Yuvavahini

MAR 23, 2019 3.42 PM IST

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ವತಿಯಿಂದ ಮನದ ಮಾತು

ಹದಿಹರೆಯದ ಮಕ್ಕಳ ಮನೋವಿಕಾಸದ ಬಗ್ಗೆ ಕಾಳಜಿ ವಹಿಸಬೇಕು : ಡಾ.ಅರುಣಾ ಯಡಿಯಾಳ್

ಮಂಗಳೂರು : ಹದಿಹರೆಯದ ಅವಧಿಯು ಏರಿಳಿತದಿಂದ ಕೂಡಿರುತ್ತದೆ. ವ್ಯಕ್ತಿಯ ಬಾಲ್ಯದ ಸುರಕ್ಷಿತ ಹಿಡಿತದಿಂದ ಪ್ರೌಡಿಮೆಯ ಕಡೆಗೆ ಹೆಜ್ಜೆಯಿಡುತ್ತಾನೆ. ಈ ಹಂತದಲ್ಲಿ ಮಕ್ಜಳೆಡೆಗೆ ಗಮನ ನೀಡಿ ಅವರ ಮನೋವಿಕಾಸದ ಬಗ್ಗೆ ಕಾಳಜಿ ವಹಿಸಬೇಕು ಎಂದು ಖ್ಯಾತ ಮನೋವೈದ್ಯರಾದ ಡಾ.ಅರುಣಾ ಯಡಿಯಾಳ್ ತಿಳಿಸಿದರು.

ಅವರು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಮಂಗಳೂರಿನ ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ ದಿನಾಂಕ 23.03.2019ರಂದು ನಡೆದ ಮನೆ, ಮನಸ್ಸು, ಜೀವನ ಕನಸುಗಳ ಜೊತೆ ಮಾತುಕತೆ ಮನದ ಮಾತು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಒಬ್ಬನು ಯೋಚಿಸುವ ರೀತಿ, ಭಾವನೆಗಳ ಮೇಲಿನ ನಿಯಂತ್ರಣ ಮತ್ತು ವರ್ತನೆಯಲ್ಲಾಗುವ ಅಸಾಮಾನ್ಯ ಬದಲಾವಣೆಯೇ ಮಾನಸಿಕ ತೊಂದರೆ. ಲೋಕದ ಎಲ್ಲಾ ಕಡೆಗಳಲ್ಲೂ ಕೋಟಿಗಟ್ಟಲೆ ಜನರಿಗೆ ಮಾನಸಿಕ ತೊಂದರೆಗಳಿವೆ. ಇದು ಅವರ ಬಂಧುಮಿತ್ರರ ಬದುಕನ್ನೂ ಬಾಧಿಸುತ್ತದೆ. ಜೀವನದ ಒಂದಲ್ಲ ಒಂದು ಹಂತದಲ್ಲಿ ಪ್ರತಿ ನಾಲ್ಕು ಜನರಲ್ಲಿ ಒಬ್ಬನು ಮಾನಸಿಕ ತೊಂದರೆಗೆ ಒಳಗಾಗುತ್ತಾನೆ. ಲೋಕದಲ್ಲಿ ಹೆಚ್ಚಿನವರನ್ನು ಬಾಧಿಸುವಂಥ ಕಾಯಿಲೆ ಖಿನ್ನತೆ. ಗಂಭೀರವಾದ ಮಾನಸಿಕ ತೊಂದರೆಗಳು. ಅವು ಒಬ್ಬ ವ್ಯಕ್ತಿಯನ್ನು ಎಷ್ಟು ಬಾಧಿಸುತ್ತವೆಂದರೆ ಅವನಿಂದ ಸಾಮಾನ್ಯ ಕೆಲಸಗಳನ್ನು ಮಾಡಲೂ ಕಷ್ಟವಾಗುತ್ತದೆ ಎಂದು ಮನದ ಮಾತು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಡಾ.ಅರುಣಾ ಯಡಿಯಾಳ್ ತಿಳಿಸಿದರು.

ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದ ಈ ಕಾರ್ಯಾಗಾರದಲ್ಲಿ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದರು. ಉತ್ತಮ ಪ್ರಶ್ನೆಗಾಗಿ ಶಿಕ್ಷಕಿ ಅಮಿತಾಂಜಲಿ ಕಿರಣ್ ಉಡುಪಿ ಇವರು ಬಹುಮಾನ ಪಡಕೊಂಡರು. ಶ್ಯಾಮಲ ವಿಕ್ರಮ್ ಕಾರ್ಯಾಗಾರವನ್ನು ಉದ್ಘಾಟಿಸಿದರು. ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ರಶ್ಮಿ.ಸಿ ಕರ್ಕೆರಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸಲಹೆಗಾರರಾದ ಜಿತೇಂದ್ರ ಜೆ.ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಿಸೆಸ್ ಮಂಗಳೂರು 2018 ಪ್ರಶಸ್ತಿಯನ್ನು ಪಡಕೊಂಡ ಸುಧೀಕ್ಷಾ ಕಿರಣ್ ಸುವರ್ಣ ಇವರನ್ನು ಸನ್ಮಾನಿಸಲಾಯಿತು. ಮಹಿಳಾ ಘಟಕದ ಸೇವಾ ಕಾರ್ಯಕ್ರಮದ ಅಂಗವಾಗಿ ಎರಡು ಕಸದ ತೊಟ್ಟಿಯನ್ನು ಇಂದಿರಾ ಪ್ರಿಯದರ್ಶಿನಿ ಉದ್ಯಾನವನಕ್ಕೆ ಹಸ್ತಾಂತರಿಸಲಾಯಿತು. ಕಾರ್ಯಕ್ರಮದ ಬಳಿಕ ಮಹಿಳಾ ಘಟಕದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಕಾರ್ಯಕ್ರಮದ ಸಂಚಾಲಕರಾದ ಸರಸ್ವತಿ, ಸಹಸಂಚಾಲಕರಾದ ಲೋಲಾಕ್ಷಿ ದೇವೇಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯುವವಾಹಿನಿ (ರಿ) ಮಹಿಳಾ ಘಟಕದ ಘಟಕದ ಉಪಾಧ್ಯಕ್ಷರಾದ ಉಮಾ ಶ್ರೀಕಾಂತ್ ಸ್ವಾಗತಿಸಿದರು. ಕಾರ್ಯಕ್ರಮದ ಸಂಚಾಲಕರಾದ ಸರಸ್ವತಿ ವಂದಿಸಿದರು. ಶುಭಾರಾಜೇಂದ್ರ ಕಾರ್ಯಕ್ರಮ ನಿರೂಪಿಸಿದರು ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!