Yuvavahini

JUN 05, 2019 7.45 AM IST

ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಉಜಿರೆ ಸಂಚಲನಾ ಸಮಿತಿಯಿಂದ

ಗುರುಪೂಜೆ, ನಾರಾಯಣಗುರು ತತ್ವ ಪ್ರಚಾರ

ಉಜಿರೆ: ಸಮಾಜದ ಉದ್ಧಾರಕ್ಕಾಗಿ ಜನ್ಮತಾಳಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಹಿಂದುಳಿದ ಮತ್ತು ಶೋಷಿತ ವರ್ಗದವರಿಗೆ ಮಾನವ ರೂಪದಲ್ಲಿ ಬಂದ ದೇವರು ಇವರು ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ಸ್ವಾಮೀಜಿ ಹೇಳಿದರು.
ಅವರು ಜೂ.5 ರಂದು ಯುವವಾಹಿನಿ ಬೆಳ್ತಂಗಡಿ ಘಟಕದ ಉಜಿರೆ ಸಂಚಲನ ಸಮಿತಿ ಆಶ್ರಯದಲ್ಲಿ ಎಸ್.ಕೆ ಮೆಮೋರಿಯಲ್ ಹಾಲ್‌ನಲ್ಲಿ ನಡೆದ ಗುರುಪೂಜೆ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ತತ್ವ ಪ್ರಚಾರದ ಮೂಲಕ ಆಶೀರ್ವಚನ ನೀಡಿದರು.
ನಾರಾಯಣ ಗುರುಗಳು ವಿದ್ಯೆ, ಸಂಘಟನೆಯ ಮೂಲಕ ದೇವರ ಭಕ್ತಿಯ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಗುರುಗಳ ತತ್ವದಂತೆ ಯಾವುದೇ ಸಮಾರಂಭಗಳನ್ನು ಆಡಂಬರವಿಲ್ಲದೆ ಶ್ರದ್ಧಾ ಭಕ್ತಿಯಿಂದ ಮಾಡಿದಾಗ ನೆಮ್ಮದಿ ಲಭಿಸುವುದು. ಸಮಾಜದ ಏಳಿಗೆಗಾಗಿ ಸಂಘಟನೆಯ ಮೂಲಕ ರಾಜಕೀಯ ಶಕ್ತಿಯನ್ನು ಪಕ್ಷಬೇಧ ಮರೆತು ಎಲ್ಲರೂ ಒಂದಾಗಿ ವಿಶ್ವಾಸದ ಹೋರಾಟ ಮಾಡಬೇಕು ಎಂದರು

ಜಗತ್ತಿನ ಶ್ರೇಷ್ಠ ಗುರು: ಕೆ.ವಸಂತ ಬಂಗೇರ
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಾಜಿ ಶಾಸಕ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಗೌರವಾಧ್ಯಕ್ಷ ಕೆ.ವಸಂತ ಬಂಗೇರ ಪರಿಸರ ದಿನದ ಅಂಗವಾಗಿ ಸಸಿ ವಿತರಿಸಿ ಮಾತನಾಡುತ್ತಾ ಯಾವುದೇ ಕಾರ್ಯಕ್ರಮದಲ್ಲಿ ಸಮಯ ಪ್ರಜ್ಞೆಯನ್ನು ಪಾಲಿಸಿ ಸಭಾ ಗೌರವ ಬೆಳೆಸಬೇಕು. ಜಗತ್ತಿನ ಶ್ರೇಷ್ಠ ಗುರು ಬ್ರಹ್ಮಶ್ರೀ ನಾರಾಯಣ ಗುರು ಸಮಾಜದ ಜೀವಂತ ಗುರುಗಳು ಹಿಂದುಳಿದ ವರ್ಗದವರನ್ನು ಸಮಾಜದಲ್ಲಿ ತಲೆ ಎತ್ತಿ ನಡೆಸಲು ಅವಕಾಶ ಮಾಡಿಕೊಟ್ಟ ಗುರುಗಳು ಯುವವಾಹಿನಿಯಂತಹ ಸಂಘಟನೆ ಮೂಲಕ ಯುವಕರು ಸಮಾಜದ ಏಳಿಗೆಗಾಗಿ ಪರಿಪೂರ್ಣ ಶಿಕ್ಷಣ ನೀಡುವ ಮೂಲಕ ಪ್ರೋತ್ಸಾಹಿಸಬೇಕು ಎಂದರು.

