Yuvavahini

NOV 18, 2018 2.05 PM IST

ಸಂಘಟನೆಯಲ್ಲಿ ಯುವವಾಹಿನಿ ಪಾತ್ರ ಮಹತ್ತರ’

ಕಾಪು : ಸಮಾಜದ ಯುವಕರನ್ನು ಸಂಘಟಿಸುವಲ್ಲಿ ಯುವವಾಹಿನಿಯ ಪಾತ್ರ ಮಹತ್ವದ್ದಾಗಿದೆ ಸಮಾಜದ  ಯುವಕರೊಳಗಿನ ಒಗ್ಗಟ್ಟು ಎಲ್ಲಾ  ಸಮಯಗಳಲ್ಲೂ ಮುಂದುವರಿಯ ಬೇಕು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.
ಕಾಪುವಿನಲ್ಲಿ 18.11.2018 ರಂದು ಯುವವಾಹಿನಿ (ರಿ) ಘಟಕದ ಕಾಪು ಘಟಕದ ವತಿಯಿಂದ ಬಿಲ್ಲವ ಸಮಾಜದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬಿಲ್ಲವ ಯುವಕ ಯುವತಿಯರಿಗಾಗಿ ಆಯೋಜಿಸಲಾಗಿದ್ದ ಕ್ರೀಡಾ ಸ್ನೇಹ ಸಮ್ಮಿಲನ – ಬ್ರಹ್ಮಶ್ರೀ ನಾರಾಯಣಗುರು ಕ್ರೀಡೋತ್ಸವ-2018 ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲು ಮಾತನಾಡಿ,  31 ವರ್ಷದ ಹಿಂದೆ ಪ್ರಾರಂಭಗೊಂಡಿದ್ದ ಯುವವಾಹಿನಿ ಸಂಸ್ಥೆಯು ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಒಟ್ಟು 33 ಘಟಕಗಳ ಮೂಲಕ ಕಾರ್ಯಾಚರಿಸುತ್ತಿದೆ. ವಿದ್ಯೆ, ಉದ್ಯೋಗ ಮತ್ತು ಸಂಪರ್ಕ ಎಂಬ ಮೂರು ಮುಖ್ಯ ಉದ್ದೇಶದೊಂದಿಗೆ ಸಂಘಟನೆಯ ಮೂಲಕ ಸಾವಿರಾರು ಯುವಕ – ಯುವತಿಯರು ಪ್ರಚಾರಕ್ಕೆ ಬರುವಂತಾಗಿದೆ. ಇನ್ನಷ್ಟು ಯುವಜನರನ್ನು ಸಂಘಟಿತರನ್ನಾಗಿಸುವುದು ನಮ್ಮ ಅಭಿಲಾಷೆ ಯಾಗಿದೆ’ ಎಂದರು.

‘ನಮ್ಮನ್ನು ನಾವು ಬಿಲ್ಲವ ಸಮಾಜದವರೆಂದು ಹೇಳಿಕೊಳ್ಳಲು ಅತ್ಯಂತ ಹೆಮ್ಮೆಯಾಗುತ್ತಿದೆ. ಸಾಧಕನಾಗಿ ಮೂಡಿ ಬಂದಾಗ, ಇನ್ಯಾವುದೋ ಕಾರಣಗಳಿಂದಾಗಿ ಕುಗ್ಗಿದಾಗ ಎರಡೂ ಸಂದರ್ಭಗಳಲ್ಲೂ ಸಮಾಜ ನಮ್ಮ ಬೆನ್ನ ಹಿಂದೆ ಇರುತ್ತದೆ’ ಎಂದು ಚಲನಚಿತ್ರ ನಟ ಅರವಿಂದ ಬೋಳಾರ್ ಹೇಳಿದರು.

ಕಾಪು ಬ್ಲಾಕ್ ಕಾಂಗ್ರೆಸ್ (ದ) ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಉಡುಪಿ ಜಿಲ್ಲಾ ಬಿಲ್ಲವರ ಪರಿಷತ್ತಿನ ಅಧ್ಯಕ್ಷ ಶೇಖರ್ ಕರ್ಕೇರ ಹೆಜಮಾಡಿ, ಪಡುಬಿದ್ರಿ ಬಿಲ್ಲರ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್, ಕಾಪು ಬಿಲ್ಲವರ ಸಂಘದ ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ, ನಟಿ ಚಿರಶ್ರೀ ಅಂಚನ್, ತೆಂಕ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರತ್ನಾಕರ ಕೋಟ್ಯಾನ್, ಎಸ್‌ಕೆಪಿಎ ಕಾಪು ವಲಯ ಘಟಕದ ಅಧ್ಯಕ್ಷ ವಿರೇಂದ್ರ ಎಸ್. ಪೂಜಾರಿ, ಯುವವಾಹಿನಿ ಪದಾಧಿಕಾರಿಗಳಾದ ಶಶಿಧರ್ ಸುವರ್ಣ, ಸುಖೇಶ್ ಕುಮಾರ್ ಎರ್ಮಾಳ್, ಯೋಗೀಶ್ ಕೋಟ್ಯಾನ್, ಸೂರ್ಯ ನಾರಾಯಣ್, ದಿನಕರ್, ಸಚಿನ್ ಕುಮಾರ್ ಉಪಸ್ಥಿತರಿದ್ದರು.
ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲು , ತುಳು‌ ರಂಗಭೂಮಿ ಹಾಗೂ ಚಲನಚಿತ್ರ‌ ನಟ ಅರವಿಂದ ಬೋಳಾರ್, ಚಿತ್ರ ನಟಿ ಚಿರಶ್ರೀ ಅಂಚನ್ ಈ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಇವರನ್ನು ಅಭಿನಂದಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಕಾಪು ಘಟಕದ ಅಧ್ಯಕ್ಷ ದೀಪಕ್ ಕುಮಾರ್ ಎರ್ಮಾಳ್ ಸ್ವಾಗತಿಸಿದರು. ಸಲಹಾ ಸಮಿತಿ ಸದಸ್ಯ ನಾಗೇಶ್ ಸುವರ್ಣ ವಂದಿಸಿದರು. ಸತೀಶ್ ಹೊಸ್ಮಾರು ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!