Yuvavahini

NOV 04, 2018 3.19 PM IST

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಪ್ರೇರಣಾ ಶಿಬಿರ

ನಮ್ಮ ಮಾತುಗಳು ಕೇಳುಗರ ಹೃದಯವನ್ನು ತಲುಪಬೇಕು : ಅಭಿಜಿತ್ ಕರ್ಕೇರ

ಬಂಟ್ವಾಳ : ದಿನನಿತ್ಯದ ವೈಯಕ್ತಿಕ ಮತ್ತು ವೃತ್ತಿ ಬದುಕಿನಲ್ಲಿ ವ್ಯವಹರಿಸುವಾಗ ಇತರರನ್ನು ಪ್ರೇರೇಪಿಸುವ ಮನವೊಪ್ಪಿಸುವ ಅಥವಾ ಒತ್ತಾಯಿಸುವ ಸಂದರ್ಭಗಳು ಸಹಜ, ಇಂತಹ ಸಂದರ್ಭಗಳಲ್ಲಿ ಸಂವಹನ ಅತ್ಯಂತ ಪರಿಣಾಮಕಾರಿಯಾಗಿದ್ದು , ಉದ್ದೇಶವನ್ನು ಸಾಧಿಸುವಂತೆ ಇರಬೇಕು. ಆದರೆ ಈ ಕೌಶಲ ಎಲ್ಲರಲ್ಲೂ ಒಂದೇ ಮಟ್ಟದಲ್ಲಿ ಇರುವುದಿಲ್ಲ ಉದಾಹರಣೆಗೆ ಜೀವನದಲ್ಲಿ ಯಾವ ಕೊರತೆ ಇಲ್ಲದಿದ್ದರೂ ಚೈತನ್ಯ ರಹಿತವಾದ ನಿರಾಶವಾದಿಗಳನ್ನು ನೋಡುತ್ತಿರುತ್ತೇವೆ. ಕೆಲವರು ಮಾತನಾಡುವ ಶೈಲಿಯಿಂದ ನಕಾರಾತ್ಮಕ ಅನಿಸಿಕೆ, ಅನುಭವಗಳು ಆಗುತ್ತವೆ. ನಾವು ಅಭಿಪ್ರಾಯವನ್ನು, ಭಾವನೆಗಳನ್ನು ವ್ಯಕ್ತಪಡಿಸುವ ರೀತಿಯಿಂದ ಇತರರಿಗೆ ಬೇಸರ ಕಿರಿಕಿರಿ ಉಂಟಾಗಿ ನಕಾರಾತ್ಮಕ ಪ್ರಕ್ರಿಯೆಗಳು ಮೂಡುತ್ತವೆ. ಈ ರೀತಿಯ ಸಂವಹನದಿಂದ ವ್ಯಕ್ತಿಗತ ಮತ್ತು ವ್ಯಾವಹಾರಿಕ ಸಮಸ್ಯೆಗಳು ಉಲ್ಬಣಗೊಂಡು, ನಾವು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಎಂದು ತರಬೇತುದಾರ ಅಭಿಜಿತ್ ಕರ್ಕೇರ ತಿಳಿಸಿದರು.
ಅವರು ದಿನಾಂಕ 04.11.2018 ರಂದು ಯುವವಾಹಿನಿ (ರಿ) ಬಂಟ್ವಾಳ ಘಟಕದ ಆಶ್ರಯದಲ್ಲಿ ಘಟಕದ ಸದಸ್ಯರಿಗೆ ನಡೆಸಿದ ಪ್ರೇರಣಾ ಶಿಬಿರದಲ್ಲಿ ಪರಿಣಾಮಕಾರಿ ಸಂವಹನ ಕಲೆ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಸಮುದಾಯದ ಜತೆಗಿನ‌ ನಮ್ಮ ಸಂಪರ್ಕವನ್ನು ನಾಲ್ಕು ವಿಧದಲ್ಲಿ ವಿಂಗಡಿಸಬಹುದು. ನಾವು ಏನು ಮಾಡುತ್ತೇವೆ, ಹೇಗೆ ಕಾಣಿಸಿಕೊಳ್ಳುತ್ತೇವೆ, ಏನು ಮಾತನಾಡುತ್ತೇವೆ, ಮತ್ತು ಹೇಗೆ ಮಾತನಾಡುತ್ತೇವೆ.
ಸಂವಹನ ಪ್ರಕ್ರಿಯೆಯಲ್ಲಿ ಎರಡು ಅಂಶಗಳೆಂದರೆ, ಸಂದೇಶಗಳನ್ನು ನೀಡುವುದು ಮತ್ತು ಸ್ವೀಕರಿಸುವುದು. ಈ ಪ್ರಕ್ರಿಯೆಯಲ್ಲಿ ನಾವು ಮುಖ್ಯವಾಗಿ ಬಳಸುವ ಭಾಷೆ ಮತ್ತು ಧಾಟಿಗೆ ಗಮನ ಹರಿಸಬೇಕು. ನಮ್ಮ ಮಾತುಗಳು ಕೇವಲ ಅರ್ಥ ಆದರೆ ಸಾಕಾಗದು ಅದು ಕೇಳುಗರ ಹೃದಯವನ್ನು ತಲುಪಬೇಕು ಆಗಲೇ ಸಂವಹನ ಪರಿಣಾಮಕಾರಿಯಾಗಲು ಸಾಧ್ಯ ಎಂದು ಅಭಿಜಿತ್ ಕರ್ಕೇರ ತಿಳಿಸಿದರು.

ಲೋಹಿತ್ ಕುಮಾರ್ ಇವರು ಯುವಜನರ ಮಾನಸಿಕ ಆರೋಗ್ಯದ ಬಗ್ಗೆ ಮಾತನಾಡಿ, ನಾವೆಲ್ಲರೂ ವೈಯಕ್ತಿಕ ಮತ್ತು ವೃತ್ತಿಜೀವನದಲ್ಲಿ ಹಲವಾರು ಸವಾಲುಗಳನ್ನು ಎದುರಿಸುತ್ತೇವೆ ಮತ್ತು ಇದರಿಂದ ತಾತ್ಕಾಲಿಕ ವಾದ ಒತ್ತಡ, ಖಿನ್ನತೆ ಮತ್ತು ಆತಂಕಕ್ಕೆ ಒಳಗಾಗುತ್ತೇವೆ. ಆದರೆ ಯಾವಾಗ ನಮ್ಮ ಸಹಜ ನಡವಳಿಕೆಯಲ್ಲಿಯೂ ತೊಂದರೆ ಕಾಣಿಸುತ್ತದೆಯೋ, ಆಗ ಅದನ್ನು ಮಾನಸಿಕ ಸಮಸ್ಯೆಯ ಲಕ್ಷಣ. ಮಾನಸಿಕ ಆರೋಗ್ಯದ ಕುರಿತು ನಮ್ಮ ಅಜ್ಞಾನ ಮತ್ತು ಅದಕ್ಕೆ ಅಂಟಿಕೊಂಡಿರುವ ಕಳಂಕದಿಂದಾಗಿ ಎಷ್ಟೋ ಬಾರಿ ಅಗತ್ಯವಾದ ಸಹಾಯ ಪಡೆಯುವುದೇ ಅಸಾಧ್ಯವಾಗುತ್ತದೆ.
ಮಾನಸಿಕ ಕಾಯಿಲೆಗಳ ಬಗ್ಗೆ ಇರುವ ತಪ್ಪು ತಿಳಿವಳಿಕೆಯ ಬಗ್ಗೆ ಅರಿತುಕೊಂಡು , ಮಾನಸಿಕ ಅಸ್ವಸ್ಥತೆಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಪಡೆದುಕೊಂಡಾಗ ಮಾತ್ರ ಉತ್ತಮ ಮಾನಸಿಕ ಆರೋಗ್ಯವನ್ನು ಪಡೆದುಕೊಳ್ಳಲು ಸಾದ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಉಪನ್ಯಾಸಕ ಚೇತನ್ ಮುಂಡಾಜೆ ಇವರು ಸಂಘಟನೆಯ ಉದ್ದೇಶ ಮತ್ತು ಚಟುವಟಿಕೆಗಳ ಬಗ್ಗೆ ಕಾರ್ಯಾಗಾರ ನಡೆಸಿಕೊಟ್ಟರು.

ಉಪನ್ಯಾಸಕ ಶಿವಪ್ರಸಾದ್ ಇವರು ಜೀವನ ಕೌಶಲಗಳ ಬಗ್ಗೆ ಮಾತನಾಡಿ, ಉತ್ತಮ ಸಂಭಾಷಣೆ, ಸಮಯ ನಿರ್ವಹಣೆ, ಸಂಬಂಧಗಳು, ತೆಗೆದುಕೊಳ್ಳುವ ನಿರ್ಧಾರ, ಸಮಸ್ಯೆ ಪರಿಹರಿಸುವ ಕೌಶಲ್ಯ, ತಾಳ್ಮೆ ಮತ್ತು ನಂಬಿಕೆ, ಇಂತಹ ಜೀವನ ಮೌಲ್ಯಗಳು ಪ್ರತಿಯೊಬ್ಬ ವ್ಯಕ್ತಿಯ ಬದುಕಿನ ಅಂಗವಾದರೆ ಮಾತ್ರ ಆತ ಆರೋಗ್ಯಕರ ವ್ಯಕ್ತಿತ್ವವನ್ನೊಳಗೊಂಡು ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಕಾರಣನಾಗುತ್ತಾನೆ ಮತ್ತು ತನ್ನ ಜೀವನ ದಲ್ಲೂ ಯಶಸ್ಸನ್ನೂ ಪಡೆಯುತ್ತಾನೆ ಎಂದು ತಿಳಿಸಿದರು.

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಶಿವಾನಂದ ಎಮ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸಲಹೆಗಾರರಾದ ಬಿ.ತಮ್ಮಯ ದೀಪ ಬೆಳಗುವುದರ ಮೂಲಕ ಪ್ರೇರಣಾ ಶಿಬಿರ ಉದ್ಘಾಟಿಸಿದರು. ವ್ಯಕ್ತಿತ್ವ ವಿಕಸನ ನಿರ್ದೇಶಕ ನಿತಿನ್.ಎಚ್.ಯು ಸ್ವಾಗತಿಸಿದರು. ಕಾರ್ಯದರ್ಶಿ ಕಿರಣ್ ರಾಜ್ ಪೂಂಜರೆಕೋಡಿ ವಂದಿಸಿದರು. ಮಾಜಿ ಅಧ್ಯಕ್ಷ ಪ್ರೇಮನಾಥ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!