Yuvavahini

OCT 21, 2018 3.37 PM IST

ಸಂಘಟನೆ ಬಗ್ಗೆ ಅರಿವು ಮೂಡಿಸಲು ನಮ್ಮ ನಡೆ ಮೂಲಕ ವಿನೂತನ ಹೆಜ್ಜೆಯಿರಿಸಿದ ಯುವವಾಹಿನಿ (ರಿ) ಯಡ್ತಾಡಿ ಘಟಕ

ಪಾಠ ಹೇಳುವ ಆಟಗಳ ನಡುವೆ ಪ್ರಥಮ ಚಿಕಿತ್ಸೆಯ ಪ್ರಾಯೋಗಿಕ ಮಾಹಿತಿ : ನಮ್ಮ ನಡೆ ಕಂಬಳಕಟ್ಟು ಕಡೆ

ಯಡ್ತಾಡಿ : ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಒಂದಿಷ್ಟು ಮನರಂಜನೆಗೆ, ಒಂದಿಷ್ಟು ಸಂಘಟನೆಗೆ ಎಂಬ ಉದ್ದೇಶವನ್ನು ಮುಂದಿರಿಸಿಕೊಂಡು ಯುವವಾಹಿನಿ (ರಿ) ಯಡ್ತಾಡಿ ಘಟಕ ಆರಂಭಿಸಿದ ನಮ್ಮ ನಡೆಯ ಎರಡನೇ ಕಾರ್ಯಕ್ರಮ ನಮ್ಮ ನಡೆ, ಕಂಬಳಕಟ್ಟು ಕಡೆ, ಅಧ್ಯಕ್ಷರಾದ ಸತೀಶ ಪೂಜಾರಿಯವರ ಮನೆಯಲ್ಲಿ ದಿನಾಂಕ 21-10-2018 ರಂದು ನಡೆಸಲಾಯಿತು. ಸ್ವಯಂ ಪ್ರೇರಣೆಯಿಂದ ಸದಸ್ಯರು ಭಾಗವಹಿಸದೇ ಇದ್ದರೆ ಯಾವುದೇ ಸಂಘಟನೆಯನ್ನು ಮುನ್ನಡೆಸುವುದು ಕಷ್ಟ ಸಾಧ್ಯ. ಅದೂ ಅಲ್ಲದೆ ಅದು ವ್ಯರ್ಥ ಕೂಡ. ಈ ನಿಟ್ಟಿನಲ್ಲಿ ಹೊಸ ಚಿಂತನೆಯೊಂದಿಗೆ ಯುವವಾಹಿನಿ ಪ್ರಾರಂಭಿಸಿದ ಕಾರ್ಯಕ್ರಮ ನಮ್ಮ ನಡೆ. ಸಭೆಗಳನ್ನು ಸದಸ್ಯರ ಕುಟುಂಬದ ಜೊತೆ ನಡೆಸಿ ಒಂದೇ ಕುಟುಂಬದ ಕಲ್ಪನೆಯನ್ನು ಬೆಳೆಯಿಸುವುದು. ಒಂದೊಂದು ಬಾರಿ ಒಂದೊಂದು ವಲಯದಲ್ಲಿ ನಡೆಸಿ ಪ್ರತಿಯೊಬ್ಬರಿಗೂ ಒಂದೆರಡು ಸಭೆಗಳಲ್ಲಾದರೂ ಭಾಗವಹಿಸುವಂತೆ ಮಾಡಿ ಯುವವಾಹಿನಿ ಬಗ್ಗೆ ಅರಿವು ಮೂಡಿಸುವುದು. ಮನೋರಂಜನಾ ಆಟದ ಮೂಲಕ ಮಕ್ಕಳಲ್ಲಿ ಹಾಗೂ ಸದಸ್ಯರಲ್ಲಿ ಹೊಸ ಹುರುಪು ರೂಪಿಸುವುದು. ಆಟದೊಳಗೆ ಕಲೆ, ಸ್ರಜನಶೀಲತೆಗೆ ಒತ್ತು ಕೊಟ್ಟು ವ್ಯಕ್ತಿತ್ವ ವಿಕಸನಕ್ಕೆ ಅವಕಾಶ ಮಾಡುವುದು. ಆದಷ್ಟು ಕಡಿಮೆ ಖರ್ಚಿನಲ್ಲಿ ಕಾರ್ಯಕ್ರಮ ಆಯೋಜಿಸಿ ಆರ್ಥಿಕ ಹೊರೆಯಾಗದಂತೆ ನೋಡಿಕೊಳ್ಳುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶಗಳಾಗಿದ್ದವು. ಅದರೊಂದಿಗೆ ಉಪಯುಕ್ತ ಮಾಹಿತಿಯನ್ನು ಹೊರೆಯಾಗದ ರೂಪದಲ್ಲಿ ಆಟದ ನಡುವೆ ಮಂಡಿಸಿ ಪ್ರತಿಯೊಬ್ಬರಿಗೂ ತಲುಪುವ ಹಾಗೆ ಮಾಡುವ ಪ್ರಯೋಗವನ್ನೂ ಈ ಸಭೆಯಲ್ಲಿ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬ ಸಮೇತರಾಗಿ ಭಾಗವಹಿಸಿದ ಸದಸ್ಯರು ಸಮಯ ಪರಿಪಾಲನೆಯಲ್ಲಿ ಬೆಳವಣಿಗೆ ತೋರಿಸಿದರು. ಸಭೆಯ ಆರಂಭವನ್ನು ಪರಿಸರದ ಹಿರಿಯ ವ್ಯಕ್ತಿಗಳು ದೀಪ ಬೆಳಗಿಸುವುದರ ಮೂಲಕ ಪ್ರಾರಂಭ ಮಾಡಲಾಯಿತು. ಗುರು ನಾರಾಯಣರ ನೂತನ ಪ್ರಾರ್ಥನೆಯನ್ನು ಮಕ್ಕಳು ಸೊಗಸಾಗಿ ಹಾಡಿದರು. ಅತಿಥಿಗಳಾಗಿ ಬಂದ ಅಲ್ತಾರು ನಾಗರಾಜು ಸರ್ ಹಾಗೂ ಹಿಂದಿನ ಕಾರ್ಯಕ್ರಮದಲ್ಲಿ ಅತಿ ಹೆಚ್ಚು ತೊಡಗಿಸಿಕೊಂಡವರನ್ನು ಗೌರವಿಸಲಾಯಿತು. ಹಿಂದಿನ ಕಾರ್ಯಕ್ರಮದಂತೆ ಈ ಸಭೆಯಲ್ಲಿ ಸಹ ಸ್ಪರ್ಧಾತ್ಮಕ ಮನೋರಂಜನೆಗೆ ಆಧ್ಯತೆ ಕೊಡಲಾಗಿತ್ತು. ಸ್ಪರ್ಧೆಗಳಲ್ಲಿ ಮೂಕಾಭಿನಯ, ನಿಮಿಷ ಪೂರ್ತಿ ಮಾತಿನಂತಹ ಆಟಗಳಿಂದ ಮನೋರಂಜನೆಯ ಜೊತೆ ಸ್ರಜನಶೀಲತೆಗೂ ಒತ್ತು ನೀಡಲಾಗಿತ್ತು. ಕಾರ್ಯಕ್ರಮಕ್ಕೆ ಬಂದವರೆಲ್ಲರಿಗೂ ವಯಸ್ಸಿನ ಮಿತಿಯಿಲ್ಲದೆ ಸ್ಪರ್ಧಾತ್ಮಕ ಆಟದಲ್ಲಿ ಸಮಾನ ಪ್ರಾಶಸ್ತ್ಯ ನೀಡಲಾಯಿತು. ನಾಲ್ಕು ಸುತ್ತುಗಳ ಸ್ಪರ್ಧೆಯಲ್ಲಿ ಪ್ರತಿ ಸುತ್ತಿನ ಕೊನೆಗೂ ಬಹುಮಾನಗಳನ್ನು ನೀಡಿ ಪ್ರತಿಯೊಬ್ಬರನ್ನು ಕೊನೆಯತನಕ ಆಸಕ್ತರನ್ನಾಗಿ ಮಾಡಲಾಯಿತು.
