Yuvavahini

JUN 16, 2019 4.03 PM IST

ಯುವವಾಹಿನಿ (ರಿ.)ಮಾಣಿ ಘಟಕದ ವತಿಯಿಂದ ಯುವ ಸ್ಪೂರ್ತಿ 2018-19

ಮಾಣಿ : ದಿನಾಂಕ 16-06-2019ರಂದು ಯುವವಾಹಿನಿ(ರಿ.)ಮಾಣಿ ಘಟಕದ ವತಿಯಿಂದ ಸ.ಹಿ.ಪ್ರಾ.ಶಾಲೆ ಗಡಿಯಾರ, ಕೆದಿಲ ಇಲ್ಲಿ ಯುವ ಸ್ಪೂರ್ತಿ 2018-19 ಪರಿಣಾಮಕಾರಿ ಭಾಷಣ ಕಲೆ, ಸಂವಹನ ಮತ್ತು ಮಾನಸಿಕ ಆರೋಗ್ಯ ಹಾಗೂ ವ್ಯಕ್ತಿತ್ವ ವಿಕಸನ ವಿಷಯಗಳ ಬಗ್ಗೆ ಕಾರ್ಯಾಗಾರ ನಡೆಯಿತು.

ಬೆಳಿಗ್ಗೆ 9.30ಕ್ಕೆ ಸರಿಯಾಗಿ ಉದ್ಘಾಟನಾ ಸಮಾರಂಭ ಜರಗಿತು.ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು,ನಿವೃತ್ತ ಸಿಎ ಬ್ಯಾಂಕ್ ಉದ್ಯೋಗಿ ಸೋಮಪ್ಪ ಪೂಜಾರಿ ಮಾದೆಲು, ,ಮಾಣಿ ಘಟಕ ಸಲಹೆಗಾರ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರವಿಚಂದ್ರ , ಗಡಿಯಾರ ಶಾಲೆ ಮುಖ್ಯ ಶಿಕ್ಷಕರು ಸುಚೇತ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಯುವವಾಹಿನಿ(ರಿ.)ಮಾಣಿ ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ ಅಧ್ಯಕ್ಷತೆಯನ್ನು ವಹಿಸಿದ್ದರು, ಯುವ ಸ್ಪೂರ್ತಿ 2018-19 ಸಂಚಾಲಕರಾದ ಜಯಪ್ರಕಾಶ್ ಕೆದಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. .ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ತುಕಾರಾಂ ಪೂಜಾರಿ, ಪದ್ಮನಾಭ ಮರೊಳಿ ಹಾಗೂ ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಮೋಹನ ಪೆಜಕಳ ಉಪಸ್ಥಿತರಿದ್ದರು.ಕಾರ್ಯದರ್ಶಿ ಸುಜಿತ್ ಅಂಚನ್ ಸ್ವಾಗತಿಸಿದರು, ಉಪಾಧ್ಯಕ್ಷರಾದ ಪ್ರಶಾಂತ್ ಅನಂತಾಡಿ ವಂದಿಸಿದರು.

ಮನಸ್ಸಿನಲ್ಲಿ ಭಾಷಣ ಕಲೆಯನ್ನು ಆಲವಡಿಕೊಳ್ಳಬೇಕದರೆ ಕನಿಷ್ಠಪಕ್ಷ ಜಗತ್ತಿನ ಹಾಗೂ ಇತರ ವಿಷಯಗಳ ಬಗ್ಗೆ ಸಾಮಾನ್ಯ ಜ್ಞಾನ ಇರಬೇಕು. ಭಾಷಣ ಮಾಡುವ ಕಲೆಗಾರನಲ್ಲಿ ಪ್ರೇಕ್ಷಕರನ್ನು ತನ್ನತ್ತ ಸೆಳೆಯುವ ಮುಖ ಭಾವವಿರಬೇಕು,ಸ್ಪಷ್ಟವಾದ ಉಚ್ಚಾರಣೆ ಇರಬೇಕು ಮತ್ತು ಎಲ್ಲ ವಿಚಾರ ಬಗ್ಗೆ ತಿಳಿದಿರಬೇಕು ಎಂದು ತರಬೇತಿದಾರರದ ಆಭಿಜಿತ್ ಕರ್ಕೇರ ತಿಳಿಸಿದರು.ಇವರು ಪರಿಣಾಮಕಾರಿ ಭಾಷಣಕಲೆ ಬಗ್ಗೆ ಕಾರ್ಯಾಗಾರ ನಡೆಸಿದರು.ಕೊನೆಯಲ್ಲಿ ಪ್ರೇಮನಾಥ್ ಬಂಟ್ವಾಳ,ಮಾಜಿ ಅಧ್ಯಕ್ಷರು ಕೇ.ಸ ಮಂಗಳೂರು ಇವರು ಶಾಲು ಹೊದಿಸಿ ಸನ್ಮಾನಿಸಿದರು.

