Yuvavahini

JUL 14, 2019 11.58 AM IST

ಯುವವಾಹಿನಿ (ರಿ) ಕೊಲ್ಯ ಘಟಕ ಇದರ ವತಿಯಿಂದ ಚಿಕ್ಕಮಗಳೂರು ಪ್ರವಾಸ

ಕೊಲ್ಯ ; ಯುವವಾಹಿನಿ (ರಿ) ಕೊಲ್ಯ ಘಟಕ ಇದರ ವತಿಯಿಂದ ಚಿಕ್ಕಮಗಳೂರು ಪ್ರವಾಸ ಕೈಗೊಳ್ಳಲಾಯಿತು ಒಟ್ಟು 30 ಜನರ ತಂಡ ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು ಈ ಪ್ರವಾಸದ ಸಂಪೂರ್ಣ ಜವಾಬ್ದಾರಿಯನ್ನು ನಿಕಟ ಪೂರ್ವ ಅಧ್ಯಕ್ಷರಾದ ಕುಸುಮಾಕರ್ ಕುಂಪಲ ಅವರಿಗೆ ವಹಿಸಲಾಯಿತು ಶನಿವಾರ ಬೆಳಗ್ಗೆ 5.00 ಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ದಲ್ಲಿ ಪೂಜೆಯನ್ನು ಸಲ್ಲಿಸಿ ಹೊರಡಲಾಯಿತು ಚಾರ್ಮಾಡಿ ಘಾಟಿಯಲ್ಲಿ ಬೆಳಗಿನ ಉಪಹಾರ ಮಾಡಿದೆವು ಅಲ್ಲಿಂದ ಹೊರಟು ನಾವು ಸರಿಯಾಗಿ 10.30 ಕ್ಕೆ ದೇವಿ ಗಿರಿ ರೆಸಾರ್ಟ್ ತಲುಪಿದೆವು ರೆಸಾರ್ಟ್ ನಲ್ಲಿ ಸ್ವಲ್ಪ ಪ್ರೆಶ್ ಆಗಿ ಮೂರು ಜೀಪುಗಳಲ್ಲಿ ಮೂರು ತಂಡವಾಗಿ ಪ್ರಯಾಣಿಸಿತ್ತು ಮೊದಲಿಗೆ ಮುಳ್ಳಯ್ಯನಗಿರಿ ಹೊರಟೆವು ಅಲ್ಲಿ ಪ್ರಕೃತಿಯ ಸೌಂದರ್ಯವನ್ನು ವೀಕ್ಷಿಸುತ್ತಾ ಮಧ್ಯಾಹ್ನದ ಊಟವನ್ನು ಅಲ್ಲಿಯೇ ಮುಗಿಸಿ ನಂತರ ಅಲ್ಲಿಂದ ಹೊರಟು ದಬ ದಬೆ ಫಾಲ್ಸ್ ಅಲ್ಲಿಗೆ ಬಂದೆವು ಅಲ್ಲಿ ಕೂಡ ನಮ್ಮ ಸದಸ್ಯರು ತುಂಬಾ ಖುಷಿಯಾಗಿ ಪೋಟೊಗಳನ್ನು ತೆಗೆಯುತ್ತಾರೆ ಮತ್ತು ಅಲ್ಲಿಂದ ನಾವು ಆಟ ಆಡುತ್ತಾ ಮುಂದುವರಿದೆವು ಹಾಗೆ ಮುಂದಿನ ನಮ್ಮ ಪ್ರಯಾಣ ‘Z’ point ನಲ್ಲಿ ನಮ್ಮ ಸದಸ್ಯರು ತುಂಬಾ ಎತ್ತರವಾದ ಪ್ರದೇಶವಾದ್ದರಿಂದ ತುಂಬಾ ವೇಗವಾಗಿ ಗಾಳಿ ಬೀಸುತ್ತಿತು ನಮ್ಮ ಸದಸ್ಯರು ತುಂಬಾ ಖುಷಿಯಾಗಿ ಕುಣಿದು ಕುಪ್ಪಳಿಸಿದರು ತದನಂತರ ನಮ್ಮ ಸದಸ್ಯರು ಬಾಬಾಬುಡನ್ಗಿರಿಗೆ ಬಂದು ದತ್ತ ಪೀಠದಲ್ಲಿ ಪಾದುಕೆಯ ದರ್ಶನ ಪಡೆದರು ತದನಂತರ ನಾವು ರೆಸಾರ್ಟ್ ಗೆ ಪ್ರಯಾಣ ಬೆಳೆಸಿದೆವು ಅಲ್ಲಿ ಸಂಜೆಯ ಚಹಾ ಕಾಫಿ ಮುಗಿಸಿ ಫ್ರೆಶ್ ಆಗಿ ಸರಿಯಾಗಿ 8.30 ಕ್ಕೆ ಕೆಳಗೆ ಡೈನಿಂಗ್ ಹಾಲ್ ಹತ್ತಿರ ಬಂದೆವು ಅಲ್ಲಿ ನಮ್ಮ ಘಟಕದ ಸ್ಥಾಪಕ ಅಧ್ಯಕ್ಷರಾದ ಸುರೇಶ್. ಬಿ ಮತ್ತು ಸುಧಾ ಸುರೇಶ್ ಅವರ ಮದುವೆಯ ವಾರ್ಷಿಕೋತ್ಸವ ಆಚರಣೆಗೆ ತಯಾರಿಯಾಗಿದ್ದು ಎಲ್ಲ ಸದಸ್ಯರು ಬಂದು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಮತ್ತು ದಂಪತಿಗಳು ಕೇಕ್ ಕಟ್ ಮಾಡುವ ಮೂಲಕ ತಮ್ಮ ಮದುವೆಯ ವಾರ್ಷಿಕೋತ್ಸವವನ್ನು ಆಚರಿಸಿದರು ಸದಸ್ಯರು ಎಲ್ಲರೂ ದಂಪತಿಗಳನ್ನು ಅಭಿನಂದಿಸಿದರು ತದ ನಂತರ ಎಲ್ಲರ ಅಚ್ಚುಮೆಚ್ಚಿನ ಪಯರ್ ಕ್ಯಾಂಪ್ ಆಯೋಜಿಸಲಾಗಿತ್ತು ಇದರಲ್ಲಿ ಸದಸ್ಯರೆಲ್ಲರೂ ಕುಣಿದು ಕುಪ್ಪಳಿಸಿದರು ನಂತರ ರಾತ್ರಿಯ ಊಟ ಮುಗಿಸಿ ನಿದ್ದೆಗೆ ಜಾರಿದ್ದರು
ಮರುದಿನ ಬೆಳಿಗ್ಗೆ 5.00 ಗಂಟೆಗೆ ಸದಸ್ಯರು ಎದ್ದು ಯೋಗ ವಾಕಿಂಗ್ ಮೂಲಕ ತಮ್ಮ ದಿನಚರಿಯನ್ನು ಚಾಲನೆ ಮಾಡಿದರು ನಂತರ ಬೆಳಗಿನ ಉಪಹಾರ ಮುಗಿಸಿ ಯುವ ವಾಹಿನಿ (ರಿ)ಕೊಲ್ಯ ಘಟಕ ಇದರ ವತಿಯಿಂದ ರೆಸಾರ್ಟಿನ ಮಾಲಕರಿಗೆ ನೆನಪಿನ ಕಾಣಿಕೆ ನೀಡಲಾಯಿತು ಮತ್ತು ರೆಸಾರ್ಟ್ ನಿಂದ ಸರಿಯಾಗಿ ಬೆಳಿಗ್ಗೆ 9.30 ಕ್ಕೆ ಹೊರಟೆವು ಮತ್ತು ಸರಿಯಾಗಿ ಮೂಡಿಗೆರೆ ಚರ್ಚ್ ಹಾಲ್‌ ಗೆ ತಲುಪಿದೆವು ಇಲ್ಲಿ ಯುವವಾಹಿನಿ (ರಿ)ಮೂಡಿಗೆರೆ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡೆವು ತದನಂತರ ನಾವು ಊಟ ಮುಗಿಸಿ ದೇವರ ಮನೆಗೆ ಪ್ರಯಾಣ ಬೆಳೆಸಿದೆವು ಅಲ್ಲಿಗೆ ತಲುಪಿ ಅಲ್ಲಿಯ ಪ್ರಕೃತಿಯ ಸೌಂದರ್ಯವನ್ನು ವೀಕ್ಷಿಸುತ್ತಾ ನಾವು ನಮ್ಮ ತವರಿನ ಪ್ರಯಣ ಬೆಳೆಸಿದೆವು ಸರಿಯಾಗಿ 8.30 ಕ್ಕೆ ಸರಿಯಾಗಿ ನಮ್ಮ ಬಸ್ ಬಂದು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರುಮಂದಿರಕ್ಕೆ ತಲುಪಿತು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!