Yuvavahini

JAN 08, 2017 12.27 PM IST

ಯುವವಾಹಿನಿ(ರಿ) ಕೇಂದ್ರ ಸಮಿತಿ

ವಿದ್ಯಾನಿಧಿ ಟ್ರಸ್ಟ್ ವತಿಯಿಂದ ’ಪ್ರೇರಣ-2017’

ದಿನಾಂಕ 8-01-2017 ನೇ ರವಿವಾರದಂದು ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ) ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ವೃತ್ತಿ ಮಾರ್ಗದರ್ಶನ ಹಾಗೂ ಯುವಜನತೆಗೆ ಮತ್ತು ಪೋಷಕರಿಗೆ ಉಪಯೋಗವಾಗುವ ಕಾರ್ಯಕ್ರಮವಾಗಿ ಪ್ರೇರಣ-2017’ ಎನ್ನುವ ಕಾರ್ಯಕ್ರಮವು ಶ್ರೀಗೋಕರ್ಣನಾಥೇಶ್ವರ ಕಾಲೇಜು, ಗಾಂಧಿನಗರ, ಮಂಗಳೂರು ಇಲ್ಲಿ ಜರಗಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ರವರು ಪ್ರೇರಣಾ ಶಿಬಿರವನ್ನು ಉದ್ಘಾಟಿಸಿ, ಶುಭಕೋರಿದರು. ಯುವ ವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಶ್ರೀ ಪದ್ಮನಾಭ ಮರೋಳಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಗೋಕರ್ಣನಾಥ ಕಾಲೇಜು ಮಂಗಳೂರು ಇದರ ಪ್ರಾಂಶುಪಾಲ ಗಂಗಾಧರ ಬಿ. ಪೂಜಾರಿ, ಯುವವಾಹಿನಿಯ ಸಲಹೆಗಾರ ಬಿ. ತಮ್ಮಯ್ಯ ಹಾಗೂ ವಿದ್ಯಾನಿಧಿ ಟ್ರಸ್ಟ್‌ನ ಟ್ರಸ್ಟಿಗಳಾದ ಸಂಜೀವ ಪೂಜಾರಿಯವರು ಹಾಗೂ ಜಯಂತ್ ನಡುಬೈಲ್‌ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಮಾರ್ಗದರ್ಶನ ಎಂಬ ಶೈಕ್ಷಣಿಕ ಕಾರ್ಯಾಗಾರವನ್ನು ಪೂರ್ವಾಹ್ನ ಗಂಟೆ 10 ರಿಂದ 12 ರ ವರೆಗೆ ನಡೆಸಲಾಯಿತು. ಮಂಗಳೂರಿನ ಹಿರಿಯ ತರಬೇತುದಾರ ಅಭಿಜಿತ್ ಕರ್ಕೇರರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರವನ್ನು ವಿದ್ಯಾರ್ಥಿಗಳ ಹಾಗೂ ಯುವಜನರ ಉಪಯೋಗಕ್ಕಾಗಿ ಆಕರ್ಷಕವಾಗಿ ನಡೆಸಿಕೊಟ್ಟರು.

ಹಾಗೆಯೇ ಇನ್ನೊಂದು ಸಭಾಂಗಣದಲ್ಲಿ ಪೂರ್ವಾಹ್ನ ಗಂಟೆ 10.30 ರಿಂದ 12 ರವರೆಗೆ ಯುವಜನರು ಮತ್ತು ಪೋಷಕರು ಎಂಬ ಕಮ್ಮಟವನ್ನು ಯುವಜನರ ಮತ್ತು ಪೋಷಕರ ಉಪಯೋಗಕ್ಕಾಗಿ ನಡೆಸಲಾಯಿತು. ಜೇಸೀ ಸಂಸ್ಥೆಯ ರಾಷ್ಟ್ರೀಯ ತರಬೇತುದಾರರಾದ ರಾಮಚಂದ್ರ ರಾವ್‌ರವರು ಸಂಪನ್ಮೂಲ ವ್ಯಕ್ತಿಯಾಗಿ ಈ ಕಮ್ಮಟವನ್ನು ಬಹುಪಯೋಗಿಯಾಗಿ ನಡೆಸಿಕೊಟ್ಟರು.

