Yuvavahini

MAY 08, 2019 4.01 AM IST

ಅಗ್ನಿ ಸುರಕ್ಷತೆ ಮತ್ತು ಮುಂಜಾಗ್ರತೆ ಬಗ್ಗೆ ಮಾಹಿತಿ ಮತ್ತೆ ಪ್ರಾತ್ಯಕ್ಷಿಕೆ

ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ ಬೇಸಿಗೆ ಶಿಬಿರ, ‘ವಿಕಸನ-2019’ ರ ಅಂಗವಾಗಿ ನಾಲ್ಕನೇ ದಿನ ಮಕ್ಕಳಿಗೆ ‘ಅಗ್ನಿ ಸುರಕ್ಷತೆಯ’ ಬಗ್ಗೆ ಅರಿವು ಮೂಡಿಸಲಾಯಿತು. ಅಂಕಿ ಅಂಶಗಳ ಪ್ರಕಾರ ಹಲವಾರು ಬೆಂಕಿ ಅವಘಢಗಳು ಅರಿವಿನ ಕೊರತೆಯಿಂದ ಉಂಟಾಗುವಂತಹದು. ಬಿಸಿಲಿನ ಬೇಗೆಯ ಈ ದಿನಗಳಲ್ಲಿ ಅಗ್ನಿ ಅನಾಹುತಗಳ ಸಾಧ್ಯತೆ ಇನ್ನೂ ಹೆಚ್ಚು. ‘ಅರಿವಿನ ತಂಗಾಳಿ’ ಹೆಸರಿನಲ್ಲಿ ನಡೆಯುತ್ತಿರುವ ಈ ಶಿಬಿರದಲ್ಲಿ ಅಗ್ನಿ ಅನಾಹುತಗಳನ್ನು ಸರಿಯಾದ ಮಾಹಿತಿಯ ಮೂಲಕ ಆದಷ್ಟು ಕಡಿಮೆ ಮಾಡುವ ಮೂಲಕ ಉದ್ದೇಶದಿಂದ ‘ಅಗ್ನಿ ಸುರಕ್ಷತೆ ಮತ್ತು ಮುಂಜಾಗ್ರತೆ ಬಗ್ಗೆ ಮಾಹಿತಿ ಮತ್ತೆ ಪ್ರಾತ್ಯಕ್ಷಿಕೆ ಯನ್ನು ಕುಂದಾಪುರ ಅಗ್ನಿಶಾಮಕ ಠಾಣೆಯಿಂದ ಏರ್ಪಡಿಸಲಾಗಿತ್ತು.

ಮೊದಲು ಉಪನ್ಯಾಸದ ಮೂಲಕ ಅಧಿಕಾರಿಗಳಾದ ರಾಘವ್ ಅವರು ಮಕ್ಕಳಿಗೆ ಮನ ಮುಟ್ಟುವಂತೆ ಬೆಂಕಿಯ ಬಗ್ಗೆ ವಿವರವಾಗಿ ತಿಳಿಸಿದರು. ಬೆಂಕಿ ಯಾವ ರೀತಿಯಲ್ಲಿ ಪಸರುತ್ತದೆ, ಅದನ್ನು ತಡೆಯಲು ಏನು ಮಾಡಬೇಕು ಮತ್ತು ಯಾಕಾಗಿ ಮಾಡಬೇಕು ಎನ್ನುವುದನ್ನು ವಿವರಿಸಿದರು. ಉಪನ್ಯಾಸದ ಜೊತೆ ಶಿಬಿರಾರ್ಥಿಗಳಿಂದ ಬೆಂಕಿ ಅವಘಡವನ್ನು ಯಾವ ರೀತಿಯಲ್ಲಿ ತಡೆಯಬಹುದೆಂಬುದಾಗಿ ಪ್ರಾಯೋಗಿಕವಾಗಿ ತಿಳಿಸಿದರು. ತನ್ಮೂಲಕ ಬೆಂಕಿ ಬಗ್ಗೆ ಇರುವ ಹೆದರಿಕೆಯನ್ನು ದೂರವಾಗಿಸಿ ಅದನ್ನು ತಡೆಯುವ ಬಗ್ಗೆ ಜಾಗ್ರತಿ ಮೂಡಿಸಿದರು. ಶಾಲೆಯ ಅಡುಗೆ ಕೆಲಸದಲ್ಲಿ ನಿರತರಾದವರಿಗೂ ಗ್ಯಾಸ್ ಸ್ಟವ್ ಮೂಲದ ಅಗ್ನಿ ದುರಂತವನ್ನು ಒಂದು ಸಾಮಾನ್ಯ ಗೋಣಿ ಚೀಲದ ಮೂಲಕ ಯಾವ ರೀತಿಯಲ್ಲಿ ತಡೆಯಬಹುದು ಎಂದು ಪ್ರಾಯೋಗಿಕವಾಗಿ ತಿಳಿಸಲಾಯಿತು. ಆಮೇಲೆ ಶಾಲೆಯ ಮೈದಾನದಲ್ಲಿ ದೊಡ್ಡ ಗಾತ್ರದ ಬೆಂಕಿಯನ್ನು ಯಾವ ರೀತಿ ಮುನ್ನೆಚ್ಚರಿಕೆ ವಹಿಸಿ ತಡೆಯಬಹುದೆಂಬ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು. ವಿವಿಧ ಗಾತ್ರದ ಕಟ್ಟಡಗಳ ಬೆಂಕಿಯನ್ನು ಬೇರೆ ಬೇರೆ ರೀತಿಯ ಫಿಲ್ಟರ್ ಬಳಸಿ ಯಾವ ರೀತಿ ಅಗ್ನಿ ಶಾಮಕ ದಳದವರು ನಿಯಂತ್ರಿಸುತ್ತಾರೆ ಎಂಬುದನ್ನು ಮಕ್ಕಳು ಹಾಗೂ ಯುವವಾಹಿನಿ ಸದಸ್ಯರು ಕುತೂಹಲದಿಂದ ವೀಕ್ಷಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!