Yuvavahini

JUL 28, 2019 4.58 AM IST

ಯುವವಾಹಿನಿ ಶಕ್ತಿನಗರ ಘಟಕದ ವತಿಯಿಂದ ಆಟಿಡೊಂಜಿ ದಿನ

ಶಕ್ತಿನಗರ : ಯುವವಾಹಿನಿ ಶಕ್ತಿನಗರ ಘಟಕದ ವತಿಯಿಂದ ದಿನಾಂಕ 28-7-2019 ರಂದು ಕುವೆಂಪು ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಾಲ್ಯಪದವು ಇದರ ಸಭಾಂಗಣದಲ್ಲಿ ಆಟಿಡೊಂಜಿ ದಿನ ಹಳೆಯ ನೆನಪುಗಳ ದಿನಗಳನ್ನು ಸರಮಾಲೆಯನ್ನು ಹಾಗೂ ಹಳೆ ಬೇರು ಹೊಸ ಚಿಗುರು ಎಂಬ ಆಟಿದ ಸುಂದರವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು
ಸಭಾಧ್ಯಕ್ಷತೆಯನ್ನು ಘಟಕದ ಅಧ್ಯಕ್ಷೆಯಾದ ಭಾರತಿ ಜಿ. ಅಮಿನ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕಲಾವತಿ ಜಯಂತ್ ನಡುಬೈಲು ವಹಿಸಿದ್ದರು. ಉದ್ಘಾಟನೆಯು ವಿನೂತನವಾಗಿ ನಾಟಿ ಮಾಡುವ ಮೂಲಕ ನಡೆಯಿತು.ಮುಖ್ಯ ಅತಿಥಿಗಳಾಗಿ ಡಾ. ಗಣೇಶ್ ಸಂಕಮಾರ್ ಅವರು “ಆಟಿದ ಮದಿಪು” ಎಂಬ ಶೀರ್ಷಿಕೆಯಲ್ಲಿ ಬಹಳ ಸೊಗಸಾಗಿ ವಿವರಿಸಿದರು. ವೇದಿಕೆಯಲ್ಲಿ ಕಿಶೋರ್ ಜೆ. ಬಿಜೈ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಾಧು ಪೂಜಾರಿ, ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶ್ರೀನಿವಾಸ್ ಪೂಜಾರಿ ಮತ್ತು ಕಾರ್ಯದರ್ಶಿಯಾದ ಜಯರಾಮ ಪೂಜಾರಿ ಬಾಳಿಲ ಇವರುಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಹಿರಿಯರಾದ ಶ್ರೀಮತಿ ಕಮಲ ಬೈತುರ್ಲಿ, ಶ್ರೀ ಸದಾಶಿವ ಪೂಜಾರಿ, ಶ್ರೀಮತಿ ವೇದಾವತಿ ಹಾಗೂ ಶ್ರೀಮತಿ ಇಂದಿರಾ ಅವರನ್ನು ಸನ್ಮಾನಿಸಲಾಯಿತು.
ಯುವವಾಹಿನಿ ಘಟಕದ ಶಾಲಾ ಮಕ್ಕಳಿಗೆ ಪುಸ್ತಕ ವಿತರಿಸಲಾಯಿತು. ಹಾಗೂ 25 ಬಗೆಯ ತಿಂಡಿ ತಿನಿಸುಗಳನ್ನು ಘಟಕದ ಸದಸ್ಯರೇ ಮಾಡಿ ತರಲಾಗಿದೆ. ಊಟೋಪಚಾರ ಗಳನ್ನು ಮನೆಯಲ್ಲಿ ಮಾಡಿ ತಂದಂತಹ ಎಲ್ಲರನ್ನು ಹೂ ಕೊಟ್ಟು ಅಭಿನಂದಿಸಲಾಗಿದೆ.
ಶ್ರೀನಿವಾಸ ಪೂಜಾರಿಯವರ ಮುಂದಾಳತ್ವದಲ್ಲಿ ನಾಲ್ಯಪದವು ಶಾಲೆಯ ಬಚ್ಚಲು ಮನೆಗೆ ಮೇಲ್ಛಾವಣಿ ಮತ್ತು ಹೊರಗೆ ಇಂಟರ್ಲಾಕ್ ನ್ನು ಸುಮಾರು 2.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿ ಶ್ರೀಮತಿ ಕಲಾವತಿ ಗಣೇಶ್ ಸಂಕಮಾರ್ ಅವರೊಂದಿಗೆ ಉದ್ಘಾಟಿಸಿ ಶಾಲೆಗೆ ಅರ್ಪಿಸಲಾಯಿತು.ಕೊನೆಗೆ ವಂದನಾರ್ಪಣೆಯನ್ನು ಕಾರ್ಯದರ್ಶಿಯಾದ ಜಯರಾಮ ಪೂಜಾರಿ ಮಾಡಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!