Yuvavahini

APR 07, 2019 2.30 PM IST

ಯುವವಾಹಿನಿ(ರಿ.) ಅಡ್ವೆ ಘಟಕದ ಪದಗ್ರಹಣ

ಅಡ್ವೆ: ಯುವವಾಹಿನಿ ಸಂಘಟನೆಯು ಊರಿನಲ್ಲಿ ಯಾವುದೇ ಅಡೆತಡೆಯಿಲ್ಲದೆ ಕಳೆದ 5 ವರ್ಷಗಳಿಂದ ಸಾಕಷ್ಟು ಬೆಳೆದು ನಿಂತು ಸಮಾಜಕ್ಕೆ ಕೈಲಾದ ಸಹಾಯ ನೀಡುತ್ತಿದೆ. ಇನ್ನು ಮುಂದೆಯೂ ನಿಂತ ನೀರಾಗದೆ ಮುಂದೆ ಸಾಗುತ್ತಿರಲಿ, ಇದಕ್ಕೆ ನಮ್ಮ ಹಿರಿಯರ ಸಲಹೆ ಸಹಕಾರ ಹಾಗೂ ಆಶೀರ್ವಾದ ಸದಾ ಇದೆ ಎಂದು ಅಡ್ವೆ ಗರಡಿಮನೆ ರಾಮ ಪೂಜಾರಿಯವರು ನುಡಿದರು. ಇವರು ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಜರಗಿದ ಯುವವಾಹಿನಿ(ರಿ.) ಅಡ್ವೆ ಘಟಕದ 2019ನೇ ಸಾಲಿನ ಪದಗ್ರಹಣ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ಬಿಲ್ಲವ ಸಮಾಜದ ಏಳಿಗೆಗಾಗಿ ಯುವವಾಹಿನಿಯ ಸದಸ್ಯರು ಸೈನಿಕರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯ ಅತಿಥಿಯಾಗಿದ್ದ ಪತ್ರಕರ್ತ, ರಂಗಕರ್ಮಿ ನರೇಂದ್ರ ಕೆರೆಕಾಡು ರವರು ನುಡಿದರು. ಈ ಸಂದರ್ಭದಲ್ಲಿ ಅಡ್ವೆಯ ಮಣ್ಣಿನಲ್ಲಿ ಜನಿಸಿದ 2 ಬಿಲ್ಲವ ರತ್ನಗಳಾದ ಜಯ ಸಿ ಸುವರ್ಣ ಹಾಗೂ ಅಡ್ವೆ ರವೀಂದ್ರ ಪೂಜಾರಿಯವರ ಸೇವೆಯನ್ನು ನೆನೆಸಿಕೊಂಡರು.

ಈ ಸಂದರ್ಭದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ-ಡೆನ್ನಾನ” ದಲ್ಲಿ ನಟನೆಯಲ್ಲಿ ವೈಯಕ್ತಿಕ ವಿಭಾಗದಲ್ಲಿ ಬಹುಮಾನ ಗಳಿಸಿದ ನಮ್ಮ ಘಟಕದ ಸದಸ್ಯೆ ಉಷಾ ಅವರನ್ನು ಅಭಿನಂದಿಸಲಾಯಿತು. ಅಲ್ಲದೆ ವೇಟ್ ಲಿಫ್ಟಿಂಗ್ ನಲ್ಲಿ ಅದ್ವಿತೀಯ ಸಾಧನೆಗೈದ ನಮ್ಮ ಘಟಕದ ಸದಸ್ಯೆ ಉಮಾಶ್ರೀ ಹಾಗೂ ಹಾಕಿ ಪಂದ್ಯಾಟದಲ್ಲಿ ಸಾಧನೆಗೈದ ಸುರಕ್ಷಾ ಇವರುಗಳನ್ನು ಸನ್ಮಾನಿಸಲಾಯಿತು.

