Yuvavahini

JUL 07, 2019 2.19 PM IST

ಯುವವಾಹಿನಿ (ರಿ) ಸುರತ್ಕಲ್ ಘಟಕದ ಆತಿಥ್ಯದಲ್ಲಿ

ಏರ್ ಬಿರ್ಸೆರ್ ನಳಪರಿವಾರೊಡು ಹಾಗೂ ಸೌಂದರ್ಯ ಸ್ಪರ್ಧೆ

ಸುರತ್ಕಲ್ : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ ಅತಿಥ್ಯದಲ್ಲಿ ಫಾದರ್ಸ್ ಡೇ ಯ ಪ್ರಯುಕ್ತ ಯುವವಾಹಿನಿ ಅಂತರ್ ಘಟಕ ಪುರುಷರಿಗಾಗಿ ” ಏರ್ ಬಿರ್ಸೆರ್ ನಳ ಪಾರಿವಾರೊಡು” ಅಡುಗೆ ಸ್ಪರ್ಧೆಯನ್ನು ಹಾಗೂ ವಿವಿಧ ಘಟಕಗಳ ಮಹಿಳೆಯರಿಗಾಗಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಸೀರೆ ಮತ್ತು ಕೇಶವಿನ್ಯಾಸ ಸೌಂದರ್ಯ ಸ್ಪರ್ಧೆಯನ್ನು ಸುರತ್ಕಲ್ ತಾರಾ ಟವರ್ಸ್ ಸಭಾಂಗಣದಲ್ಲಿ ದಿನಾಂಕ 07.07.2019 ರಂದು ಅಯೋಜಿಸಲಾಯಿತು.

ಈ ಕಾರ್ಯಕ್ರಮವನ್ನು ಪಡುಬಿದ್ರಿಯ ಹೋಟೆಲ್ ಉದ್ಯಮಿ ವೈ.ಸುಕುಮಾರ್ ಉದ್ಘಾಟಿಸಿದರು. ಇಂದಿನ ಆಧುನಿಕ ಯುಗದಲ್ಲಿ ಪುರುಷರು ಕೂಡಾ ಕೆಲವೊಂದು ರುಚಿ-ರುಚಿಯಾದ ಅಡುಗೆಯನ್ನು ಮಾಡುವುದರಲ್ಲಿ ಪರಿಣಿತರಿದ್ದಾರೆ. ಅವರಿಗೊಂದು ಅವಕಾಶ ಸಿಕ್ಕಂತಾಗಿದೆ. ಈ ವಿನೂತನ ಕಾರ್ಯಕ್ರಮದ ಮೂಲಕ ಎಂದು ಸಂಘಟಕರನ್ನು ಶ್ಲಾಘಿಸಿದರು.
ಪುರುಷರ ಅಡುಗೆ ಸ್ಪರ್ಧೆಯು ನಡೆಯಿತು. ಅದೇ ಸಂದರ್ಭದಲ್ಲಿ ಮಹಿಳೆಯರು ಭಾರತೀಯ ಸಂಪ್ರದಾಯಿಕ ಸೀರೆ ಉಟ್ಟು, ವಿಶೇಷ ಕೇಶ ವಿನ್ಯಾಸದೊಂದಿಗೆ ಸಭಿಕರನ್ನು ರಂಜಿಸಿದರು. ಘಟಕದ ಮಹಿಳೆಯರಿಂದ ಪ್ರಾತ್ಯಾಕ್ಷಿಕೆಯಾಗಿ ಸೌಂದರ್ಯ ಸ್ಪರ್ಧೆಯ ವಿವಿಧ ಭಂಗಿಗಳು ಪ್ರದರ್ಶಿಸಲ್ಪಟ್ಟವು. ಸಭಿಕರಿಂದ ಮೆಚ್ಚುಗೆಯನ್ನು ಪಡೆದರು.

ಸೌಂದರ್ಯ ಸ್ಪರ್ಧೆಯ ತೀರ್ಪುಗಾರರಾಗಿ ಅನಿತಾ, ಕವಿತಾ ಮತ್ತು ಸೌಮ್ಯ ಬ್ಯುಟಿಷಿಯಷನ್ಸ್ ಭಾಗವಹಿಸಿದರು. ಪುರುಷರ ಅಡುಗೆ ಸ್ಪರ್ಧೆಯ ತೀಪುಗಾರರಾಗಿ ವೀಣಾಶೆಟ್ಟಿ, ಸುಖಾಲಾಕ್ಷಿ ಸುವರ್ಣ ಮತ್ತು ಸುಪ್ರೀತಾ ಕೋಟ್ಯಾನ್ ಭಾಗವಹಿಸಿದರು.

