿಂದ ಕಾಲೇಜು ಉಪನ್ಯಾಸಕರನ್ನು ಎಲ್ಲರನ್ನೂ ಒಟ್ಟುಗೂಡಿಸಿ, ನನ್ನನ್ನು ಸನ್ಮಾನಿಸಿದ್ದೀರಿ. ಈ ದಿನ ನನ್ನ ದೈನಂದಿನ ದಿನಚರಿಯ ಪುಟಗಳಲ್ಲಿ ಮರೆಯಲಾಗದ ನೆನಪಾಗಿ ದಾಖಲಾಗಲಿದೆ ಎಂದು ಭಾವಪರವಶವಾಗಿ ನುಡಿದರು.

ಶಿಕ್ಷಣ ತನ್ನ ಮೂಲ ಸ್ವರೂಪವನ್ನು ಉಳಿಸಿಕೊಂಡಿದೆ, ಗುರುಗಳಿಗೆ ಸಿಗುವ ಗೌರವಗಳು ಇಂದಿಗೂ ಸಿಗುತ್ತಿವೆ, ಆದರೆ ಜನರು ವ್ಯಕ್ತಪಡಿಸುವ ಭಾವನೆಗಳಲ್ಲಿ ಬದಲಾವಣೆಗಳಾಗಿವೆ. ಇಂದು ನಮ್ಮನ್ನು ಆಧರಿಸಿ, ಗೌರವಿಸಿ, ಸನ್ಮಾನಿಸಿ ಶಿಕ್ಷಕರ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದ್ದೀರಿ ಎಂದು ಮೊಗವೀರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇದರ ಮುಖ್ಯೋಪಾಧ್ಯಾಯರಾದ ವೇದಾವತಿ ಕೋಟೆಕಾರು ಅಭಿಪ್ರಾಯ ವ್ಯಕ್ತಪಡಿಸಿದರು .

ಯೋಗ ಗುರುಗಳಾದ ಬಾಳಪ್ಪ ಪೂಜಾರಿ ಕನೀರುತೋಟ, ದೈಹಿಕ ಮತ್ತು ಕ್ರೀಡಾ ಶಿಕ್ಷಕರಾದ ಶ್ರೀ ಸಂದೀೀಪ್‍ರಾಜ್ ಮಾಡೂರು, ಪದವಿ ಪೂರ್ವ ಕಾಲೇಜಿನ ಶಿಕ್ಷಕಿ ಅಶ್ವಿನಿ ಯತೀಶ್ ವೆಂಕಹಿತ್ಲು, ಶಿಕ್ಷಕಿಯರಾದ ಚೈತ್ರ ಅಲೋಕ್, ರೇವತಿ ವಿಶ್ವನಾಥ್, ಕುಸುಮ ಕುಂಪಲ, ಬಬಿತ ಆನಂದ್ ಮಲಯಾಳಕೋಡಿ, ವತ್ಸಲ ರಘುರಾಮ್ ಸುವರ್ಣ ಕೊಲ್ಯ, ರಶ್ಮಿ ನೆತ್ತಿಲ, ಸೌಮ್ಯ ಯೋಗೀಶ್ ನೆತ್ತಿಲ ಮತ್ತು ಸೌಮ್ಯ ಕುಸುಮಾಕರ್‍ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಯುವವಾಹಿನಿ (ರಿ) ಕೊಲ್ಯ ಘಟಕದ ಅಧ್ಯಕ್ಷರಾದ ಕುಸುಮಾಕರ್ ಕುಂಪಲರವರು ಅತಿಥಿಗಳನ್ನು ಸ್ವಾಗತಿಸಿ ಮಾತನಾಡುತ್ತ, ಹಿಂದಿನ ಕಾಲದಲ್ಲಿ ಟ್ಯೂಷನ್ ಕ್ಲಾಸ್‍ಗಳಿಗೆ ಹೋಗದೆ ಕೇವಲ ಶಾಲೆಯಲ್ಲಿ ಗುರುಗಳು ಹೇಳಿದ ವಿದ್ಯೆಯನ್ನು ಕಲಿತು, ಅನೇಕ ವಿದ್ಯಾರ್ಥಿಗಳು ಉನ್ನತ ಪದವಿಯನ್ನು ಪಡೆದು, ಅತ್ಯುನ್ನತ್ತ ದರ್ಜೆಯ ಕೆಲಸದಲ್ಲಿದ್ದರು. ಆದರೆ ಇಂದು, ಪ್ರಾಥಮಿಕ ಶಿಕ್ಷಣದ ಹಂತದಲ್ಲಿ ಮಕ್ಕಳಿಗೆ ಟ್ಯೂಷನ್ ಎಂಬುವುದು ಹೆಚ್ಚುವರಿ ಹೊರೆಯಾಗಿದೆ ಎಂದು ವಿಷಾದ ವ್ಯಕ್ತ ಪಡಿಸಿದರು.
ಯುವವಾಹಿನಿ (ರಿ) ಕೊಲ್ಯ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಸುರೇಶ್ ಬಿ, ಉಪಾಧ್ಯಕ್ಷರುಗಳಾದ ಸವಿತಾ ಸಂತೋಷ್ ಮತ್ತು ಸುಂದರ್ ಸುವರ್ಣ ಹಾಗೂ ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಸೋಮೇಶ್ವರದ ಅಧ್ಯಕ್ಷರಾದ ಆನಂದ್ ಎಸ್. ಕೊಂಡಾಣ, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಮಂಡಳಿ ಕೊಲ್ಯದ ಸದಸ್ಯರು ಮತ್ತು ಯುವವಾಹಿನಿ (ರಿ) ಕೊಲ್ಯ ಘಟಕದ ಸರ್ವ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು. ಯುವವಾಹಿನಿ (ರಿ) ಕೊಲ್ಯ ಘಟಕದ ಕಾರ್ಯದರ್ಶಿಯರಾದ ಲತೀಶ್ ಪಾಪುದಡಿ ಧನ್ಯವಾದ ಸಮರ್ಪಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!