ಕಳೆದ 32 ವರ್ಷಗಳಿಂದ ಯುವವಾಹಿನಿ ಸಂಸ್ಥೆಯು ಉತ್ತಮ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದು, ಉತ್ತಮ ನಾಯಕರುಗಳನ್ನು ಸಮಾಜದ ಮುಖ್ಯವಾಹಿನಿಗೆ ತಂದಿರುತ್ತದೆ ಎಂದು ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷ ಹಾಗೂ ಅಡ್ವೆ ಘಟಕದ ಗೌರವ ಸಲಹೆಗಾರರಾದ ವಿಜಯ್ ಕುಮಾರ್ ಕುಬೆವೂರು ಇವರು 2019-20 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

ಘಟಕದ ಅಧ್ಯಕ್ಷರಾದ ಜಿತೇಶ್ ಜೆ. ಕರ್ಕೇರ ಇವರು ನಿಯೋಜಿತ ಅಧ್ಯಕ್ಷರಾದ ಶ್ರೀಧರ್ ಟಿ. ಪೂಜಾರಿ ಇವರಿಗೆ ಹಾಗೂ ಕಾರ್ಯದರ್ಶಿ ಪ್ರಸನ್ನ ಕುಮಾರ್ ಇವರು ನಿಯೋಜಿತ ಕಾರ್ಯದರ್ಶಿಯಾದ ಶರತ್ ಕುಮಾರ್ ಇವರಿಗೆ ಅಧಿಕಾರ ಹಸ್ತಾಂತರಿಸಿದರು.

ಪದಗ್ರಹಣದ ನಂತರ ಪ್ರತಿಜ್ಞಾ ವಿಧಿ ಸ್ವೀಕರಿಸಿದ ನೂತನ ಅಧ್ಯಕ್ಷರಾದ ಶ್ರೀಧರ್ ಟಿ.ಪೂಜಾರಿ ಇವರು ತಮ್ಮ ಅವಧಿಯಲ್ಲಿ ಘಟಕವನ್ನು ಯಶಸ್ವಿಯಾಗಿ ಮುನ್ನಡೆಸಲು ಎಲ್ಲರ ಸಲಹೆ, ಸಹಕಾರವನ್ನು ಯಾಚಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಜಿತೇಶ್ ಜೆ. ಕರ್ಕೇರ ಇವರು ಕಳೆದ ಒಂದು ವರ್ಷದ ಅಧ್ಯಕ್ಷೀಯ ಅವಧಿಯಲ್ಲಿ ಘಟಕದ ಎಲ್ಲಾ ಕೆಲಸ ಕಾರ್ಯಗಳಿಗೆ ಸಲಹೆ ಸಹಕಾರ ನೀಡಿದ ಸರ್ವ ಸದಸ್ಯರಿಗೆ ವಂದಿಸಿ ಮುಂದೆಯೂ ತನ್ನಿಂದಾದ ಸಹಕಾರವನ್ನು ನೀಡುತ್ತೇನೆ ಎಂಬ ಭರವಸೆ ನೀಡಿದರು.

2018-19 ನೇ ಸಾಲಿನ ಅವಧಿಯಲ್ಲಿ ಉತ್ತಮ ಸಮಾಜಮುಖಿ ಕಾರ್ಯಯೋಜನೆಗಳನ್ನು ಹಮ್ಮಿಕೊಂಡು ಘಟಕವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದ ಜಿತೇಶ್ ಜೆ. ಕರ್ಕೇರ ದಂಪತಿಗಳನ್ನು ಘಟಕದ ಸರ್ವಸದಸ್ಯರ ಪರವಾಗಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ಪದಾಧಿಕಾರಿಗಳು, ವಿವಿಧ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದು 2019-20 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಘಟಕದ ಅಧ್ಯಕ್ಷರಾದ ಜಿತೇಶ್ ಜೆ. ಕರ್ಕೇರ ಇವರು ಎಲ್ಲರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು. ಘಟಕದ ಮಾಜಿ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಅಡ್ವೆ ಗರಡಿಮನೆ ಪ್ರಸ್ತಾವಿಸಿದರು. ಕಾರ್ಯದರ್ಶಿ ಪ್ರಸನ್ನ ಕುಮಾರ್ 2018-19ನೇ ಸಾಲಿನ ವಾರ್ಷಿಕ ವರದಿ ವಾಚಿಸಿದರು. ನಿಯೋಜಿತ ಕಾರ್ಯದರ್ಶಿ ಶರತ್ ಕುಮಾರ್ ಧನ್ಯವಾದ ಸಮರ್ಪಿಸಿದರು. ಸೌಮ್ಯನಿತೇಶ್ ಹಾಗೂ ಶರತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!