Yuvavahini

MAR 12, 2017 12.28 PM IST

ಯುವವಾಹಿನಿ (ರಿ) ಮಂಗಳೂರು ಘಟಕ

ಮಂಗಳೂರು ಯುವವಾಹಿನಿ : ಪದಗ್ರಹಣ 2017-18

ಕಣ್ಣು ಸರಿಯಾಗಿದ್ದಲ್ಲಿ ಜಗತ್ತನ್ನು ಪ್ರೀತಿಸಬಹುದು, ಆದರೆ ನಾಲಿಗೆ ಸರಿಯಾಗಿದ್ದಲ್ಲಿ ಜಗತ್ತು ನಮ್ಮನ್ನು ಪ್ರೀತಿಸುತ್ತದೆ. ದುಶ್ಚಟಗಳನ್ನು ತೊರೆದು ಜ್ಞಾನದ ಮಾರ್ಗದಲ್ಲಿ ನಡೆದಾಗ ಮನೆ ಮನೆಯಲ್ಲೂ ದೇವಸ್ಥಾನದ ನಿರ್ಮಾಣ ಸಾಧ್ಯ. ಅವಮಾನಗಳ ಹಿಂದಿರುವ ನೋವಿನಿಂದ ನಮ್ಮ ಹಿರಿಯರು ಸಂಘಟನೆಗಳ ರಚನೆ ಮಾಡಿದರು. ಮನಸ್ಸು ಮನಸ್ಸುಗಳನ್ನು ಬೆಸೆಯುವ ಆದರ್ಶ, ಸಂವಿಧಾನ ಬದ್ದ ಸಂಘಟನೆ ಯುವವಾಹಿನಿ ಎಂದು ಮಂಗಳೂರು ಸಂತ ಎಲೋಶಿಯಸ್ ಕಾಲೇಜ್ ಉಪನ್ಯಾಸಕ ಡಾ. ಗಣೇಶ್ ಅಮೀನ್ ಸಂಕಮಾರ್ ತಿಳಿಸಿದರು.

ಅವರು ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ ವಠಾರದಲ್ಲಿ ಜರುಗಿದ ಯುವವಾಹಿನಿ(ರಿ) ಮಂಗಳೂರು ಘಟಕದ 2017-18ನೇ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಉದ್ಯಮಿಗಳು, ಸಮಾಜ ಸೇವಕರು, ಕಾಪು ಬಿಲ್ಲವರ ಸಹಾಯಕ ಸಂಘದ ಗೌರವ ಅದ್ಯಕ್ಷರು ಪ್ರಭಾಕರ್ ಎಸ್ ಪೂಜಾರಿ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟನೆ ಮಾಡಿದರು.

ಕಾರ್ಯದರ್ಶಿ ನವೀನ್ ಚಂದ್ತ. 2016-17ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು.

ಯುವವಾಹಿನಿಯ ಶಿಸ್ತು ಬದ್ದ ಕಾರ್ಯಕ್ರಮಗಳು ಹೊಸ ಹೊಸ ಚಿಂತನೆಗಳು ಸಮಾಜದ ಪರಿವರ್ತನೆಗೆ ನಾಂದಿಯಾಗಿದೆ. ವಿಶ್ವ ಬಿಲ್ಲವರು ಒಂದೇ ಸೂರಿನಡಿ ಸೇರಿ ಬೃಹತ್ ಸಮಾವೇಶ ಸಡೆಸುವುದಕ್ಕೆ ಸೂಕ್ತ ಕಾಲ ಎಂದು ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಮ್ಮ ಕುಡ್ಲ ದೃಶ್ಯ ಮಾಧ್ಯಮದ ನಿರ್ದೇಶಕ ಲೀಲಾಕ್ಷ ಬಿ. ಕರ್ಕೆರಾ ತಿಳಿಸಿದರು.

ವಿಶೇಷ ಸಾಧಕರಾದ ಹಾಗೂ ಮಂಗಳೂರು ಯುವವಾಹಿನಿ ಸದಸ್ಯರುಗಳಾದ ಸಮಾಜ ಸೇವಕ, ಸಂಘಟಕ ದೇವೇಂದ್ರ ಕೋಟ್ಯಾನ್, ಉದ್ಯಮಿ, ಸಂಘಟಕ ಉಮಾನಾಥ, ನಿಸ್ವಾರ್ಥ ಸೇವಕ ಶ್ರೀಕಾಂತ್ ಇವರುಗಳನ್ನು ಗಣ್ಯ ಅತಿಥಿಗಳು ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಸನ್ಮಾನಕ್ಕೆ ಉತ್ತರಿಸಿದ ಉಮಾನಾಥರವರು ಯುವವಾಹಿನಿ ಸದಸ್ಯನಾಗಿರುವುದಕ್ಕೆ ಹೆಮ್ಮೆ ಇದೆ, ಇದು ನನ್ನ ಮನೆಯ ಸನ್ಮಾನ ಮತ್ತು ಹೃದಯಕ್ಕೆ ಹತ್ತಿರವಾದ ಸನ್ಮಾನ ಎಂದು ತಿಳಿಸಿದರು.