ಮನುಷ್ಯನು ಹೊರಜಗತ್ತಿಗೆ ಎಷ್ಟು ಸಂತೋಷವಾಗಿ ಕಾಣುತ್ತಾನೊ ಆಗೆಯೇ ಮಾನಸಿಕವಾಗಿಯೂ ಸದೃಢ ಆಗಿರಬೇಕಾಗುತ್ತದೆ. ಮೂಡನಂಬಿಕೆಗಳನ್ನು ಹೆಚ್ಚು ನಂಬಿ ಮೊಸ ಹೊಂದುವುದರಿಂದ ತನ್ನಲ್ಲಿ ಇರುವ ಮಾನಸಿಕ ಸಮಸ್ಯೆಯನ್ನು ಪರಿಹರಿಸುವುದರಿಂದ ಜೀವನದಲ್ಲಿ ಮುಕ್ತಿ ಸಿಗುತ್ತದೆ. ಮನುಷ್ಯರು ತುಂಬಾ ತರಹದ ಮಾನಸಿಕ ಸಮಸ್ಯೆಗಳಿಗೆ ತುತ್ತಾಗುತ್ತಾರೆ ಮತ್ತು ಆದರಿಂದ ಹೇಗೆ ಮುಕ್ತಿ ಪಡೆಯಬೇಕು ಎಂದು ಮಾನಸಿಕ ಆಪ್ತಸಮಲೋಚಕರಾದ ಲೊಹಿತ್ ರವರು “ಯುವ ಸ್ಪೂರ್ತಿ 2018-19” ಮಾನಸಿಕ ಆರೋಗ್ಯ ತರಬೇತಿಯಲ್ಲಿ ತಿಳಿಸಿದರು.ನಂತರ ಅಥಿತಿಗಳಾದ ನಿತಿನ್ ಅರ್ಬಿ,ಉದ್ಯಮಿ ಮತ್ತು ಸತೀಶ್ ಬಾಯಿಲ,ಉಪಾಧ್ಯಕ್ಷರು ಬಂಟ್ವಾಳ ಘಟಕ ಇವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

“ವ್ಯಕ್ತಿತ್ವ ವಿಕಸನ” ತರಬೇತಿ ಕಾರ್ಯಗಾರದಲ್ಲಿ ಸುದಾಕರ್ ಕಾರ್ಕಳರವರು ವ್ಯಕ್ತಿ ತನ್ನ ಮನಸ್ಸಿನ ಒಳಗಿನ ತತ್ವಗಳನ್ನು ಬದಲಾವಣೆ ಮಾಡಿಕೊಂಡರೆ ಜೀವನದಲ್ಲಿ ಯಶಸ್ಸು ಖಂಡಿತ ಎಂದು ಹೇಳಿದರು.ಮನುಷ್ಯ ತನ್ನ ಜೀವನದಲ್ಲಿ ನಕಾರತ್ಮಕ ಭಾವನೆಗಳನ್ನು ಹೆಚ್ಚಾಗಿ ಆಲವಡಿಕೊಳ್ಳದೆ ಸಕಾರತ್ಮಕ ಭಾವನೆಗಳನ್ನು ಜೀವನದಲ್ಲಿ ಆಲವಡಿಕೊಳ್ಳಬೇಕು.
ವ್ಯಕ್ತಿ ತನ್ನ ಮನಸ್ಸಿನ ಒಳಗಿನ ತತ್ವಗಳನ್ನು ಬದಲಾಯಿಸಿಕೋಂಡರೆ ಮಾತ್ರ ವಿಕಸನ ಆಗಾಬಹುದು ಎಂದು ಎಲ್ಲಾರ ಮನಸ್ಸಿಗೆ ಮುಟ್ಟುವಾಗ ಹೇಳಿದರು.ಅತಿಥಿಯಾಗಿ ಜನಾಬ್ ಪಿ ಇಬ್ರಾಹಿಂ, SDMC ಅಧ್ಯಕ್ಷರು ಅಗಮಿಸಿದರು.ಮಾಣಿ ಘಟಕದ ಅಧ್ಯಕ್ಷರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಕೊನೆಯಲ್ಲಿ ಕಾರ್ಯಕ್ರಮದ ಸಂಚಾಲಕರಾದ ಜಯಪ್ರಕಾಶ್ ಕೆದಿಲ ಇವರನ್ನು ಅಧ್ಯಕ್ಷರು ಸನ್ಮಾನಿಸಿದರು.ರಾಜೇಶ್ ಬಲ್ಯ ಮತ್ತು ದಿನಕರ್ ಬರಿಮಾರ್ ಕಾರ್ಯಕ್ರಮ ನಿರೂಪಿಸಿದರು.ನಿ.ಪೂ ಅಧ್ಯಕ್ಷರಾದ ರಾಜೇಶ್ ಬಾಬನಕಟ್ಟೆ,ಉಪಾಧ್ಯಕ್ಷರಾದ ರಮೇಶ್ ಮುಜಲ ಮತ್ತು ಸಲಹೆಗಾರರಾದ ದಯಾನಂದ ಪೂಜಾರಿ ಕೊಡಜೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಸದಸ್ಯರು ಮತ್ತು ಶಾಲಾ ಮಕ್ಕಳು ಭಾಗವಹಿಸಿ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!