Yuvavahini

FEB 17, 2019 3.23 PM IST

ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದೊಂದಿಗೆ ದಿನಾಂಕ 17.02.2019 ರಂದು ಮಂಗಳೂರು ಪುರಭವನದಲ್ಲಿ ಕರ್ನಾಟಕ ಸರಕಾರದ ನಗರಾಭಿವೃದ್ಧಿ ಸಚಿವರಾದ ಯು.ಟಿ.ಖಾದರ್ ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದರು.

ಮಕ್ಕಳಲ್ಲಿ ಸಾಹಿತ್ಯ ಅಭಿರುಚಿ ಮೂಡಿಸಿ : ಖಾದರ್
ಮಾಲ್ ಸಂಸ್ಕೃತಿ, ಆಧುನಿಕ ಆಟಗಳಲ್ಲಿ ತೊಡಗುವ ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಮೂಡಿಸಲು ಪೋಷಕರು ಪ್ರೇರಕರಾಗಬೇಕು, ಮಕ್ಕಳನ್ನು ಸಾಹಿತ್ಯ ಸಮ್ಮೇಳನ, ಪುಸ್ತಕ ಪ್ರದರ್ಶನಗಳಿಗೂ ಕರೆದೊಯ್ಯಬೇಕು ಎಂದು ಸಚಿವ ಯು.ಟಿ.ಖಾದರ್ ತಿಳಿಸಿದರು.
ದಿವಂಗತ ವಿಶುಕುಮಾರ್ ಅವರ ಮರುಮುದ್ರಣಗೊಂಡ ಪುಸ್ತಕಗಳನ್ನು ಹೈಕೋರ್ಟ್ ನ್ಯಾಯವಾದಿ ಹಾಗೂ ವಿಶುಕುಮಾರ್ ಅವರ ಪತ್ನಿ ವಿಜಯಲಕ್ಷ್ಮಿ ವಿಶುಕುಮಾರ್ ಬಿಡುಗಡೆಗೊಳಿಸಿದರು. ತನ್ನ ಪತಿ ವಿಶುಕುಮಾರ್ 32 ವರ್ಷಗಳ ಹಿಂದೆ ಅಗಲಿದ್ದರೂ ತಾನು ಜಿಲ್ಲೆಯ ಜನತೆಯ ಜತೆ ನಿರಂತರ ಸಂಪರ್ಕ ಇರಿಸಿಕೊಂಡಿದ್ದೇನೆ. ಪತಿ ವಿಶುಕುಮಾರ್ ತನ್ನ ಜತೆ ಕೇವಲ ಒಂದು ವರ್ಷ ಮಾತ್ರ ಇದ್ದು , ಅವರನ್ನು ಬಹಳಷ್ಟು ಅರ್ಥ ಮಾಡಿಕೊಂಡಿದ್ದೇನೆ. ಸಹನೆ ಸರಳತೆ, ಸತ್ಯಕ್ಕೆ ನಿಷ್ಠತೆ ಅವರ ಗುಣ ವಿಶೇಷಗಳು ಅವರ ಸಾಹಿತ್ಯವನ್ನು ಇಂದಿನ ಯುವಜನರಿಗೆ ಒದಗಿಸಲು ಮುಂದಾಗಿರುವ ಯುವವಾಹಿನಿ ಸಂಘಟನೆ ಅಭಿನಂದನಾರ್ಹ ಎಂದವರು ಹೇಳಿದರು. ಅಲ್ಲದೆ ವಿಶುಕುಮಾರ್ ಅವರ ಸರಳತೆಯನ್ನು ವಿವರಿಸಿದರು.


ಗೌರವ ಪುರಸ್ಕಾರ :
ಸಮ್ಮೇಳನದಲ್ಲಿ ಖ್ಯಾತ ರಂಗಭೂಮಿ ಹಾಗೂ ಚಲನಚಿತ್ರದ ಹಾಸ್ಯ ಕಲಾವಿದ ಅರವಿಂದ ಬೋಳಾರ್ ಅವರಿಗೆ ವಿಶುಕುಮಾರ್ ರಂಗ ಪುರಸ್ಕಾರ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಸೀತಾರಾಮ ಕುಮಾರ್ ಕಟೀಲು ಇವರಿಗೆ ವಿಶುಕುಮಾರ್ ಯಕ್ಷ ಪುರಸ್ಕಾರ, ನ್ಯಾಯವಾದಿ ರವಿ ಪ್ರಸನ್ನ ಸಿ.ಕೆ ಅವರಿಗೆ ವಿಶುಕುಮಾರ್ ಸೇವಾ ಪುರಸ್ಕಾರ,ಸಾಹಿತಿ ಉಗ್ಗಪ್ಪ ಪೂಜಾರಿ ಅವರಿಗೆ ವಿಶುಕುಮಾರ್ ಸಾಹಿತ್ಯ ಪುರಸ್ಕಾರ ಪ್ರದಾನ ಮಾಡಲಾಯಿತು.

ವಿಶುಕುಮಾರ್ ರಂಗ ಪುರಸ್ಕಾರ : ಅರವಿಂದ ಬೋಳಾರ್

 

ವಿಶುಕುಮಾರ್ ಯಕ್ಷ ಪುರಸ್ಕಾರ : ಸೀತಾರಾಮ ಕುಮಾರ್ ಕಟೀಲು
ವಿಶುಕುಮಾರ್ ಸೇವಾ ಪುರಸ್ಕಾರ : ರವಿ ಪ್ರಸನ್ನ ಸಿ.ಕೆ

 

ವಿಶುಕುಮಾರ್ ಸಾಹಿತ್ಯ ಪುರಸ್ಕಾರ : ಉಗ್ಗಪ್ಪ ಪೂಜಾರಿ 

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ.ಭಂಡಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಭಾಸ್ಕರ್ ಕೆ, ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ.ತುಕರಾಮ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲು, ಸಸಿಹಿತ್ಲು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಕುಮಾರ್ ಬಿ.ಎನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುನೀಲ್.ಕೆ.ಅಂಚನ್, ವಿಶುಕುಮಾರ್ ಸಾಹಿತ್ಯ ಸಮ್ಮೇಳನದ ಸಂಚಾಲಕ ಶೈಲೇಶ್ ಸಸಿಹಿತ್ಲು, , ಯುವವಾಹಿನಿ ಸಸಿಹಿತ್ಲು ಘಟಕದ ಅಧ್ಯಕ್ಷ ಭಾಸ್ಕರ್ ಕೋಟ್ಯಾನ್, ಕಾರ್ಯದರ್ಶಿ ಶಕೀಲಾ ನರೇಶ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ಸ್ವಾಗತಿಸಿದರು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಂಚಾಲಕ ಪ್ರದೀಪ್ ಎಸ್.ಆರ್ ವಂದಿಸಿದರು. ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!