ಚುನಾವಣಾಧಿಕಾರಿ ಹರೀಶ್ ಕೆ. ಪೂಜಾರಿ 2017-18 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಆಯ್ಕೆ ಪ್ರಕಟಿಸಿದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿದರು ಮತ್ತು ಘಟಕ ಘಟಕಗಳ ಮಧ್ಯೆ ಸಂಬಂಧ ಬೆಸೆಯುವ ಕಾರ್ಯ ಮಂಗಳೂರು ಯುವವಾಹಿನಿ ಮಾಡುತ್ತಿರುವುದು ಸಂತಸದ ವಿಚಾರ ಎಂದು ತಿಳಿಸಿದರು.

ರವೀಶ್ ಕುಮಾರ್ ನೇತೃತ್ವದ 18 ಸದಸ್ಯರ ನೂತನ ತಂಡ ಮಂಗಳೂರು ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸುವ ಬಗ್ಗೆ ಪ್ರಮಾಣ ವಚನ ಸ್ವೀಕರಿಸಿತು.

ಪ್ರಮಾಣಿಕ ಪ್ರೀತಿ ಯುವವಾಹಿನಿಯಲ್ಲಿ ತನಗೆ ದೊರೆತಿದೆ. ಸೇವಾ ಕೈಂಕರ್ಯದ ಹಗ್ಗವನ್ನು ತನಗೆ ನೀಡಿದ್ದಾರೆ. ಸರ್ವರ ಸಹಕಾರದಿಂದ ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸುವ ವಿಶ್ವಾಸ ತನಗಿದೆ ಎಂದು ನೂತನ ಅದ್ಯಕ್ಷ ರವೀಶ್ ಕುಮಾರ್ ಅಭಿಪ್ರಾಯಪಟ್ಟರು.

ಸಭೆ ಅಧ್ಯಕ್ಷತೆ ವಹಿಸಿದ್ದ ನಿರ್ಗಮನ ಅದ್ಯಕ್ಷ ಸುನೀಲ್ ಕೆ ಅಂಚನ್ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ತಿಳಿಸಿದರು. ನಿರ್ಗಮನ ಅದ್ಯಕ್ಷ ಸುನೀಲ್ ಕೆ ಅಂಚನ್ ನೂತನ ಅದ್ಯಕ್ಷ ರವೀಶ್ ಕುಮಾರ್ ಗೆ ಸಾಂಕೇತಿಕವಾಗಿ ಅಧಿಕಾರ ಹಸ್ತಾಂತರ ಮಾಡಿದರು. ಯುವವಾಹಿನಿಯ ವಿವಿಧ ಘಟಕಗಳ ಪದಾದಿಕಾರಿಗಳು ಶುಭ ಹಾರೈಕೆ ಮಾಡಿದರು. ಸುನೀಲ್ ಕೆ. ಅಂಚನ್ ಸ್ವಾಗತಿಸಿದರು ಮಂಗಳೂರು ಘಟಕದ ಮಾಜಿ ಅದ್ಯಕ್ಷ ಯಶವಂತ ಪೂಜಾರಿ ಪ್ರಸ್ತಾವನೆ ಮಾಡಿದರು. ನೂತನ ಕಾರ್ಯದರ್ಶಿ ಪ್ರವೀಣ್ ಸಾಲ್ಯಾನ್ ಕಿರೋಡಿ ಧನ್ಯವಾದ ನೀಡಿದರು. ರಾಕೇಶ್ ಕುಮಾರ್ ಹಾಗೂ ಜಯಕುಮಾರ್ ಕೊಲ್ಯ ಕಾರ್ಯಕ್ರಮ ನಿರ್ವಹಿಸಿದರು.

ಸಭಾ ಕಾರ್ಯಕ್ರಮದ ಮೊದಲು ಯುವವಾಹಿನಿ ಬಜಪೆ, ಯುವವಾಹಿನಿ ಕೊಲ್ಯ, ಯುವವಾಹಿನಿ ಕೂಳೂರು ಹಾಗೂ ಯುವವಾಹಿನಿ ಕಂಕನಾಡಿ ಘಟಕಗಳ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!