Yuvavahini

MAY 05, 2019 5.06 PM IST

ಯುವವಾಹಿನಿ ಕೂಳೂರು ಘಟಕದ ಪದಗ್ರಹಣ

ಯುವವಾಹಿನಿ ಯುವಜನತೆಯ ಭರವಸೆಯ ಬೆಳಕಾಗಿದೆ : ಸಂಪತ್ ಸುವರ್ಣ

ಕೂಳೂರು : ಯುವವಾಹಿನಿ ಎಂಬ ಐದು ಅಕ್ಷರದಲ್ಲಿ ಒಂದು ಆಕರ್ಷಣೆ ಇದೆ, ಶಕ್ತಿ ಇದೆ, ಭರವಸೆ ಇದೆ. ಆರೋಗ್ಯಕರವಾದ ಸಂಪರ್ಕವೇ ಸಂಘಟನೆಯ ಸಾಧನ. ವಾಹಿನಿ ಅಂದರೆ ನಿರಂತರವಾದ ಹರಿವು, ಯುವವಾಹಿನಿಯ ನಿಸ್ವಾರ್ಥವಾದ ಸಮಾಜಮುಖಿ ಕಾಳಜಿಯಿಂದ ಕೂಡಿದ ಈ ಹರಿವಿನ ಶಕ್ತಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಯುವವಾಹಿನಿ ಯುವಜನತೆಯ ಭರವಸೆಯ ಬೆಳಕಾಗಿದೆ ಎಂದು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ.ಸುವರ್ಣ ತಿಳಿಸಿದರು.

ದಿನಾಂಕ 05.05.2019 ರಂದು ಕೂಳೂರು ಚರ್ಚ್ ಹಾಲ್ ನಲ್ಲಿ ಜರುಗಿದ ಯುವವಾಹಿನಿ (ರಿ) ಕೂಳೂರು ಘಟಕದ ನೂತನ‌ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಗೋಕರ್ಣನಾಥ ಕೊ ಅಪರೇಟಿವ್ ಬ್ಯಾಂಕ್ ನ ನಿವೃತ್ತ ಜನರಲ್ ಮೆನೇಜರ್ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಅಣ್ಣು ಪೂಜಾರಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಕೂಳೂರು ಘಟಕದ ಅಮೋಘ ಸಾಧನೆ ಶ್ಲಾಘನೀಯ : ಜಯಂತ ನಡುಬೈಲು
ಮೂರು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಕೂಳೂರು ಘಟಕದ ಸಾಧನೆ ಶ್ಲಾಘನೀಯ, ವಿದ್ಯೆಗೆ ಪ್ರೋತ್ಸಾಹ, ನಿರಂತರ ಸಮಾಜಮುಖಿ ಕಾರ್ಯಗಳ ಮೂಲಕ ಕೂಳೂರು ಘಟಕದ ಸಾಧನೆ ಮನೆಮಾತಾಗಿವೆ ಎಂದು ಯುವವಾಹಿನಿ ಕೂಳೂರು ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ತಿಳಿಸಿದರು.

ಮಾತ್ರ ಸ್ಪರ್ಶ ಮುಖವಾಣಿ:

ಘಟಕದ ಸದಸ್ಯ ಲೋಕೇಶ್ ಪೂಜಾರಿ ಸಂಪಾದಕೀಯದಲ್ಲಿ ಮೂಡಿ ಬಂದ ಯುವವಾಹಿನಿ(ರಿ) ಕೂಳೂರು ಘಟಕದ 2018-19 ನೇ ಸಾಲಿನ ಮುಖವಾಣಿ ಮಾತ್ರ ಸ್ಪರ್ಶವನ್ನು ಮಂಗಳೂರು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಭವ್ಯ ಗಂಗಾಧರ್ ಇವರು ಬಿಡುಗಡೆಗೊಳಿಸಿದರು .

ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು .
ಕಾರ್ಯಕ್ರಮದಲ್ಲಿ ಎಲ್. ಕೆ ಗ್ರೂಪ್ ಮಂಗಳೂರು ಉದ್ಯಮಿ ಕಿಶೋರ್ ಸುವರ್ಣ, ಯುವವಾಹಿನಿ ಕೂಳೂರು ಘಟಕದ ಸಲಹೆಗಾರರಾದ ನೇಮಿರಾಜ್, ಬ್ರಹ್ಮಶ್ರೀ ನಾರಾಯಣ ಗುರು ಮoದಿರದ ಅಧ್ಯಕ್ಷರಾದ ಹರೀಶ್ ಅಮೀನ್ ಇವರು
ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಕಲಕಲಾವಲ್ಲಭ (ಜರ್ನಲಿಸಮ್ನಲ್ಲಿ ಮಂಗಳೂರು ಯೂನಿವರ್ಸಿಟಿ ಗೆ 2 ಚಿನ್ನದ ಪದಕ, ಯಕ್ಷಗುರು, ಸಾಹಿತಿ) ದೀವಿತ್ ಕೋಟ್ಯಾನ್ ಇವರನ್ನು ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಸೌಂದರ್ಯ ತಾರೆ ಸುದೀಕ್ಷ ಕಿರಣ್ ಸುವರ್ಣ ಇವರನ್ನು ಅಭಿನoದಿಸಲಾಯಿತು.ವೆೈ.ಪಿ.ಎಲ್ ತoಡದ ಮಾಲಕರಾದ ತಾರನಾಥ್ ಎಚ್.ಬಿ ಹಾಗು ನಮ್ಮ ಘಟಕಕ್ಕೆ ಸದಾ ಸಹಕಾರ ನೀಡುತ್ತಿರುವ ದಿನಕರ್ ಬoಗೇರ ಇವರನ್ನು ಕೂಡ ಅಭಿನoದಿಸಲಾಯಿತು.
ಯುವವಾಹಿನಿ ಕೂಳೂರು ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ನೂತನ ಪದಾಧಿಕಾರಿಗಳನ್ನು ಸಭೆಗೆ ಪರಿಚಯಿಸಿದರು . ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಭಾಸ್ಕರ್ ಕೋಟ್ಯಾನ್ ರವರು ಸಭೆಯನ್ನುದ್ದೇಶಿಸಿ ತನ್ನ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ತಿಳಿಸಿ ಸರ್ವರ ಸಹಕಾರ ಯಾಚಿಸಿದರು.


ಕಾರ್ಯಕ್ರಮದಲ್ಲಿ ಸುಮಾರು 73 ವಿದ್ಯಾರ್ಥಿಗಳಿಗೆ ರೂಪಾಯಿ 2,19,000/- ಮೊತ್ತದ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು. ಕೇಂದ್ರ ಸಮಿತಿಯ ವಿದ್ಯಾನಿಧಿಗೆ ರೂಪಾಯಿ 40000/- ಹಸ್ತಾಂತರಿಸಲಾಯಿತು .
SSLC ಹಾಗೂ PUC ಯಲ್ಲಿ ಶೇಕಡಾ 80% ಕ್ಕಿಂತ ಅಧಿಕ ಅಂಕ ಗಳಿಸಿದ 24 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ನಿರ್ಗಮನ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ರವರು ತನ್ನ ಅಧಿಕಾರ ಅವಧಿಯಲ್ಲಿ ಸಹಕರಿಸಿದ ಎಲ್ಲಾ ಸದಸ್ಯರಿಗೂ ಹಾಗೂ ಇತರ ಘಟಕದವರಿಗೂ ಕೃತಜ್ಞತೆ ಸಲ್ಲಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.
ಕಾರ್ಯದರ್ಶಿ ಪವಿತ್ರಾ ಅಂಚನ್ ವಾರ್ಷಿಕ ವರದಿ ಮಂಡಿಸಿದರು. ಲೋಕೇಶ್ ಕೋಟ್ಯಾನ್ ಸ್ವಾಗತಿಸಿದರು ವಿ. ಜೆ ಪ್ರತೀಶ್ ಗೌರೀಶ್ ಹಾಗೂ ಸುಜಿತ್ ರಾಜ್. ಕಾರ್ಯಕ್ರಮ ನಿರೂಪಿಸಿದರು. ಸಂಚಾಲಕರಾದ ನಿಶಿತ್ ಪೂಜಾರಿ ವಂದನಾರ್ಪಣೆ ಮಾಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!