Yuvavahini

JUL 14, 2019 2.27 PM IST

ಯುವವಾಹಿನಿಯ 35ನೇ ನೂತನ ಘಟಕ

ಯುವವಾಹಿನಿ(ರಿ) ಮೂಡಿಗೆರೆ ಘಟಕ ಉದ್ಘಾಟನೆ

ಮೂಡಿಗೆರೆ : ಯುವವಾಹಿನಿಯ 35ನೇ ನೂತನ ಘಟಕ ಯುವವಾಹಿನಿ(ರಿ) ಮೂಡಿಗೆರೆ ಘಟಕ ಉದ್ಘಾಟನೆಸಮಾರಂಭವು ದಿನಾಂಕ 14.07.2019 ರಂದು‌‌ ಮೂಡಿಗೆರೆ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಯುವವಾಹಿನಿ ಸಂಸ್ಥೆಯು ಯುವಜನರ ಪ್ರೇರಕ ಶಕ್ತಿಯಾಗಿದೆ, ಮೂಡಿಗೆರೆಯಲ್ಲಿ ಯುವವಾಹಿನಿ ಘಟಕ ಸ್ಥಾಪನೆಯಾಗಿರುವುದು ಅತ್ಯಂತ ಸಂತಸ ತಂದಿದೆ ಎಂದು
ಮೂಡಿಗೆರೆ ಬ್ರಹ್ಮಶ್ರೀ‌ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ದೇಶದಲ್ಲಿ ಯುವಕರೇ ದೇಶದ ಜೀವನಾಡಿಯಾಗಿದ್ದು, ಯುವ ಸಮುದಾಯವನ್ನು ಸಮಾಜಮುಖಿಯನ್ನಾಗಿಸುವುದು ಬಹುದೊಡ್ಡ ಸವಾಲಾಗಿದೆ. ಯುವಜನಾಂಗಕ್ಕೆ ಉದ್ಯೋಗ, ಸಹಕಾರ ತತ್ವ ಹಾಗೂ ಸಹಬಾಳ್ವೆ ಯನ್ನು ಕಲಿಸಿ ಸರಿಯಾದ ದಾರಿಯಲ್ಲಿ ನಡೆಯುವಂತೆ ಮಾಡುವಲ್ಲಿ ಯುವವಾಹಿನಿ ಸಂಸ್ಥೆಯ ಪಾತ್ರ ಅಮೂಲ್ಯವಾದುದು ಎಂದರು.

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ಯೋಗೀಶ್ ಪೂಜಾರಿ ನೇತ್ರತ್ವದ ತಂಡಕ್ಕೆ ಪ್ರತಿಜ್ಞಾವಿಧಿ ಬೋಧಿಸಿ ಶುಭ ಹಾರೈಕೆ ಮಾಡಿದರು.
ಯುವವಾಹಿನಿ‌ ಮೂಡಿಗೆರೆಯ ನೂತನ ಅಧ್ಯಕ್ಷರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಯೋಗೀಶ್ ಪೂಜಾರಿಯವರು ತನಗೆ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಮೂಡಿಗೆರೆ ಘಟಕವನ್ನು‌ ಯಶಸ್ವಿಯಾಗಿ ಮುನ್ನಡೆಸುವುದಾಗಿ ತಿಳಿಸಿದರು.
ಮೂಡಿಗೆರೆ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ ಗೌರವಾಧ್ಯಕ್ಷರಾದ ಚಂದ್ರು ಸಾಲ್ಯಾನ್, ಚಿಕ್ಕಮಗಳೂರು ‌ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಎಚ್.ಎಮ್.ಸತೀಶ್ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಮೂಡಿಗೆರೆ ಘಟಕದ ಸಲಹೆಗಾರರಾದ ಸಾಧು ಪೂಜಾರಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು.


ಯುವವಾಹಿನಿ ಕೇಂದ್ರ ಸಮಿತಿಯ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ 16 ಘಟಕದ ಅಧ್ಯಕ್ಷರುಗಳನ್ನು ಹಾಗೂ ಯುವವಾಹಿನಿಯ ವಿವಿಧ ಘಟಕಗಳ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳನ್ನು ಗೌರವಿಸಲಾಯಿತು.
ನರೇಶ್ ಕುಮಾರ್ ಸಸಿಹಿತ್ಲು ಪ್ರಸ್ತಾವನೆ ಮಾಡಿದರು, ಕೇಂದ್ರ ಸಮಿತಿಯ ಸಂಘಟನಾ‌ ಕಾರ್ಯದರ್ಶಿ ನಾಗೇಶ್ ಬಲ್ನಾಡ್ ನೂತನ ಪದಾಧಿಕಾರಿಗಳನ್ನು ಸಭೆಗೆ ಪರಿಚಯಿಸಿದರು. ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುನೀಲ್.ಕೆ.ಅಂಚನ್ ಸ್ವಾಗತಿಸಿದರು. ಮೂಡಿಗೆರೆ ಘಟಕದ ನೂತನ ಕಾರ್ಯದರ್ಶಿ ಪ್ರಥ್ವೀ ಸಾಗರ್ ಪೂಜಾರಿ ಧನ್ಯವಾದ ನೀಡಿದರು, ಕೇಂದ್ರ ಸಮಿತಿಯ ಸಮಾವೇಶ ನಿರ್ದೇಶಕರಾದ ಶಶಿಧರ ಕಿನ್ನಿಮಜಲು ಕಾರ್ಯಕ್ರಮ ನಿರ್ವಹಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!