Yuvavahini

AUG 04, 2019 6.28 AM IST

ಯುವ ಸಮುದಾಯದಲ್ಲಿ ಬೌದ್ಧಿಕ ಚಿಂತನೆ ಮೂಡಲಿ: ಡಾ| ಯೋಗೀಶ್ ಕೈರೋಡಿ

ವೇಣೂರು: ಯುವ ಸಮುದಾಯಕ್ಕೆ ಬೌದ್ಧಿಕ ಚಿಂತನೆಯನ್ನು ಮೂಡಿಸುವ ಮತ್ತು ಮಾನಸಿಕವಾಗಿ ಮನಸ್ಸನ್ನು ಕಟ್ಟುವ ಕೆಲಸ ಆಗಬೇಕು ಎಂದು ಮೂಡಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಡಾ| ಯೋಗೀಶ್ ಕೈರೋಡಿ ಹೇಳಿದರು.
ಬೆಳ್ತಂಗಡಿ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ವೇಣೂರು ಯುವವಾಹಿನಿ ಘಟಕದ ಆಶ್ರಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕೊಕ್ರಾಡಿ ಇದರ ಆತಿಥ್ಯದಲ್ಲಿ ಆ. ೪ರಂದು ಕೊಕ್ರಾಡಿ ಶ್ರೀ ಗು.ಸ್ವಾ.ಸೇ. ಸಂಘದ ಸಭಾಂಗಣದಲ್ಲಿ ಜರಗಿದ ಸಂಸ್ಕೃತಿ ಸಂಪದ ಸರಣಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿ, ಯುವಜನತೆ ಸತ್ಪ್ರಜೆಗಳಾಗಿ ಬೆಳೆಯಲು ಇಂತಹ ಸರಣಿ ಕಾರ್ಯಕ್ರಮಗಳು ಸಹಕಾರಿ ಎಂದರು.
ಬೆಳ್ತಂಗಡಿ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಲೆ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕ್ಷಣಿಕ ಸುಖಕ್ಕಾಗಿ ವಿದ್ಯಾರ್ಥಿಗಳು ಮಾದಕ ವ್ಯಸನಗಳಾಗಬೇಡಿ. ವಿದ್ಯಾರ್ಜನೆ ಪಡೆಯುವ ಸಮಯಲ್ಲಿ ಸುಖದ ಜೀವನ ತ್ಯಜಿಸಿ ಕಷ್ಟಪಟ್ಟು ಶಿಕ್ಷಣ ಪಡೆದಾಗ ಮುಂದಿನ ದಿನಗಳಲ್ಲಿ ಭವಿಷ್ಯ ಉತ್ತಮವಾಗಿ ರೂಪುಗೊಳ್ಳುತ್ತದೆ ಎಂದರು.
ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷ ನವೀನ್ ಪೂಜಾರಿ ಪಚ್ಚೇರಿ ಅಧ್ಯಕ್ಷತೆ ವಹಿಸಿದ್ದರು. ಸಹಕಾರಿ ಎಂದರು. ಬೆಳ್ತಂಗಡಿ ಬ್ರಹ್ಮಶ್ರೀ ಗು.ಸ್ವಾ.ಸೇ. ಸಂಘದ ಪ್ರ. ಕಾರ್ಯದರ್ಶಿ ರಾಕೇಶ್ ಕುಮಾರ್ ಮೂಡುಕೋಡಿ, ಕೊಕ್ರಾಡಿ ಶ್ರೀ ಗು.ಸ್ವಾ.ಸೇ. ಸಂಘದ ಅಧ್ಯಕ್ಷ ಮಂಜಪ್ಪ ಪೂಜಾರಿ, ವೇಣೂರು ಯುವವಾಹಿನಿ ಘಟಕದ ಸಲಹೆಗಾರ ಶ್ರೀಧರ ಪೂಜಾರಿ ಭೂತಡ್ಕ, ಬೆಳ್ತಂಗಡಿ ಪ್ರಾ.ಸ.ಕೃ. ಮತ್ತು ಗ್ರಾ.ಅ. ಬ್ಯಾಂಕ್ ನಿರ್ದೇಶಕ ಶುಭಕರ ಪೂಜಾರಿ ಸಾವ್ಯ, ಯುವವಾಹಿನಿ ಕೇಂದ್ರ ಸಮಿತಿಯ ನಾಮ ನಿರ್ದೇಶಿತ ಸದಸ್ಯ ಯೋಗೀಶ್ ಪೂಜಾರಿ ಬಿಕ್ರೊಟ್ಟು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಶಿಕ್ಷಕ ಶಶಿಧರ ಕೆ. ಪ್ರಾಸ್ತಾವಿಸಿ, ಅರುಣ್ ಕೋಟ್ಯಾನ್ ನಿರ್ವಹಿಸಿದರು. ಸತೀಶ್ ಪಿ.ಎನ್. ಸ್ವಾಗತಿಸಿ, ರಕ್ಷಿತ್ ಅಲೆಕ್ಕಿ ವಂದಿಸಿದರು.

ಸನ್ಮಾನ
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ| ಯೋಗೀಶ್ ಕೈರೋಡಿ ಅವರನ್ನು ಸಮ್ಮಾನಿಸಲಾಯಿತು. ಉಮೇಶ್ಚಂದ್ರ ಸಮ್ಮಾನಪತ್ರ ವಾಚಿಸಿದರು. ವಿದ್ಯಾರ್ಥಿವೇತನದ ಮಾಹಿತಿ ಮತ್ತು ಅರ್ಜಿ ಫಾರಂ ವಿತರಣೆ ಮಾಡಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಹಲವು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಸಂತ್ವಾನ ನಿಧಿ
ಬೆಳ್ತಂಗಡಿ ಬ್ರಹ್ಮಶ್ರೀ ಗು.ಸ್ವಾ.ಸೇ. ಸಂಘದ ವತಿಯಿಂದ ಸಾಂತ್ವಾನ ನಿಧಿ ವಿತರಿಸಲಾಯಿತು. ಇತ್ತೀಚೆಗೆ ನಿಧನ ಹೊಂದಿದ ಕೊಕ್ರಾಡಿಯ ನಿವೃತ್ತ ಮುಖ್ಯ ಶಿಕ್ಷಕ ದಿ| ಡೀಕಯ್ಯ ಪೂಜಾರಿಯವರಿಗೆ ಮೌನಪ್ರಾರ್ಥನೆ ಮೂಲಕ ಚಿರಶಾಂತಿ ಕೋರಲಾಯಿತು.

ತುಳುನಾಡಿನ ಸತ್ಯ ಮತ್ತು ಧರ್ಮದ ಬೋಧನೆಯನ್ನು ಪೋಷಕರು ಮಕ್ಕಳಿಗೆ ಬೋಧಿಸಬೇಕು. ನಿರಂತರ ಉತ್ತಮ ವಿಚಾರಗಳನ್ನೇ ಆಲಿಸಿ ಸಮಾಜದಲ್ಲಿ ಸತ್‌ಪ್ರಜೆಗಳಾಗಿ ಬಾಳೋಣ.
ಡಾ| ಯೋಗೀಶ್ ಕೈರೋಡಿ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!