ಅಪರಾಹ್ನ ಗಂಟೆ 12.30 ಕ್ಕೆ ಸರಿಯಾಗಿ ನಡೆದ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿಯವರು ಅಧ್ಯಕ್ಷರಾಗಿ ಭಾಗವಹಿಸಿದ್ದರು. ಬಿಲ್ಲವ ಸಂಘ, ಅಶೋಕನಗರ ಮಂಗಳೂರು ಇದರ ಅಧ್ಯಕ್ಷರಾದ ಡಾ| ಬಿ.ಜಿ. ಸುವರ್ಣರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಯುವವಾಹಿನಿಯ ಕಾರ್ಯಚಟುವಟಿಕೆಗಳ ಬಗ್ಗೆ ತನ್ನ ಸಂತೋಷ ವ್ಯಕ್ತಪಡಿಸಿದರು. ಟ್ರಸ್ಟಿಗಳಾದ ಜಯಂತ್ ನಡುಬೈಲು, ಸೂರ್ಯಪ್ರಕಾಶ್ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಮೆಚ್ಚುಗೆ ನೀಡಿದರು. ಇನ್ನೋರ್ವ ಟ್ರಸ್ಟಿ ಸಂಜೀವ ಪೂಜಾರಿಯವರು ಉಪಸ್ಥಿತರಿದ್ದರು. ಸುಮಾರು 13 ವಿದ್ಯಾರ್ಥಿಗಳಿಗೆ ರೂ. 53,000/-ರಷ್ಟು ಆರ್ಥಿಕ ನೆರವು ವಿತರಿಸಲಾಯಿತು. ಇವರಲ್ಲಿ ಮೂರು ವಿದ್ಯಾರ್ಥಿಗಳು ವಿದ್ಯಾನಿಧಿ ಟ್ರಸ್ಟಿನಿಂದ ದತ್ತು ತೆಗೆದುಕೊಂಡ ವಿದ್ಯಾರ್ಥಿಗಳು ಎಂದು ತಿಳಿಸಲು ಸಂತೋಷವಾಗುತ್ತದೆ. ತರಬೇತಿ ಮತ್ತು ಅಭಿವೃದ್ಧಿ ಪರಿಶೀಲನಾ ಟ್ರಸ್ಟಿ ತಾರನಾಥ್ ಎಚ್.ಬಿ.ಯವರು ವಿದ್ಯಾರ್ಥಿಗಳ ಪರಿಚಯವನ್ನು ಸಭೆಗೆ ನೀಡಿದರು. ಆಡಳಿತ ಟ್ರಸ್ಟಿ ಸಂತೋಷ್ ಕುಮಾರ್‌ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಂ.ಸಿ.ಎಫ್.ನ ಚಂದ್ರಶೇಖರ್‌ರವರನ್ನು ಟ್ರಸ್ಟ್‌ನ ನೂತನ ಸದಸ್ಯರಾಗಿ ನೇಮಿಸಲಾಯಿತು. ಅವರ ಸೇವೆ, ಅನುಭವ ವಿದ್ಯಾರ್ಥಿಗಳ ಮಾಹಿತಿಗೆ ಬಹಳ ಅನುಕೂಲ ಎಂದು ಸಭೆಯಲ್ಲಿ ತಿಳಿಸಲಾಯಿತು.

ವಿದ್ಯಾನಿಧಿ ಟ್ರಸ್ಟ್‌ನ ಕಾರ್ಯದರ್ಶಿ ಶ್ರೀ ಪ್ರೇಮನಾಥ್ ಇವರು ಧನ್ಯವಾದ ಅರ್ಪಿಸಿ ಯುವವಾಹಿನಿ (ರಿ) ಮಂಗಳೂರು, ಕೇಂದ್ರ ಸಮಿತಿಯ ಮಾಜಿ ನಿರ್ದೇಶಕಿ ಶ್ರೀಮತಿ ಶುಭಾ ರಾಜೇಂದ್ರ ಹಾಗೂ ವಿದ್ಯಾನಿಧಿ ಟ್ರಸ್ಟ್‌ನ ಕೋಶಾಧಿಕಾರಿ ಕೆ. ರಾಜೀವ ಪೂಜಾರಿಯವರು ಕಾರ್ಯಕ್ರಮ ನಿರೂಪಣೆಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!