Yuvavahini

APR 25, 2019 4.41 PM IST

ನಮ್ಮ ನಡುವಿನ ಸಾಧಕರು - ನಮ್ಮ ಕಥೆ ನಿಮ್ಮ ಜತೆ

ಸಾಧನೆಗೆ ಕಲಿಕೆಯ ಅಂಕವೊಂದೇ ಮಾನದಂಡವಲ್ಲ

ಯಡ್ತಾಡಿ : ಯುವವಾಹಿನಿ(ರಿ) ಯಡ್ತಾಡಿ ಘಟಕದ ಆಶ್ರಯದಲ್ಲಿ ಐದು ದಿನಗಳ ಕಾಲ ನಡೆಸಿದ ಬೇಸಿಗೆ ಶಿಬಿರ, ವಿಕಸನ 2019 (ಅರಿವಿನ ತಂಗಾಳಿ) ರ ಅಂಗವಾಗಿ, ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಮಾಡಿಸಿ ಸನ್ಮಾನಿಸುವ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಸಫಲತೆಯೊಂದೇ ಸಾಧನೆಯ ಮಾನದಂಡವಾಗಿ ರೂಪುಗೊಳ್ಳುತ್ತಿದ್ದು, ಇದು ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವುದು ಕಳವಳಕಾರಿಯಾದ ಅಂಶವಾಗಿದೆ. ಶೈಕ್ಷಣಿಕ ಸಾಧನೆಗೆ ಹೊರತಾಗಿಯೂ ಶ್ರಮವಹಿಸಿ ದುಡಿದರೆ ಸಮಾಜದಲ್ಲಿ ಶ್ರೇಷ್ಠ ಸಾಧನೆ ಮಾಡಬಹುದೆಂಬ ವಿಷಯ ಮನವರಿಕೆ ಮಾಡಲು ಪ್ರತಿ ದಿನ ಒಬ್ಬೊಬ್ಬ ಸಾಧಕರನ್ನು ಪರಿಚಯಿಸಲಾಯಿತು.

ಕ್ಷಯ ರೋಗದಿಂದ ಊರಿಗೆ ಮರಳಿ ಬಂದು ಮತ್ತೆ ಮುಂಬಯಿಗೆ ಹೋಗಲಾಗದ ಶಿವರಾಮ ಕೊಠಾರಿ ಕಠಿಣ ದುಡಿಮೆಯಿಂದ ತಂಪು ಪಾನೀಯ ಉದ್ಯಮ ಆರಂಭಿಸಿದ ಕಥೆ, ಕೃಷಿ ಕೆಲಸದ ಆಸಕ್ತಿಯಿಂದ ವಿದ್ಯಾಭ್ಯಾಸ ಮೊಟಕು ಗೊಳಿಸಿದ ಸಂಕಯ್ಯ ಶೆಟ್ಟಿ ಜನರೊಡನೆಯ ಉತ್ತಮ ಬಾಂಧವ್ಯದಿಂದ ಉತ್ತಮ ಉದ್ಯಮಿಯಾಗಿ ಬೆಳೆದ ಕಥೆ, ಬಡತನದ ಬೇಗೆಯಿಂದ ಏಳನೇ ತರಗತಿಗೆ ಶಾಲೆ ಬಿಟ್ಟು ಹೋಟೆಲ್ ಕೆಲಸ ಸೇರಿದ ಕೃಷ್ಣ ನಾಯ್ಕ ಸೆಂಟ್ರಿಂಗ್ ಉದ್ಯಮದಲ್ಲಿ ತನ್ನತನವನ್ನು ಕಂಡು ಕೊಂಡ ಕಥೆ, ಊಟಕ್ಕಿಲ್ಲದೆ ನಾಲ್ಕನೇ ತರಗತಿಗೆ ಜಲ್ಲಿ ಕುಟ್ಟಲು ಶುರುಮಾಡಿದ ನಾರಾಯಣ ಪೂಜಾರಿಯವರು, ನಿರ್ಮಾಣ ಉದ್ಯಮದಲ್ಲಿ ಹಲವಾರು ಜನರಿಗೆ ಕೆಲಸ ಕೊಡಿಸಿ, ಇನ್ನು ಹಲವರನ್ನು ತಮ್ಮಂತೆಯೇ ಸ್ವಂತ ನಿರ್ಮಾಣ ಉದ್ಯಮದಲ್ಲಿ ತೊಡಗಿಸಿದ ಕಥೆ. ಹೀಗೆ ಒಂದೊಂದು ದಿನ ಒಂದೊಂದು ಕಥೆ ವಿದ್ಯಾರ್ಥಿಗಳಲ್ಲಿ ಸಾಧನೆಯ ಹಿಂದಿರುವ ಕಠಿಣ ಶ್ರಮದ ಮಹತ್ವ ಮರೆಯದ ಹಾಗೆ ಉಳಿಯುವಂತೆ ಮಾಡಿತು. ಕೊನೆಯ ದಿನದ ಅತಿಥಿಯಾದ ಕೇಂದ್ರ ಸಮಿತಿಯ ಅಧ್ಯಕ್ಷ, ಜಯಂತ್ ನಡುಬೈಲು ಅವರ ರಾತ್ರಿ ಪಾಳಿಯ ಕಾವಲುಗಾರನಾಗಿ ವಿದ್ಯಾಭ್ಯಾಸ ಮುಗಿಸಿದ ಬಗೆ, ನೂರು ಕೋಳಿಗಳಿಂದ ಆರಂಭಿಸಿದ ಕೋಳಿ ಸಾಕಾಣಿಕಾ ಉದ್ಯಮವನ್ನು ತಿಂಗಳಿಗೆ ಎರಡು ಲಕ್ಷದವರೆಗೆ ದಾಟಿಸಿದ ರೋಚಕ ಕಥೆ ವಿದ್ಯಾರ್ಥಿಗಳನ್ನು ಮಂತ್ರ ಮುಗ್ದವಾಗಿಸಿ ಸಾಧನೆಯ ಛಲವನ್ನು ಮೂಡಿಸಿತು. ಕಠಿಣ ಶ್ರಮವಹಿಸಿ ದುಡಿಯುವ ಮನಸ್ಸಿರುವವರಿಗೆ ಸಾಧನೆಗೆ ಅಸ್ಸಾಧ್ಯವಾದುದು ಯಾವುದೂ ಇಲ್ಲವೆಂಬ ಎಂಬ ಸಂದೇಶವನ್ನು ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ನಿರೂಪಿಸುವ ಪ್ರಯತ್ನದಲ್ಲಿ ಯುವವಾಹಿನಿ(ರಿ) ಯಡ್ತಾಡಿ ಸಣ್ಣ ಹೆಜ್ಜೆಯೊಂದನ್ನು ಇಟ್ಟಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!