Yuvavahini

JUN 23, 2019 3.59 PM IST

ಯುವವಾಹಿನಿ ವೇಣೂರು ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ

ಸಮಾಜಸೇವೆಯ ಪರಿಕಲ್ಪನೆ ಎಲ್ಲೆಡೆ ಫಸರಿಸಲಿ: ಜಯಂತ ನಡುಬೈಲು

ವೇಣೂರು: ಆರೋಗ್ಯ ಮತ್ತು ಶಿಕ್ಷಣಕ್ಕೆ ಉತ್ತೇಜನ ನೀಡುವ ವೇಣೂರು ಯುವವಾಹಿನಿ ಘಟಕದ ಕಾರ್ಯವೈಖರಿಯೇ ವಿಶಿಷ್ಟ. ಯುವ ಮನಸ್ಸುಗಳಿಂದ ನಿಶ್ವಾರ್ಥವಾಗಿ ನಡೆಯುವ ಇಂತಹ ಸೇವೆಯಿಂದ ಸಂಘಟನೆ ಜನಸಾಮಾನ್ಯರಿಗೆ ಹತ್ತಿರವಾಗುತ್ತಿದೆ. ಇಂತಹ ಸಮಾಜಸೇವೆಯ ಪರಿಕಲ್ಪನೆ ಎಲ್ಲೆಡೆ ಫಸರಿಸಲಿ ಎಂದು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು ಹೇಳಿದರು.
ಯುವವಾಹಿನಿ ವೇಣೂರು ಘಟಕದ ವತಿಯಿಂದ ರವಿವಾರ ವೇಣೂರು ಲಯನ್ಸ್ ಕ್ಲಬ್ ಸಭಾಭವನದಲ್ಲಿ ಜರಗಿದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಆಸರೆ ಎಂಬ ಸೇವಾ ಯೋಜನೆ ಮೂಲಕ ವೇಣೂರು ಘಟಕ ಅವಿಭಜಿತ ಜಿಲ್ಲೆಗೆ ಮಾದರಿ ಆಗಿದೆ, ಇಂತಹ ಕಾರ್ಯ ನಿರಂತರ ನಡೆಯಲಿ ಎಂದರು.
ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷ ನವೀನ್ ಪಚ್ಚೇರಿ ಅಧ್ಯಕ್ಷತೆ ವಹಿಸಿ, ಸುಮಾರು 120 ಮಂದಿ ಸದಸ್ಯರಿಂದ ಪ್ರತೀ ತಿಂಗಳು ರೂ. ೧೦೦ನ್ನು ಸಂಗ್ರಹಿಸಿ ಓರ್ವ ಫಲಾನುಭವಿಗೆ ನೀಡಲಾಗುತ್ತಿದೆ. ಮುಂದಿನ ದಿನಗಳಿಂದ ಸದಸ್ಯರನ್ನು ಹೆಚ್ಚು ಮಾಡುವ ಚಿಂತನೆ ಇದೆ. ಆರೋಗ್ಯ, ಕಾನೂನು, ಪರಿಸರ ಸಂರಕ್ಷಣೆ, ಸ್ನೇಹ ಮಿಲನ ಮುಂತಾದ ಕಾರ್ಯಕ್ರಮಗಳ ಆಯೋಜನೆಗೆ ಚಿಂತನೆ ನಡೆಸುತ್ತಿದ್ದೇವೆ ಎಂದರು.
ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಪ್ರೇಮನಾಥ ಕೆ., ಮೂಡಬಿದಿರೆ ಯುವವಾಹಿನಿ ಘಟಕದ ಅಧ್ಯಕ್ಷ ಜಗದೀಶ್ಚಂದ್ರ ಡಿ.ಕೆ., ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ರಾಕೇಶ್ ಕುಮಾರ್ ಮೂಡುಕೋಡಿ, ನಾಮ ನಿರ್ದೇಶಿತ ಸದಸ್ಯ ಯೋಗೀಶ್ ಬಿಕ್ರೊಟ್ಟು, ವೇಣೂರು ಘಟಕದ ಕೋಶಾಧಿಕಾರಿ ಹರೀಶ್ ಪಿ.ಎಸ್. ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಬದುಕು ಅನ್ನುವುದು ಸ್ವಲ್ಪದರಲ್ಲೇ ಮುಗಿದುಹೋಗುತ್ತದೆ. ವಿದ್ಯಾರ್ಥಿಗಳು ಈಗಿನಿಂದಲೇ ಕನಸು ಕಾಣಬೇಕು. ಆ ಗುರಿಯನ್ನು ಮುಟ್ಟಲು ನಿರಂತರ ಶ್ರಮಿಸಬೇಕು. ಆಗ ನೀವು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಗುರುತಿಸಿಕೊಳ್ಳಲು ಸಾಧ್ಯ.
ಜಯಂತ ನಡುಬೈಲು, ಅಧ್ಯಕ್ಷ, ಯುವವಾಹಿನಿ ಕೇಂದ್ರ ಸಮಿತಿ

ಪ್ರತಿಭಾ ಪುರಸ್ಕಾರ-ಸಹಾಯನಿಧಿ ವಿತರಣೆ
ಕಳೆದ ಸಾಲಿನಲ್ಲಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಸುಜ್ಞಾನ್, ದೀಕ್ಷಾ, ಸುಶಾಂತ್ ಹಾಗೂ ಸುವಿಧ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಜಾತಿಬೇಧವಿಲ್ಲದೆ ಬಡ ಅರ್ಹ ಫಲಾನುಭವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು. ಘಟಕದ ಆಸರೆ ಸೇವಾ ಯೋಜನೆಯ ೧೧ನೇ ಕಂತನ್ನು ಅನಾರೋಗ್ಯದಿಂದ ಬಳಲುತ್ತಿರುವ ಕುಶಾನ್ ಅವರಿಗೆ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಘಟಕದಿಂದ ಕೇಂದ್ರ ಸಮಿತಿಗೆ ವಿದ್ಯಾರ್ಥಿವೇತನ ಸಹಾಯನಿಧಿಗಾಗಿ ರೂ. ೧೦ ಸಾವಿರ ಮೊತ್ತದ ಚೆಕ್ಕನ್ನು ಕೇಂದ್ರ ಸಮಿತಿಗೆ ಹಸ್ತಾಂತರಿಸಿದರು. ಘಟಕಕ್ಕೆ ಸಹಾಯಧನ ನೀಡಿದವರನ್ನು ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಘಟಕದ ಮಾಜಿ ಅಧ್ಯಕ್ಷ ನಿತೀಶ್ ಎಚ್. ಪ್ರಾಸ್ತಾವಿಸಿ, ಸ್ವಾಗತಿಸಿದರು. ಘಟಕದ ಉಪಾಧ್ಯಕ್ಷ ಅರುಣ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿ, ಕಾರ್ಯದರ್ಶಿ ಶಿವಪ್ರಕಾಶ್ ಅಂಬಾಶ್ರೀ ವಂದಿಸಿದರು.

 

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!