ಯುವವಾಹಿನಿ ವೇಣೂರು ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ

ಸಮಾಜಸೇವೆಯ ಪರಿಕಲ್ಪನೆ ಎಲ್ಲೆಡೆ ಫಸರಿಸಲಿ: ಜಯಂತ ನಡುಬೈಲು

ವೇಣೂರು: ಆರೋಗ್ಯ ಮತ್ತು ಶಿಕ್ಷಣಕ್ಕೆ ಉತ್ತೇಜನ ನೀಡುವ ವೇಣೂರು ಯುವವಾಹಿನಿ ಘಟಕದ ಕಾರ್ಯವೈಖರಿಯೇ ವಿಶಿಷ್ಟ. ಯುವ ಮನಸ್ಸುಗಳಿಂದ ನಿಶ್ವಾರ್ಥವಾಗಿ ನಡೆಯುವ ಇಂತಹ ಸೇವೆಯಿಂದ ಸಂಘಟನೆ ಜನಸಾಮಾನ್ಯರಿಗೆ ಹತ್ತಿರವಾಗುತ್ತಿದೆ. ಇಂತಹ ಸಮಾಜಸೇವೆಯ ಪರಿಕಲ್ಪನೆ ಎಲ್ಲೆಡೆ ಫಸರಿಸಲಿ ಎಂದು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು ಹೇಳಿದರು.
ಯುವವಾಹಿನಿ ವೇಣೂರು ಘಟಕದ ವತಿಯಿಂದ ರವಿವಾರ ವೇಣೂರು ಲಯನ್ಸ್ ಕ್ಲಬ್ ಸಭಾಭವನದಲ್ಲಿ ಜರಗಿದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಆಸರೆ ಎಂಬ ಸೇವಾ ಯೋಜನೆ ಮೂಲಕ ವೇಣೂರು ಘಟಕ ಅವಿಭಜಿತ ಜಿಲ್ಲೆಗೆ ಮಾದರಿ ಆಗಿದೆ, ಇಂತಹ ಕಾರ್ಯ ನಿರಂತರ ನಡೆಯಲಿ ಎಂದರು.
ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷ ನವೀನ್ ಪಚ್ಚೇರಿ ಅಧ್ಯಕ್ಷತೆ ವಹಿಸಿ, ಸುಮಾರು 120 ಮಂದಿ ಸದಸ್ಯರಿಂದ ಪ್ರತೀ ತಿಂಗಳು ರೂ. ೧೦೦ನ್ನು ಸಂಗ್ರಹಿಸಿ ಓರ್ವ ಫಲಾನುಭವಿಗೆ ನೀಡಲಾಗುತ್ತಿದೆ. ಮುಂದಿನ ದಿನಗಳಿಂದ ಸದಸ್ಯರನ್ನು ಹೆಚ್ಚು ಮಾಡುವ ಚಿಂತನೆ ಇದೆ. ಆರೋಗ್ಯ, ಕಾನೂನು, ಪರಿಸರ ಸಂರಕ್ಷಣೆ, ಸ್ನೇಹ ಮಿಲನ ಮುಂತಾದ ಕಾರ್ಯಕ್ರಮಗಳ ಆಯೋಜನೆಗೆ ಚಿಂತನೆ ನಡೆಸುತ್ತಿದ್ದೇವೆ ಎಂದರು.
ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಪ್ರೇಮನಾಥ ಕೆ., ಮೂಡಬಿದಿರೆ ಯುವವಾಹಿನಿ ಘಟಕದ ಅಧ್ಯಕ್ಷ ಜಗದೀಶ್ಚಂದ್ರ ಡಿ.ಕೆ., ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ರಾಕೇಶ್ ಕುಮಾರ್ ಮೂಡುಕೋಡಿ, ನಾಮ ನಿರ್ದೇಶಿತ ಸದಸ್ಯ ಯೋಗೀಶ್ ಬಿಕ್ರೊಟ್ಟು, ವೇಣೂರು ಘಟಕದ ಕೋಶಾಧಿಕಾರಿ ಹರೀಶ್ ಪಿ.ಎಸ್. ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಬದುಕು ಅನ್ನುವುದು ಸ್ವಲ್ಪದರಲ್ಲೇ ಮುಗಿದುಹೋಗುತ್ತದೆ. ವಿದ್ಯಾರ್ಥಿಗಳು ಈಗಿನಿಂದಲೇ ಕನಸು ಕಾಣಬೇಕು. ಆ ಗುರಿಯನ್ನು ಮುಟ್ಟಲು ನಿರಂತರ ಶ್ರಮಿಸಬೇಕು. ಆಗ ನೀವು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಗುರುತಿಸಿಕೊಳ್ಳಲು ಸಾಧ್ಯ.
ಜಯಂತ ನಡುಬೈಲು, ಅಧ್ಯಕ್ಷ, ಯುವವಾಹಿನಿ ಕೇಂದ್ರ ಸಮಿತಿ

ಪ್ರತಿಭಾ ಪುರಸ್ಕಾರ-ಸಹಾಯನಿಧಿ ವಿತರಣೆ
ಕಳೆದ ಸಾಲಿನಲ್ಲಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಸುಜ್ಞಾನ್, ದೀಕ್ಷಾ, ಸುಶಾಂತ್ ಹಾಗೂ ಸುವಿಧ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಜಾತಿಬೇಧವಿಲ್ಲದೆ ಬಡ ಅರ್ಹ ಫಲಾನುಭವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು. ಘಟಕದ ಆಸರೆ ಸೇವಾ ಯೋಜನೆಯ ೧೧ನೇ ಕಂತನ್ನು ಅನಾರೋಗ್ಯದಿಂದ ಬಳಲುತ್ತಿರುವ ಕುಶಾನ್ ಅವರಿಗೆ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಘಟಕದಿಂದ ಕೇಂದ್ರ ಸಮಿತಿಗೆ ವಿದ್ಯಾರ್ಥಿವೇತನ ಸಹಾಯನಿಧಿಗಾಗಿ ರೂ. ೧೦ ಸಾವಿರ ಮೊತ್ತದ ಚೆಕ್ಕನ್ನು ಕೇಂದ್ರ ಸಮಿತಿಗೆ ಹಸ್ತಾಂತರಿಸಿದರು. ಘಟಕಕ್ಕೆ ಸಹಾಯಧನ ನೀಡಿದವರನ್ನು ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಘಟಕದ ಮಾಜಿ ಅಧ್ಯಕ್ಷ ನಿತೀಶ್ ಎಚ್. ಪ್ರಾಸ್ತಾವಿಸಿ, ಸ್ವಾಗತಿಸಿದರು. ಘಟಕದ ಉಪಾಧ್ಯಕ್ಷ ಅರುಣ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿ, ಕಾರ್ಯದರ್ಶಿ ಶಿವಪ್ರಕಾಶ್ ಅಂಬಾಶ್ರೀ ವಂದಿಸಿದರು.

 

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!