Yuvavahini

JUN 15, 2019 4.49 PM IST

ಯುವವಾಹಿನಿ ಕಡಬ ಘಟಕದ ಪದಗ್ರಹಣ ಸಮಾರಂಭ

ಜಾತಿ ಸಂಘಟನೆಗಳು ಸಮಾಜಮುಖಿಯಾಗಲಿ : ಡಾ.ಸದಾನಂದ ಪೆರ್ಲ

ಕಡಬ : ಜಾತಿ ಸಂಘಟನೆಗಳು ಸಮಾಜದ ಅಭಿವೃದ್ಧಿಗೆ ಪೂರಕವಾಗಿರಬೇಕೇ ಹೊರತು ಸಮಾಜವನ್ನು ಒಡೆಯಬಾರದು.ಸಮಾಜಮುಖಿ ಚಿಂತನೆಗಳಿಂದ ಸದೃಢ ರಾಷ್ಟ್ರ ನಿರ್ಮಾಣದ ಗುರಿಯೊಂದಿಗೆ ಜಾತಿ ಸಂಘಟನೆಗಳು ಕಾರ್ಯ ನಿರ್ವಹಿಸಬೇಕು ಎಂದು ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ.ಸದಾನಂದ ಪೆರ್ಲ ಹೇಳಿದರು.
ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಕಡಬ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದರು.
ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಮತ್ತು ಸಂದೇಶಗಳು ಜಾಗತಿಕ ಮನ್ನಣೆ ಪಡೆದಿವೆ. ಅವರ ಆದರ್ಶ ಮತ್ತು ತತ್ವದಡಿ ಕಾರ್ಯ ನಿರ್ವಹಿಸುತ್ತಿರುವ ಯುವವಾಹಿನಿ ಸಂಘಟನೆಯು ಯುವಕರಿಗೆ ಸ್ಫೂರ್ತಿ ಮತ್ತು ಚೈತನ್ಯವನ್ನು ತುಂಬುತ್ತಿದೆ. ಸಮಾಜದ ಯುವ ಸಮುದಾಯ ಐಎಎಸ್, ಐಪಿಎಸ್, ಐಎಫ್ಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಮೂಲಕ ಯುವಜನರು ಉನ್ನತ ಅವಕಾಶಗಳನ್ನು ಪಡೆಯಬೇಕು ಈ ನಿಟ್ಟಿನಲ್ಲಿ ಇಂತಹ ಸಂಘಟನೆಗಳು ಪೂರಕವಾಗಿ ಸ್ಪಂದಿಸಬೇಕು ಎಂದು ಸಲಹೆ ನೀಡಿದರು.

ಯುವವಾಹಿನಿ ಸಂಘಟನೆಯ ಪಾತ್ರ ಮಹತ್ವದ್ದು
ಸಮಾರಂಭ ಉದ್ಘಾಟಿಸಿ ಮಾತನಾಡಿದ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘದ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಕೆಡೆಂಜಿ,ನಮ್ಮ ಶಕ್ತಿ ನಮಗೇ ತಿಳಿದಿಲ್ಲ.ಇದ್ದುದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಬದಲು ಇಲ್ಲದೆಡೆ ತುಡಿಯುತ್ತಿದ್ದೇವೆ.ಸಮಾಜದ ಯುವಕರಿಗೆ ಸರಿಯಾದ ಮಾರ್ಗದರ್ಶನ ನೀಡುತ್ತಿರುವ ಯುವವಾಹಿನಿ ಸಂಘಟನೆಯ ಪಾತ್ರ ಮಹತ್ವದ್ದು ಎಂದರು.