ಸಮಾರೋಪ ಸಮಾರಂಭದಲ್ಲಿ ಮಹಾಬಲ ಪೊಜಾರಿ ಕಡಂಬೋಡಿ, ಶ್ರೀಚಂದ್ರಶೇಖರ್ ಮುಕ್ಕ , ಸಂಚಾಲಕರಾದ ಸತೀಶ್ ಕೋಟ್ಯಾನ್ , ಕಾರ್ಯದರ್ಶಿ ದೀಪಕ್ ರಾಜ್ ಯು ಹಾಗೂ ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷೆ ಗುಣವತಿ ರಮೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ಇವರ ಅನುಪಸ್ಥಿತಿಯಲ್ಲಿ ಕಲಾವತಿ ನಡುಬೈಲು ಇವನ ಸನ್ಮಾನಿಸಲಾಯಿತು.


ಸೌಂದರ್ಯ ಸ್ಪರ್ಧೆಯ ವಿಜೇತರು.
ಪ್ರಥಮಾ – ಶ್ರೇಯಾ, ಬಜಪೆ ಘಟಕ,
ದ್ವಿತೀಯ – ಪ್ರತಿಭಾ ಮಂಗಳೂರು ಮಹಿಳಾ ಘಟಕ,
ತೃತೀಯ – ಶ್ರಾವ್ಯ ಬಜಪೆ ಘಟಕ,
ಪ್ರೋತ್ಸಾಕರ – ಪ್ರತೀಕ್ಷಾ – ಕಂಕನಾಡಿ ಘಟಕ

ಏರ್  ಬಿರ್ಸೆರ್ ನಳ ಪರಿವಾರಕೊಡು – ವಿಜೇತರು
ಪ್ರಥಮ – ಮಂಗಳೂರು ಯುವವಾಹಿನಿ ಘಟಕ,
ದ್ವಿತೀಯ – ಅಡ್ವೆ ಯುವವಾಹಿನಿ ಘಟಕ
ತೃತೀಯ – ಕೆಂಜಾರು ಕರಂಬಾರು ಘಟಕ.


ಮಂಗಳೂರು ಘಟಕ, ಮಂಗಳೂರು ಮಹಿಳಾ ಘಟಕ, ಬಂಟ್ವಾಳ ಘಟಕ, ಪಡುಬಿದ್ರೆ ಘಟಕ, ಬಜಪೆ ಘಟಕ, ಕಂಕನಾಡಿ ಘಟಕ, ಕೂಳೂರು ಘಟಕ, ಕೊಲ್ಯ ಘಟಕ, ಪಣಂಬೂರು ಕುಳಾಯಿ ಘಟಕ, ಅಡ್ವೆ ಘಟಕ, ಕೆಂಜಾರು ಕರಂಬಾರು ಘಟಕ, ಎಕ್ಕಾರು ಪೆರ್ಮುದೆ ಘಟಕ, ಪುತ್ತೂರು ಘಟಕಗಳು ಸ್ಪರ್ಧೆಯಲ್ಲಿ ಭಾಗವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಅಪ್ಪಂದಿರಿಗಾಗಿ ಬಜಪೆ ಘಟಕದ ಗ್ರೀಷ್ಮಾ ಹಾಡಿರುವ ಅರ್ಥಪೂರ್ಣ ಹಾಡು ಸರ್ವರ ಮನಸೂರೆಗೊಂಡಿತು.
.ವಿನೂತನ ಶೈಲಿಯ ಈ ಕಾರ್ಯಕ್ರಮವು ಎಲ್ಲರಿಂದ ಮೆಚ್ಚುಗೆಗಳಿಸಿತು. ಕೇಂದ್ರ ಸಮಿತಿಯ ಹೆಚ್ಚಿನ ಪೂರ್ವಾಧ್ಯಕ್ಷರುಗಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.ಗುಣವತಿ ರಮೇಶ್ ಸ್ವಾಗತಿಸಿದರು. ಬಾಸ್ಕರ್ ಸಾಲ್ಯಾನ್ ನಿರೂಪಿಸಿದರು. ಕಾರ್ಯಕ್ರಮದ ಸಂಚಾಲಕರಾದ  ಸತೀಶ್ ಕೋಟ್ಯಾನ್ ವಂದನಾರ್ಪಣೆ ಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!