Yuvavahini

DEC 01, 2018 3.05 AM IST

ವಿಶುಕುಮಾರ್ ಜೀವನ ಕ್ರಮ ಅನುಕರಣೀಯ : ನರೇಶ್ ಸಸಿಹಿತ್ಲು

ಮಾಣಿ : ವ್ಯಕ್ತಿ ತನ್ನ ನಡತೆ ಮತ್ತು ಕಾರ್ಯಗಳಿಂದ ಬದುಕಿರುವಾಗಲೆ ಸಾಯಬಾರದು ಬದಲಾಗಿ ನಮ್ಮ ವ್ಯಕ್ತಿತ್ವ ನಮ್ಮ ಸಾವಿನ ಬಳಿಕವೂ ನಮ್ಮನ್ನು ಜೀವಂತವಾಗಿರಿಸಬೇಕು, ನಮ್ಮ ನಡುವೆ ಇಲ್ಲದೇ ಇದ್ದರೂ ಅವರ ವ್ಯಕ್ತಿತ್ವದಿಂದ ನಮ್ಮ ನಡುವೆ ಇಂದಿಗೂ ಜೀವಂತವಾಗಿರುವವರು ವಿಶುಕುಮಾರ್ ಅವರ ಜೀವನ ಕ್ರಮ ಅನುಕರಣೀಯ ಎಂದು ಯುವವಾಹಿನಿ ಕೇಂದ್ರ ಸಮಿತಿ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ತಿಳಿಸಿದರು.

ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ.), ಮಾಣಿ ಘಟಕದ ಅತಿಥ್ಯದಲ್ಲಿ ನಡೆದ ವಿಶುಕುಮಾರ್ ಪರಿಚಯ-ಸರಣಿ ಕಾರ್ಯಕ್ರಮದ ಮಾಲಿಕೆ 3. ರಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ದಿನಾಂಕ 01.12.2019 ರಂದು ನಾರಾಯಣ ಗುರು ಸಮುದಾಯ ಭವನ ಮಾಣಿಯಲ್ಲಿ ನಡೆದ ಈ ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ ವಹಿಸಿದ್ದರು. ತನ್ನ ಬದುಕಿನುದ್ದಕ್ಕೂ ನೇರ ನಡೆನುಡಿ ಹೊಂದಿ ಸಾಮಾಜಿಕ ಸ್ಥಿತ್ಯಂತರಗಳನ್ನು ಬರಹದ ಮೂಲಕ ಮೂಡಿಸಿ ಜಾಗೃತಿ ಮೂಡಿಸಿ ತನ್ನ ವಾದವನ್ನು ಜೀವನದಲ್ಲಿ ಸಾಧಿಸಿದರು ಅಂತಹ ಬದುಕು ಕಂಡವರು ಸಾಹಿತಿ, ಕಥೆಗಾರ, ಕಾದಂಬರಿಗಾರ, ನಿರ್ದೇಶಕ, ನಾಟಕಗಾರ ವಿಶು ಕುಮಾರ್ ಅವರ ಅವರ ಬದುಕು ಹಾಗೂ ಸಾಹಿತ್ಯದ ಪರಿಚಯ ವರ್ಣನೆಗೆ ಅಸಾಧ್ಯ ಎಂದರು.

ಸಮಿತಿ ಸಂಚಾಲಕರು ಪ್ರದೀಪ್ ಎಸ್.ಆರ್ ವಾರ್ಷಿಕ ಕಾರ್ಯಕ್ರಮದ ಮಾಹಿತಿ ನೀಡಿದರು. ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ಭಾಷಣ , ರಸಪ್ರಶ್ನೆ ಹಾಗೂ ವಾರ್ಷಿಕ ಕಾರ್ಯಕ್ರಮದ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿ ಅಧ್ಯಕ್ಷರಾದ ಜಯಂತ್ ನಡುಬೈಲ್, ಪ್ರಧಾನ ಕಾರ್ಯದರ್ಶಿ ಸುನೀಲ್ ಕೆ ಅಂಚನ್, ಕೋಶಾಧಿಕಾರಿ ಹರೀಶ್ ಕೋಟ್ಯಾನ್, ಮಾಣಿ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ನಾರಾಯಣ ಸಾಲ್ಯಾನ್, ಯುವಸಿಂಚನ ಪತ್ರಿಕೆ ಸಂಪಾದಕ ರಾಜೇಶ್ ಸುವರ್ಣ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರೇಮ್ ನಾಥ್ ಕೆ, ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಲೋಕೇಶ್ ಸುವರ್ಣ ಅಲೆತ್ತೂರು, ಉಪಾಧ್ಯಕ್ಷ ರಮೇಶ್ ಪೂಜಾರಿ, ಕಾರ್ಯದರ್ಶಿ ಸುಜಿತ್ ಮಾಣಿ ಉಪಸ್ಥಿತರಿದ್ದರು.

ಮಾಣಿ ಘಟಕದ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಪೂಜಾರಿ ಬಾಬನಕಟ್ಟೆ ಸ್ವಾಗತಿಸಿದರು. ಯುವವಾಹಿನಿ ಮಾಣಿ ಘಟಕದ ಉಪಾಧ್ಯಕ್ಷ ಪ್ರಶಾಂತ್ ಧನ್ಯವಾದ ನೀಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!