ಸಸಿ ವಿತರಣೆ: ಪರಿಸರದ ದಿನಾಚರಣೆಯಂದು ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದರ ಅಂಗವಾಗಿ ಭಾಗವಹಿಸಿದ್ದ ಎಲ್ಲರಿಗೂ ಸಂಘಟನೆ ವತಿಯಿಂದ ಗಿಡ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ಮೊದಲು ಗುರುಪೂಜೆ, ಶ್ರೀ ಸತ್ಯನಾರಾಯಣ ಪೂಜೆ ರಘುನಾಥ ಶಾಂತಿಯವರ ನೇತೃತ್ವದಲ್ಲಿ ಜರುಗಿತು. ಉಜಿರೆ ಸಂಚಲನ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿ ಸಹಕರಿಸಿದರು.
ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಮಾಜಿ ಶಾಸಕ .ಕೆ ಪ್ರಭಾಕರ ಬಂಗೇರ, ಉಜಿರೆ ಉದ್ಯಮಿ ರವಿಕುಮಾರ್ ಬರಮೇಲು,ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ .ಬಿ ಸುವರ್ಣ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರೀಶ್ ಸುವರ್ಣ ಕನ್ಯಾಡಿ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ ಪೂಜಾರಿ, ಮಾಜಿ ಸೈನಿಕ ಉಜಿರೆ.ಎಸ್.ಎನ್.ಡಿ.ಪಿ ಅಧ್ಯಕ್ಷ ಎ.ಕೆ ಶಿವನ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಉಜಿರೆ ಗ್ರಾಮ ಪಂಚಾಯತ್ ಸದಸ್ಯರುಗಳಾದ ನೀಲಯ್ಯ ಪೂಜಾರಿ ಕೊಡೆಕ್ಕಲ್, ಮಂಜುಳಾ ಉಮೇಶ್ ಅತ್ತಾಜೆ, ನಾಗವೇಣಿ, ಮಂಜಪ್ಪ ಪೂಜಾರಿ, ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷ ರಾಜೇಶ್ ಕೋಟ್ಯಾನ್, ಶ್ರೀ ನಾರಾಯಣ ಗುರು ತತ್ವ ಪ್ರಚಾರಕ ಎಂ.ಕೆ ಪ್ರಸಾದ್, ಯುವವಾಹಿನಿ ಬೆಳ್ತಂಗಡಿ ಘಟಕದ ನಿಕಟಪೂರ್ವ ಅಧ್ಯಕ್ಷ ಪ್ರಶಾಂತ್ ಮಚ್ಚಿನ, ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕ ಹರೀಶ್ ಕುಮಾರ್ ಬರಮೇಲು, ಯುವವಾಹಿನಿ ಕೇಂದ್ರ ಸಮಿತಿಯ ನಾಮ ನಿರ್ದೇಶಿತ ಸದಸ್ಯ ಉಮನಾಥ ಕೋಟ್ಯಾನ್ ಗೌರವ ಉಪಸ್ಥಿತರಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ಉಜಿರೆ ಯುವವಾಹಿನಿ ಸಂಚಲನ ಸಮಿತಿ ಅಧ್ಯಕ್ಷ ಮನೋಜ್ ಕುಂಜರ್ಪ ವಹಿಸಿದ್ದರು. ವಿಶಾಲಾಕ್ಷಿಯವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು.
ಉಜಿರೆ ಸಂಚಲನ ಸಮಿತಿ ಕಾರ್ಯದರ್ಶಿ ಸ್ವಾಗತಿಸಿ, ಯುವವಾಹಿನಿ ಬೆಳ್ತಂಗಡಿ ಘಟಕದ ಸದಸ್ಯ ಅಶ್ವತ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕು| ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!