ಸನ್ಮಾನ

ನೂತನ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ ಜನಾರ್ದನ ಬಿ.ಎಲ್. ಸರ್ವರ ಸಹಕಾರ ಕೋರಿದರು.ನಿವೃತ ಸೈನಿಕ ರಾಜೇಶ್ ಬಸ್ತಿ ಕೊಡೆಂಕಿರಿ ಹಾಗೂ ಹಿರಿಯ ಕೃಷಿಕ ಶೀನಪ್ಪ ಪೂಜಾರಿ ಪಾಲಪ್ಪೆ ಅವರನ್ನು ಸನ್ಮಾನಿಸಲಾಯಿತು. ಘಟಕದ ನಿರ್ಗಮನ ಅಧ್ಯಕ್ಷ ಯೋಗೀಶ್ ಕುಮಾರ್ ಅಗತ್ತಾಡಿ ಹಾಗೂ ಕಾರ್ಯದರ್ಶಿ ಮಿಥುನ್ ಸುಂದರ್ ಪಲ್ಲತ್ತಡ್ಕ ಅವರನ್ನು ಅಭಿನಂದಿಸಲಾಯಿತು.ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು‌ ಗೌರವಿಸಲಾಯಿತು.

ಪ್ರಮಾಣ ವಚನ
ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ ನಡುಬೈಲು ಯುವವಾಹಿನಿ ಕಡಬ ಘಟಕದ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.ಯುವವಾಹಿನಿ ಕಡಬ ಘಟಕದ ನಿರ್ಗಮನ ಅಧ್ಯಕ್ಷ ಯೋಗೀಶ್ ಕುಮಾರ್ ಅಗತ್ತಾಡಿ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗು ಘಟಕದ ಸಲಹೆಗಾರರಾಗಿರುವ ಡಾ.ಸದಾನಂದ ಕುಂದರ್ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಆಲಂಕಾರು ಮುಖ್ಯ ಅತಿಥಿಗಳಾಗಿದ್ದರು.
ಬಿಲ್ಲವ ಸಂಘದ ಕಡಬ ವಲಯ ಸಂಚಾಲಕ ಎಸ್.ಜಿನ್ನಪ್ಪ ಸಾಲಿಯಾನ್, ಮರ್ದಾಳ ವಲಯ ಸಂಚಾಲಕ ಸತೀಶ್ ಕೆ. ಮರ್ದಾಳ, ಆಲಂಕಾರು ವಲಯ ಸಂಚಾಲಕ ಸದಾನಂದ ಕುಮಾರ್ ಮಡ್ಯೊಟ್ಟು ಉಪಸ್ಥಿತರಿದ್ದರು. ಯುವವಾಹಿನಿ ಘಟಕದ ಕೋಶಾಧಿಕಾರಿ ಅಭಿಲಾಷ್ ಪಿ.ಕೆ. ಸ್ವಾಗತಿಸಿ, ನಿರ್ಗಮನ ಕಾರ್ಯದರ್ಶಿ ಮಿಥುನ್ ಸುಂದರ್ ಪಲ್ಲತ್ತಡ್ಕ 2018-19ನೇ ಸಾಲಿನ ವರದಿ ವಾಚಿಸಿದರು. ಶಿಕ್ಷಕಿ ಸರಿತಾ ಜನಾರ್ದನ ಬಿ.ಎಲ್. ಕಾರ್ಯಕ್ರಮ ನಿರೂಪಿಸಿ, ನೂತನ ಕಾರ್ಯದರ್ಶಿ ಶಿವಪ್ರಸಾದ್ ನೂಚಿಲ ವಂದಿಸಿದರು.
ಸುಚೇತಾ ಕದ್ರ ಹಾಗೂ ದಯಾನಂದ ಕರ್ಕೇರ ಆಲಂಕಾರು ಅವರು ಸಮ್ಮಾನಿತರನ್ನು ಪರಿಚಯಿಸಿದರು. ಘಟಕದ ನೂತನ ಉಪಾಧ್ಯಕ್ಷ ರಾಜೇಶ್ ಪೂಜಾರಿ ದೋಳ ಅವರು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪರಿಚಯಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!