Yuvavahini

FEB 11, 2019 3.30 PM IST

ಯುವವಾಹಿನಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಂಟ್ವಾಳ ವಲಯ ಮಟ್ಟದ ಭಾಷಣ ಸ್ಪರ್ಧೆ

ವಿದ್ಯಾರ್ಥಿಗಳಿಗೆ ಸಾಹಿತ್ಯ ಲೋಕ ಪರಿಚಯಿಸುವ ಕಾರ್ಯ ಶ್ಲಾಘನೀಯ : ಶಸಿಕಲಾ ಕೆ.

ಬಂಟ್ವಾಳ : ಭಾಷಣ ಸ್ಪರ್ಧೆಯ ಮೂಲಕ ವಿದ್ಯಾರ್ಥಿಗಳಿಗೆ ಸಾಹಿತ್ಯಲೋಕವನ್ನು ಪರಿಚಯಿಸಿ ಅವರನ್ನು ಸಾಹಿತ್ಯಲೋಕಕ್ಕೆ ದುಮುಕಿಸಿಕೊಳ್ಳಲು ಅವಕಾಶ ಮಾಡಿ ಕೋಡುವ ಯುವವಾಹಿನಿ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನ ಪ್ರಾಂಶುಪಾಲರಾದ ಶಶಿಕಲಾ ಕೆ ತಿಳಿಸಿದರು.
ಅವರು ದಿನಾಂಕ 11.02.2019 ರಂದು ಬಂಟ್ವಾಳ ಎಸ್.ವಿ.ಎಸ್ ಪದವಿಪೂರ್ವ ಕಾಲೇಜಿನಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ(ರಿ.) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದಲ್ಲಿ ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಬಂಟ್ವಾಳ ವಲಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಲಯ ಮಟ್ಟದ ಭಾಷಣ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಲಾಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಸಾಹಿತಿ ವಿಶುಕುಮಾರ್ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಹುರಿದುಂಬಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ(ರಿ) ಬಂಟ್ವಾಳ ಘಟಕದ ಅಧ್ಯಕ್ಷರಾದ ಶಿವಾನಂದ ಎಮ್ ವಹಿಸಿದ್ದರು. ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಮಾಜಿ ಸಂಚಾಲಕರು ಟಿ ಶಂಕರ್ ಸುವರ್ಣ ಪ್ರಾಸ್ತಾವಿಕ ನುಡಿಗಳೊಂದಿಗೆ ವಿಶು ಕುಮಾರ್ ಪರಿಚಯವನ್ನು ನೀಡಿದರು. ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರು ಪ್ರೇಮ್ ನಾಥ್ ಕೆ. ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು. ವಿಶು ಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ಉಪಸ್ಥಿತರಿದ್ದರು. ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಭವಾನಿ ಎನ್. ಸ್ವಾಗತಿಸಿದರು. ಘಟಕದ ಜತೆ ಕಾರ್ಯದರ್ಶಿ ಕು. ರಚನಾ ಕರ್ಕೇರ ಧನ್ಯವಾದ ಸಲ್ಲಿಸಿದರು.
ಶಂಕರ್ ಸುವರ್ಣ, ಮಾಜಿ ಅಧ್ಯಕ್ಷರು ಯುವವಾಹಿನಿ(ರಿ.) ಕೇಂದ್ರ ಸಮಿತಿ, ಪ್ರೇಮ್ ನಾಥ್ ಕೆ ಮಾಜಿ ಅಧ್ಯಕ್ಷರು, ಯುವವಾಹಿನಿ(ರಿ.) ಕೇಂದ್ರ ಸಮಿತಿ, ಚೇತನ್ ಮುಂಡಾಜೆ, ಉಪನ್ಯಾಸಕರು ಎಸ್.ವಿ.ಎಸ್. ಕಾಲೇಜ್ ಬಂಟ್ವಾಳ ತೀರ್ಪುಗಾರರಾಗಿ ಭಾಗವಹಿಸಿದರು.

ಕು. ಸಹನಾ ಕರ್ಕೇರ ಪ್ರಾರ್ಥನೆ ಮಾಡಿದರು. ಘಟಕದ ಉಪಾಧ್ಯಕ್ಷರಾದ ನಾಗೇಶ್ ಎಮ್, ಸತೀಶ್ ಬಾಯಿಲ, ನಿಕಟ ಪೂರ್ವ ಅಧ್ಯಕ್ಷರು ಲೋಕೇಶ್ ಸುವರ್ಣ, ಸುಂದರ್ ಪೂಜಾರಿ ಬೋಳಂಗಡಿ, ಶ್ರೀಮತಿ ಶೈಲಜಾ ರಾಜೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಉಪನ್ಯಾಸಕ ಶಿವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!