Yuvavahini

JAN 22, 2017 9.18 AM IST

ಯುವವಾಹಿನಿ(ರಿ) ಮಂಗಳೂರು ಘಟಕ

ಯು.ಪಿಎಸ್.ಸಿ, ಕೆ.ಪಿ.ಎಸ್.ಸಿ. ಮತ್ತು ಐ.ಬಿ.ಪಿ.ಎಸ್ – ಉಚಿತ ಪ್ರೇರಣಾ ಶಿಬಿರ-2016-17

ದಿನಾಂಕ 22-1-2017 ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ(ನಿ) ಮಂಗಳೂರು, ದಿ ಕ್ರಿಶ್ಚಿಯನ್ ಎಜ್ಯುಕೇಶನ್ ಸೊಸೈಟಿ (ರಿ) ಮಂಗಳೂರು, ರೋಟರಿ ಕ್ಲಬ್ ಮಂಗಳೂರು, ಯುವವಾಹಿನಿ (ರಿ) ಮಂಗಳೂರು ಘಟಕ ಮತ್ತು I.A.S. ಮಂಗಳೂರು ಸಂಸ್ಥೆಗಳ ಸಹಯೋಗದೊಂದಿಗೆ UPSC/KAS/IBPS ಉಚಿತ ಪ್ರೇರಣಾ ಶಿಬಿರವು ಜರಗಿತು. ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಎಸ್‌ಪಿ ಭೂಷಣ್ ಗುಲಾಬ್ ರಾವ್ ಬೋರಸೆ IPS ಉದ್ಘಾಟಿಸಿ, ಮಾತನಾಡುತ್ತಾ ಸೇವಾ ಮನೋಭಾವ ಇರುವವರು ಕಠಿಣ ಅಭ್ಯಾಸ, ತರಬೇತು ಪಡೆದು ಜನ ಸೇವೆ ಮಾಡುವ ಮನೋಭಾವವಿದ್ದರೆ ಮಾತ್ರ ಐ.ಎ.ಎಸ್, ಕೆ.ಎ.ಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕೇ ಹೊರತು ಇತರರ ಒತ್ತಾಯ ಅಥವಾ ಯಾವುದೇ ಸೌಲಭ್ಯ ಪಡೆಯುವ ಉದ್ದೇಶದಿಂದ ಅಲ್ಲ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ ಸಂಘವು ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಸತತ ಮೂರು ವರ್ಷಗಳಿಂದ IAS ಪ್ರೇರಣಾ/ತರಬೇತಿ ಶಿಬಿರವನ್ನು ಹಮ್ಮಿಕೊಂಡಿರುವುದಲ್ಲದೆ, ಹೊರ ರಾಜ್ಯಗಳಿಗೆ ಹೋಗಿ ತರಬೇತಿ ಪಡೆಯಲು, ಅಸಹಾಯಕ ಪ್ರತಿಭೆಗಳಿಗೆ ಒಂದು ವರ್ಷ ಉಚಿತ ತರಬೇತಿ ನೀಡುತ್ತಿದೆ ಎಂದರು. ಗೌರವ ಅತಿಥಿಗಳಾಗಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತ ರಘುನಂದನ್ ಮೂರ್ತಿ ಮಾತನಾಡಿ ಪೋಷಕರ ಪ್ರೋತ್ಸಾಹ, ನಿರಂತರ ಅಧ್ಯಯನ, ಅಭ್ಯಾಸ, ತಯಾರಿ, ಮರಳಿ ಯತ್ನದ ಮನೋಭಾವ ಅಗತ್ಯ ಎಂದರು. IAS ಪ್ರೋಬೇಶನರ್ ಗಾರ್ಗಿ ಜೈನ್ IAS ಇವರು ಮಾತನಾಡಿ ನಿರಂತರವಾದ ಕಠಿಣ ಅಭ್ಯಾಸದಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ ಎಂದರು.

ಮಂಗಳೂರು ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಡಾ. ಸದಾನಂದ ಪೆರ್ಲ ಮಾತನಾಡಿ, ಈ ಕಾಲದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಪತ್ರಿಕೆ, ರೇಡಿಯೋವನ್ನು ಯಾವ ರೀತಿ ಪರಿಣಾಮಕಾರಿಯಾಗಿ ಬಳಸಬಹುದೆಂಬ ಮಾಹಿತಿ ನೀಡಿದರು. ಸರ್ವಜ್ಞ IAS ಅಕಾಡೆಮಿ ಮಂಗಳೂರು ಇದರ ನಿರ್ದೇಶಕರಾದ ಸುರೇಶ್ ಎಮ್.ಎಸ್. ಇವರು ಉನ್ನತ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ತಯಾರಿ ಮತ್ತು ತರಬೇತಿಯ ಬಗ್ಗೆ ಮಾಹಿತಿ ನೀಡಿದರು. ರೋಟರಿ ಕ್ಲಬ್‌ನ ಉಪಾಧ್ಯಕ್ಷರಾದ ವಸಂತ ಶೆಣೈ, ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷ ಸುನಿಲ್ ಕೆ. ಅಂಚನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಆತ್ಮಶಕ್ತಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ. ಸ್ವಾಗತಿಸಿದರು. ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!