Yuvavahini

OCT 13, 2019 6.28 AM IST

ಯುವವಾಹಿನಿ (ರಿ) ಉಡುಪಿ ಘಟಕ

ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಉಡುಪಿ ಘಟಕದ ಆಶ್ರಯದಲ್ಲಿ “ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರಧಾನ ಸಮಾರಂಭ” ಯುವವಾಹಿನಿಯ ಸಭಾಂಗಣದಲ್ಲಿ ದಿನಾಂಕ 13/10/2019 ರಂದು ಜರಗಿತು.
ಜಾನಪದ ವಿದ್ವಾಂಸ ಪ್ರಶಸ್ತಿಯನ್ನು ಖ್ಯಾತ ಹಿರಿಯ ಲೇಖಕಿ ಯಶವಂತಿ ಎಸ್ ಸುವರ್ಣ, ನಕ್ರೆ ಹಾಗೂ ಜಾನಪದ ಕಲಾವಿದ ಪ್ರಶಸ್ತಿಯನ್ನು ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರ ಕಲಾವಿದ ಪಿ ಎನ್ ಅಚಾರ್ಯ ಕೊಡಂಕೂರು ಇವರಿಗೆ ಉಡುಪಿ ತುಳುಕೂಟದ ಗೌರವಾಧ್ಯಕ್ಷ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರು ಪ್ರಧಾನ ಮಾಡಿದರು. ಯುವವಾಹಿನಿಯ ನಿಕಟಪೂರ್ವ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್ ಮತ್ತು ಅಮಿತಾಂಜಲಿ ಕಿರಣ್ ರವರು ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು & ಸ್ನಾತಕೋತ್ತರ ಅದ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ದುಗ್ಗಪ್ಪ ಕಜೆಕಾರ್ ಅಭಿನಂದನಾ ಭಾಷಣ ಮಾಡಿ, ತುಳು ಭಾಷೆ ಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಸಂಘಟಿತ ಹೋರಾಟ ಅಗತ್ಯ ಎಂದರು.ನಾರಾಯಣ ಗುರು ಒಂದು ಜಾತಿಗೆ ಸೀಮಿತ ವಾಗಿಲ್ಲ, ಅವರು ಹಿಂದುಳಿದ ವರ್ಗದ ಗುರು, ಈ ಪ್ರಶಸ್ತಿಗೆ ಅರ್ಹರಾದವರನ್ನೆ ಆರಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು. ಬನ್ನಂಜೆ ಬಾಬು ಅಮೀನ್ ಮಾತನಾಡಿ ಕಳೆದ 9 ವರ್ಷಗಳಿಂದ ಈ ಪ್ರಶಸ್ತಿಯನ್ನು ದಾನಿಗಳ ನೆರವಿನಿಂದ ನಡೆಸಿಕೊಂಡು ಬರುತ್ತಿದ್ದೇವೆ, ಯುವವಾಹಿನಿಯ ಬಗ್ಗೆ ನನಗೆ ತುಂಬಾ ಒಳ್ಳೆಯ ಬಾಂಧವ್ಯ ಇದೆ, ಇನ್ನು ಮುಂದೆಯೂ ಯುವವಾಹಿನಿಯ ಮುಖಾಂತರ ಈ ಪ್ರಶಸ್ತಿ ಪ್ರಧಾನ ಸಮಾರಂಭ ನಿರಂತರವಾಗಿ ನಡೆಯಲಿ ಎಂದು ಆಶಿಸಿದರು.
ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾದ ಮುದ್ದು ಮುಡುಬೆಳ್ಳೆ ಪ್ರಸ್ತಾವಿಸಿ, ಯುವವಾಹಿನಿ ಆರಂಭದಿಂದಲೂ ಒಳ್ಳೆಯ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಎಂದರು. ಯುವವಾಹಿನಿಯ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಉದಯ ಅಮೀನ್ ಮಟ್ಟು ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರೂ,ಉಡುಪಿ ಘಟಕದ ಸಲಹೆಗಾರರಾದ ಸಂತೋಷ್ ಕುಮಾರ್ ಶುಭ ಹಾರೈಸಿದರು. ಉಡುಪಿ ಘಟಕಾಧ್ಯಕ್ಷರಾದ ಶ್ರೀ ನಾರಾಯಣ ಬಿ ಎಸ್ ಮಾತನಾಡಿ , ಬನ್ನಂಜೆಯವರು ತುಳು ಭಾಷೆ ಮತ್ತು ಜಾನಪದ ವಿದ್ವಾಂಸರಾಗಿದ್ದು ಅವರ ಹೆಸರಿನಲ್ಲಿ ಪ್ರಶಸ್ತಿಯನ್ನು ನಮ್ಮ ಯುವವಾಹಿನಿಯ ವತಿಯಿಂದ ಕೊಡಲು ತುಂಬಾ ಹೆಮ್ಮೆಯೆನಿಸುತ್ತದೆ ಎಂದರು. ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಗಣ್ಯರನ್ನು ಗುರುತಿಸಲಾಯಿತು.
ಸಮಾರಂಭದಲ್ಲಿ ರೂಬಿಕ್ ಆರ್ಟ್ ಮೂಲಕ ಬನ್ನಂಜೆ ಬಾಬು ಅಮೀನ್ ರವರ ಚಿತ್ರ ಮಾಡಿದ ಸದಸ್ಯರಾದ ಮಹೇಶ್‌ರವರನ್ನು ಸನ್ಮಾನಿಸಲಾಯಿತು. ಕೋಶಾಧಿಕಾರಿ ಭಾರತಿ ಭಾಸ್ಕರ ಸುವರ್ಣ, ಮಹಿಳಾ ಸಂಚಾಲಕಿ ಶಕುಂತಳಾ ಸುಕೇಶ್ ಉಪಸ್ಥಿತರಿದ್ದರು.ಮಾಜಿ
ಅಧ್ಯಕ್ಷರಾದ ಭಾಸ್ಕರ ಸುವರ್ಣ ಸ್ವಾಗತಿಸಿದರು.
ದಯಾನಂದ್ ಉಪ್ಪೂರು ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಮಹಾಬಲ ಅಮೀನ್ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!