ಕಾರ್ಯಕ್ರಮದ ನಡುವೆ ಪ್ರಥಮ ಚಿಕಿತ್ಸೆ ಯ ಬಗ್ಗೆ ಪ್ರಾಯೋಗಿಕ ಮಾಹಿತಿಯನ್ನು ನರ್ಸಿಂಗ್ ಸೇವೆಯಲ್ಲಿ ನಿರತರಾದ ಅಕ್ಷತಾ ಪೂಜಾರಿಯವರು ಪ್ರಸ್ತುತಪಡಿಸಿದರು. ಹೃದಯಾಘಾತ, ಪಾರ್ಶ್ವವಾಯು, ಹಾವು ಕಡಿತ, ಮೂರ್ಛೆ ರೋಗದ ಸಂದರ್ಭದಲ್ಲಿ ಮಾಡಬೇಕಾಗುವ ಪ್ರಥಮಚಿಕಿತ್ಸೆಯ ಅರಿವನ್ನು ಎಲ್ಲರಿಗೂ ನೀಡಲಾಯಿತು. ಹಾಗೆಯೇ ಉತ್ತಮ ಆಹಾರ, ನಿಯಮಿತ ವ್ಯಾಯಾಮದ ಬಗ್ಗೆಯೂ ಜನರಿಗೆ ತಿಳಿಹೇಳಲಾಯಿತು. ರಕ್ತದೊತ್ತಡ, ಸಿಹಿ ರೋಗವನ್ನು ಹೇಗೆ ಕಾಪಾಡಬೇಕೆಂಬುದರ ಬಗ್ಗೆಯೂ ಮನವರಿಸಲಾಯಿತು. ಸಭಿಕರೆಲ್ಲರೂ ಆಸಕ್ತಿಯಿಂದ ಪಾಲ್ಗೊಂಡು, ತಮ್ಮಲ್ಲಿನ ಸಂಶಯವನ್ನು ಹಲವಾರು ಸೂಕ್ತವಾದ ಪ್ರಶ್ನೆಯಿಂದ ನಿವಾರಿಸಿಕೊಂಡರು.
ಕಾರ್ಯದರ್ಶಿ ಚಂದ್ರ ಪಿ ಯವರು ನೆರೆದ ಎಲ್ಲರಿಗೂ ಧನ್ಯವಾದ ಸಲ್ಲಿಸಿ ಲಘು ಉಪಹಾರದೊಂದಿಗೆ ಮುಕ್ತಾಯಗೊಳಿಸಲಾಯಿತು. ಚುಟುಕಾಗಿ ಹೇಳುವುದಾದರೆ ಈ ಕಾರ್ಯಕ್ರಮದಲ್ಲಿ ಮಧ್ಯ ವಯಸ್ಸಿನ ಮಹಿಳೆಯರ ಪಾಲ್ಗೊಳ್ಳುವಿಕೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಮನೆಗೆ ತೆರಳುವ ಸಮಯದಲ್ಲಿ ಭಾಗವಹಿಸಿದ ಮಗುವೊಂದು ಅಮ್ಮಾ, ಬರುವ ಸಾರಿ ಈ ಕಾರ್ಯಕ್ರಮ ನಮ್ಮ ಮನೆಯಲ್ಲಿಯೇ ಮಾಡೋಣ ಎಂದು ಸತಾಯಿಸುವುದು ನೋಡಿದಾಗಲೇ ಕಾರ್ಯಕ್ರಮ ಒಳ್ಳೆಯ ರೀತಿಯಲ್ಲಿ ನಡೆಯಿತೆಂಬ ವಿಶ್ವಾಸ ದ್ರಡವಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!