Yuvavahini

NOV 20, 2016 5.30 AM IST

ಯುವವಾಹಿನಿ(ರಿ) ಕೂಳೂರು ಘಟಕ

ಕೂಳೂರು: ಮಕ್ಕಳ ದಿನಾಚರಣೆ ; ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರ

ದಿನಾಂಕ 16-11-2016 ರಂದು ಕೂಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮೊದಲಿಗೆ ಕೂಳೂರು ಘಟಕದ ಅಧ್ಯಕ್ಷ ಸುಜಿತ್‌ರಾಜ್ ಐ.ರವರು ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಕ್ಕಳ ದಿನಾಚರಣೆಯ ಮಹತ್ವದ ಬಗ್ಗೆ ಶ್ರೀಮತಿ ಐ. ಸುಶೀಲಾ ಇವರು ಮಾಹಿತಿ ನೀಡಿದರು.

ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳ ಭಾವಚಿತ್ರ ಸ್ಪರ್ಧೆಯು ಶ್ರೀಮತಿ ರೇಣುಕಾ ಪ್ರಸಾದ್ ಹಾಗೂ ಶ್ರೀಮತಿ ಪ್ರಿಯಾ ಇವರ ಸಂಚಾಲಕತ್ವದಲ್ಲಿ ಸಾಂಪ್ರದಾಯಿಕ ಸಾಮಾನ್ಯ ಹಾಗೂ ಆಧುನಿಕ ಈ ರೀತಿ ಮೂರು ವಿಭಾಗದಲ್ಲಿ ನೆರವೇರಿತು. ವಿಜೇತರಿಗೆ ಬಹುಮಾನ ನೀಡಿ ಸತ್ಕರಿಸಿದರು. ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಬಾಲ ಬಹುಮುಖ ಪ್ರತಿಭೆ ಎಂದು ಗುರುತಿಸಿಕೊಂಡ ಬೇಬಿ ರಕ್ಷಿತಾರನ್ನು ಗೌರವಿಸಿ ಸನ್ಮಾನಿಸಲಾಯಿತು. ಅವರು ತನ್ನ ನೃತ್ಯ ಹಾಗೂ ಸಂಗೀತದಿಂದ ಎಲ್ಲರ ಮನ ರಂಜಿಸಿದರು.

ಈ ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ ಸಂಜೀವ ಪೂಜಾರಿ, ಸಲಹೆಗಾರರಾದ ಜಿ. ಪರಮೇಶ್ವರ ಪೂಜಾರಿ, ಕೇಂದ್ರ ಸಮಿತಿ ಉಪಾಧ್ಯಕ್ಷ ಯಶವಂತ್ ಪೂಜಾರಿ, ಭಾವಚಿತ್ರ ಸ್ಪರ್ಧೆಯ ತೀರ್ಪುಗಾರರಾದ ಲಕ್ಷ್ಮೀ ನಾರಾಯಣ ಹಾಗೂ ದಯಾನಂದ, ಮಂಗಳೂರು ಘಟಕದ ಅಧ್ಯಕ್ಷ ಸುನೀಲ್ ಅಂಚನ್ ಹಾಗೂ ರವೀಂದ್ರನಾಥ ಮೊದಲಾದವರು ಉಪಸ್ಥಿತರಿದ್ದರು. ಶ್ರೀಮತಿ ಪ್ರಿಯಾ ವಂದಿಸಿದರು. ಪ್ರತೀಶ್ ಕಾರ್ಯಕ್ರಮವನ್ನು ನಿರೂಪಿಸಿದರು.

ವಿದ್ಯಾರ್ಥಿಗಳಲ್ಲಿ ಸಭ್ಯತೆ ಹಾಗೂ ಸಂಸ್ಕಾರದಲ್ಲಿ ಹೆತ್ತವರ ಪಾತ್ರ

ದಿನಾಂಕ 2-11-2016 ರಂದು ಕೂಳೂರು ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ಸಭ್ಯತೆ ಹಾಗೂ ಸಂಸ್ಕಾರದಲ್ಲಿ ಹೆತ್ತವರ ಪಾತ್ರ ಎಂಬ ಕಾರ್ಯಾಗಾರ ಜರಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಡಾ| ರಾಧಕೃಷ್ಣರವರು ಸದಸ್ಯರಿಗೆ ಮಕ್ಕಳ ಬೆಳವಣಿಗೆ ಹಾಗೂ ಸಂಸ್ಕಾರದಲ್ಲಿ ಹೆತ್ತವರ ಪಾತ್ರ ಎಷ್ಟು ಅಗತ್ಯವಾದುದು ಎಂಬುದನ್ನು ಮನವರಿಕೆ ಮಾಡಿದರು. ಅಧ್ಯಕ್ಷ ಸುಜಿತ್‌ರಾಜ್ ಸ್ವಾಗತಿಸಿದರು. ಕಾರ್‍ಯದರ್ಶಿ ದೀಕ್ಷಿತ್ ವಂದಿಸಿದರು.

ದಿನಾಂಕ 19-11-2016 ರಂದು ಕೂಳೂರು ಘಟಕ ಮತ್ತು ಮಂಗಳೂರು ಘಟಕ ಇದರ ಜಂಟಿ ಆಶ್ರಯದಲ್ಲಿ ಕೂಳೂರು ಪ್ರೌಢಶಾಲೆ ಕೂಳೂರು ಇವರ ಸಹಯೋಗದೊಂದಿಗೆ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವಾ ತಯಾರಿ ಕಾರ್ಯಾಗಾರವನ್ನು ಕೂಳೂರು ಪ್ರೌಢಶಾಲೆಯಲ್ಲಿ ಜರಗಿತು. ಮಂಗಳೂರು ಘಟಕದ ಅಧ್ಯಕ್ಷ ಸುನೀಲ್ ಅಂಚನ್ ಮತ್ತು ಕೂಳೂರು ಘಟಕದ ಉಪಾಧ್ಯಕ್ಷ ಪುಷ್ಪರಾಜ್, ಕೇಂದ್ರ ಸಮಿತಿ ಸ್ಥಾಪಕ ಅಧ್ಯಕ್ಷ ಸಂಜೀವ ಪೂಜಾರಿ ಮತ್ತು ಕೂಳೂರು ಪ್ರೌಢಶಾಲೆ ಮುಖ್ಯ ಶಿಕ್ಷಕಿ ವಿನಿಫ್ರೆಡ್ ಪತ್ರಾವೋ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಕು. ಮೊನಿಷಾ ಪೂಜಾರಿ ಇವರು ವಿದ್ಯಾರ್ಥಿಗಳಿಗೆ ’ಪರೀಕ್ಷಾ ಪೂರ್ವ ಸಿದ್ಧತೆ’ ಯಾವ ರೀತಿ ಮಾಡಬೇಕೆಂಬ ಕಾರ್ಯಾಗಾರವನ್ನು ನಡೆಸಿಕೊಟ್ಟರು. ವಿದ್ಯಾರ್ಥಿ ಸಂಘಟನೆ ನಿರ್ದೇಶಕ ಲೋಕೇಶ್ ಕೋಟ್ಯಾನ್ ವಂದಿಸಿದರು. ಲಕ್ಷ್ಮೀನಾರಾಯಣ ಕಾರ್‍ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!